ಸಚಿನ್ ಪೈಲೆಟ್ ಬಣದ ಇಬ್ಬರು ಶಾಸಕರ ಅಮಾನತು ವಾಪಸ್!
ಜೈಪುರ, ಆಗಸ್ಟ್ 13 : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಸಚಿನ್ ಪೈಲೆಟ್ ಬಣದ ಇಬ್ಬರು ಶಾಸಕರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆದಿದೆ. ಶುಕ್ರವಾರದಿಂದ ರಾಜಸ್ಥಾನ ವಿಧಾನಸಭೆ ಕಲಾಪ ಆರಂಭವಾಗುತ್ತಿದೆ.
ಶಾಸಕರಾದ ಬನ್ವಾರ್ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ರನ್ನು ಪಕ್ಷದಿಂದ ಅಮಾನತುಗೊಳಿಸಿ ಜುಲೈ 17ರಂದು ಅಮಾನತುಗೊಳಿಸಿ ಕಾಂಗ್ರೆಸ್ ಆದೇಶ ಹೊರಡಿಸಿತ್ತು. ವಿಧಾನಸಭೆ ಕಲಾಪ ಆರಭವಾಗುವ ಕೆಲವೇ ಗಂಟೆಗಳ ಮೊದಲು ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.
ಇಬ್ಬರು ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಟೇಪ್ ಬಹಿರಂಗವಾಗಿತ್ತು. ಶಾಸಕರು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಸಂಚು ರೂಪಿಸಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಅಮಾನತು ಮಾಡಲಾಗಿತ್ತು.

ಈ ಇಬ್ಬರೂ ಶಾಸಕರು ರಾಜಸ್ಥಾನದ ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲೆಟ್ ಬಣದಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ ಕಾಂಗ್ರೆಸ್ನಲ್ಲಿನ ಬಿಕ್ಕಟ್ಟು ಈಗ ಬಗೆಹರಿಸಿದೆ. ಆದ್ದರಿಂದ, ಶಾಸಕರ ಅಮಾನತು ಆದೇಶ ವಾಪಸ್ ಆಗಿದೆ.
ಶುಕ್ರವಾರದಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಪ್ರತಿಪಕ್ಷ ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದೆ. ಅಶೋಕ್ ಗೆಹ್ಲೋಟ್ ಸರ್ಕಾರ ವಿಶ್ವಾಸಮತ ಗೆಲ್ಲಲಿದೆಯೇ? ಕಾದು ನೋಡಬೇಕಿದೆ.
ಜುಲೈನಲ್ಲಿ ಸಚಿನ್ ಪೈಲೆಟ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದಿದ್ದರು. ಹೈಕಮಾಂಡ್ ಮಧ್ಯ ಪ್ರವೇಶದ ಬಳಿಕ ಬಂಡಾಯ ತಣ್ಣಗಾಗಿದೆ. ಕಾಂಗ್ರೆಸ್ ಸರ್ಕಾರದ ಜೊತೆ ಮುಂದುವರೆಯುವುದಾಗಿ ಸಚಿನ್ ಪೈಲೆಟ್ ಮತ್ತು ಇತರ 18 ಶಾಸಕರು ತಿಳಿಸಿದ್ದಾರೆ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications