ಸಚಿನ್ ಪೈಲೆಟ್ ಬಣದ ಇಬ್ಬರು ಶಾಸಕರ ಅಮಾನತು ವಾಪಸ್!
ಜೈಪುರ, ಆಗಸ್ಟ್ 13 : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಸಚಿನ್ ಪೈಲೆಟ್ ಬಣದ ಇಬ್ಬರು ಶಾಸಕರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆದಿದೆ. ಶುಕ್ರವಾರದಿಂದ ರಾಜಸ್ಥಾನ ವಿಧಾನಸಭೆ ಕಲಾಪ ಆರಂಭವಾಗುತ್ತಿದೆ.
ಶಾಸಕರಾದ ಬನ್ವಾರ್ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ರನ್ನು ಪಕ್ಷದಿಂದ ಅಮಾನತುಗೊಳಿಸಿ ಜುಲೈ 17ರಂದು ಅಮಾನತುಗೊಳಿಸಿ ಕಾಂಗ್ರೆಸ್ ಆದೇಶ ಹೊರಡಿಸಿತ್ತು. ವಿಧಾನಸಭೆ ಕಲಾಪ ಆರಭವಾಗುವ ಕೆಲವೇ ಗಂಟೆಗಳ ಮೊದಲು ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.
ಇಬ್ಬರು ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಟೇಪ್ ಬಹಿರಂಗವಾಗಿತ್ತು. ಶಾಸಕರು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಸಂಚು ರೂಪಿಸಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿತ್ತು.

ಈ ಇಬ್ಬರೂ ಶಾಸಕರು ರಾಜಸ್ಥಾನದ ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲೆಟ್ ಬಣದಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ ಕಾಂಗ್ರೆಸ್ನಲ್ಲಿನ ಬಿಕ್ಕಟ್ಟು ಈಗ ಬಗೆಹರಿಸಿದೆ. ಆದ್ದರಿಂದ, ಶಾಸಕರ ಅಮಾನತು ಆದೇಶ ವಾಪಸ್ ಆಗಿದೆ.
ಶುಕ್ರವಾರದಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷ ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದೆ. ಅಶೋಕ್ ಗೆಹ್ಲೋಟ್ ಸರ್ಕಾರ ವಿಶ್ವಾಸಮತ ಗೆಲ್ಲಲಿದೆಯೇ? ಕಾದು ನೋಡಬೇಕಿದೆ.
ಜುಲೈನಲ್ಲಿ ಸಚಿನ್ ಪೈಲೆಟ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದಿದ್ದರು. ಹೈಕಮಾಂಡ್ ಮಧ್ಯ ಪ್ರವೇಶದ ಬಳಿಕ ಬಂಡಾಯ ತಣ್ಣಗಾಗಿದೆ. ಕಾಂಗ್ರೆಸ್ ಸರ್ಕಾರದ ಜೊತೆ ಮುಂದುವರೆಯುವುದಾಗಿ ಸಚಿನ್ ಪೈಲೆಟ್ ಮತ್ತು ಇತರ 18 ಶಾಸಕರು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications