Get Updates
Get notified of breaking news, exclusive insights, and must-see stories!

ನನ್ನ ಮಗನ ಸೋಲಿಗೆ ಪೈಲಟ್ ಕಾರಣ: ಅಶೋಕ್ ಗೆಹ್ಲೋಟ್

ಜೈಪುರ, ಜೂನ್ 04: ರಾಜಸ್ಥಾನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ 25 ಸ್ಥಾನಗಳಲ್ಲೂ ಸೋಲನುಭವಿಸಿದ ನಂತರ ಕಾಂಗ್ರೆಸ್ ನಲ್ಲೇ ಜಟಾಪಟಿ ಆರಂಭವಾಗಿದೆ.

ಸೋಲಿಗೆ ಒಬ್ಬರನ್ನೊಬ್ಬರು ಬೊಟ್ಟುಮಾಡುವುದಕ್ಕೆ ಆರಂಭಿಸಿದ್ದು, ಇದು ಕಾಂಗ್ರೆಸ್ ಗೆ ಭಾರೀ ತಲೆನೋವಾಗಿ ಪರಿಣಮಿಸಿದೆ.

ಜೋಧಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವೈಭವ್ ಗೆಹ್ಲೋಟ್ ಅವರನ್ನು ಬಿಜೆಪಿಯ ಹಾಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ವಿರುದ್ಧ ಕಣಕ್ಕಿಳಿಸಲಾಗಿತ್ತು. ಆದರೆ ಅವರು ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಮತಗಳ ಭಾರೀ ಅಂತರದಿಂದ ಸೋಲನುಭವಿಸಿದ್ದರು.

Sachin Pilot is responsible for my sons defeat in Jodhpur: Ashok Gehlot

"ನನ್ನ ಮಗನನ್ನು ಜೋಧಪುರದಿಂದ ಚುನಾವಣೆಗೆ ನಿಲ್ಲಿಸುವ ಸಲಹೆ ನೀಡಿದ್ದೇ ಸಚಿನ್ ಪೈಲಟ್. ಅವರು ಭಾರೀ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನೂ ಪೈಲಟ್ ನೀಡಿದ್ದರು. ಆದರೆ ವೈಭವ್ ಸೋತಿರುವುದಕ್ಕೆ ಕಾರಣ ಸಚಿನ್ ಪೈಲಟ್. ನನ್ನ ಮಗನ ಸೋಲಿನ ಜವಾಬ್ದಾರಿಯನ್ನು ಸಚಿನ್ ಪೈಲಟ್ ಅವರೇ ಹೊತ್ತುಕೊಳ್ಳಬೇಕು ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಸೋಲಿನ ಹತಾಶೆಯಿಂದ ಹೊರಬರದ ಕಾಂಗ್ರೆಸ್ಸಿಗೆ, ತನ್ನ ಆಡಳಿತವಿರುವ ಕೆಲವೇ ಪ್ರಮುಖ ರಾಜ್ಯಗಳಲ್ಲೊಂದಾದ ರಾಜಸ್ಥಾನದಲ್ಲಿ ನಾಯಕರ ನಡುವಿನ ಅಸಮಾಧಾನ, ಭಿನ್ನಾಭಿಪ್ರಾಯವನ್ನು ತಹಬಂದಿಗೆ ತರುವುದೇ ಒಂದು ಸವಾಲಾಗಿ ಪರಿಣಮಿಸಿದೆ.

ಗೆಹ್ಲೋಟ್ ಪುತ್ರನನ್ನು ಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ ನಲ್ಲೇ ವಿರೋಧವಿತ್ತಾದರೂ, ಹಠ ಬಿಡದ ಗೆಹ್ಲೋಟ್ ಮಗನಿಗೆ ಟಿಕೆಟ್ ಗಿಟ್ಟಿಸಿಕೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+