ರಾಜಸ್ಥಾನ: ರಾಮ ಮಂದಿರ ನಿರ್ಮಾಣಕ್ಕೆ 1 ರೂಪಾಯಿ ಸಂಗ್ರಹ!
ಜೈಪುರ್, ಫೆಬ್ರವರಿ.03: ರಾಜಸ್ಥಾನದಲ್ಲಿ ಯುವ ಕಾಂಗ್ರೆಸ್ ಘಟಕ ಮತ್ತು ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು "ಶ್ರೀರಾಮನ ಹೆಸರಿನಲ್ಲಿ 1 ರೂಪಾಯಿ ಸಂಗ್ರಹ" ಅಭಿಯಾನ ನೆಡಸುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಿಂದ 1 ರೂಪಾಯಿ ಸಂಗ್ರಹಿಸಲಾಗುತ್ತಿದೆ.
ಜೈಪುರ್ ಕಾಲೇಜ್ ವೊಂದರಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ, ಶ್ರೀರಾಮನ ಹೆಸರಿನಲ್ಲಿ 1 ರೂ. ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು. ಬಿಜೆಪಿ ಮತ್ತು ಎಬಿವಿಪಿ ಸೇರಿಕೊಂಡು ದೇವಸ್ಥಾನ ನಿರ್ಮಾಣದ ಹೆಸರಿನಲ್ಲಿ ಜನರನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ಶ್ರೀರಾಮ ಮಂದಿರವು ನಂಬಿಕೆಗೆ ಸಂಬಂಧಿಸಿದ ವಿಷಯವಾಗಿದ್ದು, ದೇವಸ್ಥಾನ ಕಟ್ಟುವ ಹೆಸರಿನಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸುತ್ತಿರುವುದು ಸರಿಯಲ್ಲ. ಇದರ ವಿರುದ್ಧ ನಮ್ಮ ಅಭಿಯಾನ ಮುಂದಿನ 15 ದಿನಗಳವರೆಗೂ ನಡೆಯಲಿದೆ. ಒಬ್ಬರಿಂದ 1 ರೂಪಾಯಿಯಂತೆ ಸಂಗ್ರಹಿಸಿದ ಹಣವನ್ನು ರಾಮ ಮಂದಿರ ಟ್ರಸ್ಟ್ ಗೆ ನೀಡಲಾಗುತ್ತದೆ ಎಂದು ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ ತಿಳಿಸಿದ್ದಾರೆ.

ಎನ್ಎಸ್ ಯುಐ ಅಭಿಯಾನದ ಗುರಿ:
ಶ್ರೀರಾಮ ಮಂದಿರವು ಇಡೀ ಭಾರತಕ್ಕೆ ಸಂಬಂಧಿಸಿದ್ದಾಗಿದೆಯೇ ಹೊರತೂ ನಿರ್ದಿಷ್ಟ ಗುಂಪು ಅಥವಾ ಸಮುದಾಯಕ್ಕೆ ಸೇರಿದ್ದಲ್ಲ ಎಂಬುದನ್ನು ಸಾರುವ ಉದ್ದೇಶದಿಂದ ಶ್ರೀರಾಮನ ಹೆಸರಿನಲ್ಲಿ 1 ರೂಯ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ. ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಪ್ರತಿಯೊಬ್ಬ ಸದಸ್ಯರು ರಾಜ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳು, ಕಾಲೇಜುಗಳಿಗೆ ತೆರಳಿ ಹಣ ಸಂಗ್ರಹಿಸುತ್ತಾರೆ ಎಂದು ಅಭಿಷೇಕ್ ಚೌಧರಿ ತಿಳಿಸಿದರು.
ರಾಮ ಮಂದಿರಕ್ಕಾಗಿ ವಿಹೆಚ್ ಪಿ ನಿಧಿ ಸಂಗ್ರಹ:
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಕ್ಕಾಗಿ ವಿಶ್ವ ಹಿಂದೂ ಪರಿಷತ್ ಈಗಾಗಲೇ ನಿಧಿ ಸಂಗ್ರಹ ಅಭಿಯಾನವನ್ನು ಆರಂಭಿಸಿದೆ. ಜನವರಿ.15ರಿಂದ ಫೆಬ್ರವರಿ.27ರವರೆಗೂ 5.25 ಲಕ್ಷ ಗ್ರಾಮಗಳ 13 ಕೋಟಿ ಕುಟುಂಬಗಳ 65 ಕೋಟಿ ಹಿಂದೂಗಳನ್ನು ಭೇಟಿ ಮಾಡಿ ನಿಧಿ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಕಳೆದ ಆಗಸ್ಟ್.05ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications