Breaking: ಬಾಬಾ ರಾಮ್ದೇವ್ ಪತಂಜಲಿ ಡೈರೀಸ್ನ ಸಿಇಒ ಸುನಿಲ್ ಬನ್ಸಾಲ್ ಕೋವಿಡ್ಗೆ ಬಲಿ
ಜೈಪುರ, ಮೇ 24: ಕೊರೊನಾ ಸೋಂಕಿನಿಂದಾಗಿ ಯೋಗ ಗುರು ಬಾಬಾ ರಾಮ್ದೇವ್ರ ಪತಂಜಲಿ ಆಯುರ್ವೇದ ಡೈರಿ ಬ್ಯುಸಿನೆಸ್ ಸಿಇಒ ಸುನಿಲ್ ಬನ್ಸಾಲ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
57 ನೇ ವಯಸ್ಸಿನ ಸುನಿಲ್ ಬನ್ಸಾಲ್ರಿಗೆ ಕೊರೊನಾ ಕಾರಣದಿಂದಾಗಿ ಶ್ವಾಸಕೋಶಕ್ಕೆ ತೀವ್ರವಾದ ಹಾನಿ ಹಾಗೂ ಮೆದುಳಿನಲ್ಲಿ ರಕ್ತಸ್ರಾವವಾಗಿತ್ತು ಎಂದು ಹೇಳಲಾಗಿದೆ.
ಮೇ 19ರಂದು ಬನ್ಸಾಲ್ ನಿಧನರಾದರೂ ರಾಮದೇವ್ ಅಲೋಪತಿ ಔಷಧಿಗಳು ಮತ್ತು ಕೋವಿಡ್ ಬಗ್ಗೆ ನೀಡಿದ ಹೇಳಿಕೆಗಳ ವಿವಾದದ ಹಿನ್ನೆಲೆ ಈಗ ಬನ್ಸಾಲ್ ಸಾವು ಮುಂಚೂಣಿಗೆ ಬಂದಿದೆ.

ಅಲೋಪತಿ ಔಷಧ ಸೇವಿಸಿದ ಲಕ್ಷಾಂತರ ಜನರು ಮೃತಪಟ್ಟಿದ್ದಾರೆ. ಡಿಸಿಜಿಐ ಅನುಮೋದನೆ ನೀಡಿರುವ ಔಷಧಗಳಾದ ಫ್ಯಾವಿಫ್ಲೂ ಸೇರಿದಂತೆ ಇತರೆ ಔಷಧಗಳು ಕೊರೊನಾ ಚಿಕಿತ್ಸೆ ನೀಡುವಲ್ಲಿ ವಿಫಲವಾಗಿದೆ ಎಂಬ ಬಾಬಾ ರಾಮ್ ದೇವ್ ಹೇಳಿಕೆ ನೀಡಿದ್ದು ಇದು ವ್ಯಾಪಕ ಟೀಕೆಗೆ ಒಳಗಾಗಿತ್ತು.
ಡೈರಿ ವಿಜ್ಞಾನದಲ್ಲಿ ತಜ್ಞರಾದ ಬನ್ಸಾಲ್, 2018ರಲ್ಲಿ ಪತಂಜಲಿಯ ಡೈರಿ ವ್ಯವಹಾರದ ಉಸ್ತುವಾರಿ ವಹಿಸಿಕೊಂಡರು. ಹಸುವಿನ ಹಾಲು, ಮೊಸರು, ಮಜ್ಜಿಗೆ ಮೊದಲಾದ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಯೋಜನೆಯನ್ನು ಕಂಪನಿಯು ಪ್ರಕಟಿಸಿತ್ತು.
ಇನ್ನು ಬನ್ಸಾಲ್ ಕಳೆದ ಕೆಲವು ದಿನಗಳಿಂದ ಇಸಿಎಂಒ (Extracorporeal Membrane Oxygenation machines) ನಲ್ಲಿದ್ದರು ಎಂದು ಸ್ನೇಹಿತರು ಹೇಳಿದ್ದಾರೆ. ಹೃದಯ ಮತ್ತು ಶ್ವಾಸಕೋಶದ ವೈಫಲ್ಯದ ಸಮಯದಲ್ಲಿ ಇಸಿಎಂಒನಲ್ಲಿ ರೋಗಿಯನ್ನು ಇರಿಸಲಾಗುತ್ತದೆ.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications