just in: ಕಳ್ಳನೆಂದು ತರಕಾರಿ ವ್ಯಾಪಾರಿಯನ್ನು ಹೊಡೆದು ಕೊಂದ ಜನ
ಜೈಪುರ, ಆಗಸ್ಟ್ 16: ರಾಜಸ್ಥಾನದ ಅಲ್ವಾರ್ನಲ್ಲಿ ಸೋಮವಾರ ಕಳ್ಳನೆಂದು ತಪ್ಪಾಗಿ ಭಾವಿಸಿ ತರಕಾರಿ ವ್ಯಾಪಾರಿಯೊಬ್ಬರನ್ನು ಜನರ ಗುಂಪು ಥಳಿಸಿತ್ತು. ಗಾಯಗೊಂಡು ಜೈಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋವಿಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ವಾರ್ ಜಿಲ್ಲೆಯ ರಾಂಬಾಸ್ ಗ್ರಾಮದಲ್ಲಿ ಘಟನೆ ನಡೆದಿತ್ತು. ಮೃತ ವ್ಯಕ್ತಿಯನ್ನು 45 ವರ್ಷದ ಚಿರಂಜಿ ಸೈನಿ ಎಂದು ಗುರುತಿಸಲಾಗಿದೆ. ತರಕಾರಿ ಮಾರಾಟಗಾರನಾಗಿದ್ದ ಇವರನ್ನು ಕಳ್ಳನೆಂದು ತಪ್ಪಾಗಿ ಭಾವಿಸಿ ಥಳಿಸಲಾಗಿತ್ತು.
ಚಿರಂಜಿ ಸೈನಿ ತಮ್ಮ ಜಮೀನಿನಿಂದ ಮನೆಗೆ ಹೋಗುತ್ತಿದ್ದಾಗ ಹತ್ತಕ್ಕೂ ಹೆಚ್ಚು ಜನರು ಥಳಿಸಿದ್ದಾರೆ. ಊರಿನಲ್ಲಿ ಟ್ರ್ಯಾಕ್ಟರ್ ಕಳ್ಳತನವಾಗಿತ್ತು. ಖಚಿತ ಮಾಹಿತಿ ಮೇರೆಗೆ ಸದರ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಟ್ರ್ಯಾಕ್ಟರ್ ಮಾಲೀಕರು ಕಳ್ಳರ ಬೆನ್ನಟ್ಟಿದ್ದಾರೆ. ಪೊಲೀಸರು ಸುತ್ತುವರಿದಿರುವುದನ್ನು ಕಂಡ ಕಳ್ಳರು ಪವರ್ಹೌಸ್ ಬಳಿಯ ಜಮೀನಿನಲ್ಲಿ ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ.

ಅದೇ ಸ್ಥಳದಿಂದ ಮನೆಗೆ ಹೋಗುತ್ತಿದ್ದ ತರಕಾರಿ ವ್ಯಾಪಾರಿ ಸೈನಿಯನ್ನು ಕಳ್ಳ ಎಂದು ಭಾವಿಸಿ ಟ್ರ್ಯಾಕ್ಟರ್ ಮಾಲೀಕರು ಮತ್ತು ಅವನ ಸಹಚರರು ಗಂಭೀರವಾಗಿ ಥಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ ಗಾಯಾಳುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಜೈಪುರ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಮೃತ ಚಿರಂಜಿ ಸೈನಿ ಯವರು ತರಕಾರಿ ಗಾಡಿ ಹಾಕಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಸಾವಿನ ಸುದ್ದಿ ಕೇಳಿ ಆಕ್ರೋಶಗೊಂಡ ಜನರು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಘೇರಾವ್ ಹಾಕಿದರು. ಅಲ್ಲದೆ, ಕುಟುಂಬಕ್ಕೆ ನಷ್ಟ ಭರಿಸಲು ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಮೃತನ ಪುತ್ರ ಯೋಗೇಶ್ ಸೈನಿ ಗೋವಿಂದಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನ್ನ ತಂದೆಯ ಸಾವಿಗೆ ವಿಕ್ರಮ್ ಸೇರಿದಂತೆ ಟ್ರ್ಯಾಕ್ಟರ್ ಮಾಲೀಕನೇ ಕಾರಣ ಎಂದು ಆರೋಪಿಸಿದ್ದಾರೆ ಈ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications