ಮೋಹನ್ ಭಾಗವತ್ ಬೆಂಗಾವಲು ವಾಹನ ಡಿಕ್ಕಿ: ಬಾಲಕ ಸಾವು
ಜೈಪುರ, ಸೆಪ್ಟೆಂಬರ್ 11: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಬೆಂಗಾವಲು ವಾಹನವು ಡಿಕ್ಕಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ರಾಜಸ್ಥಾನದ ಬುಧವಾರ ಭಾಗವತ್ ಅವರ ಬೆಂಗಾವಲು ವಾಹನವು ಬೈಕ್ಒಂದಕ್ಕೆ ಡಿಕ್ಕಿ ಹೊಡೆದಿದೆ. ರಾಜಸ್ಥಾನದ ತಿಜಾರಾಕ್ಕೆ ತೆರಳಿದ್ದ ಭಾಗವತ್ ಅವರು ಅಲ್ಲಿಂದ ಮರಳುವ ವೇಳೆ ಹರ್ಸೋಲಿ ಮುಂದಾವರ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.
ಸ್ಥಳೀಯ ಸರಪಂಚ್ ಚೇತ್ರಮ್ ಯಾದವ್ ಎಂಬುವವರಿಗೆ ಸೇರಿದ ಬೈಕ್ಗೆ ಕಾರ್ ಡಿಕ್ಕಿ ಹೊಡೆದಿದೆ. ಯಾದವ್ ಅವರ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟಿದ್ದರೆ, ಯಾದವ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುಷ್ಕರ್ನಲ್ಲಿ ಆರೆಸ್ಸೆಸ್ನ ಮೂರು ದಿನಗಳ ಸಂಯೋಜನಾ ಸಭೆಯಲ್ಲಿ ಪಾಲ್ಗೊಳ್ಳಲು ಭಾಗವತ್ ಅವರು ರಾಜಸ್ಥಾನಕ್ಕೆ ತೆರಳಿದ್ದರು. ಇದರಲ್ಲಿ ಆರೆಸ್ಸೆಸ್ನ 35 ಘಟಕಗಳ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಲೋಕಸಭೆ ಚುನಾವಣೆ ನಡೆದ ಬಳಿಕ ನಡೆದ ಮೊದಲ ಸಭೆ ಇದಾಗಿದೆ.
ಕಳೆದ ಮೇ ತಿಂಗಳಿನಲ್ಲಿ ಭಾಗವತ್ ಅವರ ಬೆಂಗಾವಲು ವಾಹನವು ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ವರೋರಾ ಎಂಬಲ್ಲಿ ಪಲ್ಟಿಯಾಗಿತ್ತು. ರಸ್ತೆಯ ಮಧ್ಯಭಾಗದಲ್ಲಿ ನಿಂತಿದ್ದ ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಸಿಐಎಸ್ಎಫ್ನ ಒಬ್ಬ ಅಧಿಕಾರಿಗೆ ಗಾಯವಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications