ನರೇಂದ್ರ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ ಎಂದ ಬಾಬಾ ರಾಮ್ ದೇವ್
ಜೈಪುರ್ (ರಾಜಸ್ತಾನ್), ಏಪ್ರಿಲ್ 16: ಪ್ರಧಾನಿ ನರೇಂದ್ರ ಮೋದಿ ಮಾತ್ರ ದೇಶವನ್ನು ರಕ್ಷಿಸಲು ಸಾಧ್ಯ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೇ ಮತ ಹಾಕಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಮಂಗಳವಾರ ಹೇಳಿದ್ದಾರೆ.
ಇನ್ನು ಇಪ್ಪತ್ತು-ಇಪ್ಪತ್ತೈದು ವರ್ಷದಲ್ಲಿ ಭಾರತವನ್ನು ವಿಶ್ವದ ಆರ್ಥಿಕ ಹಾಗೂ ರಾಜಕೀಯದ ಸೂಪರ್ ಪವರ್ ಮಾಡಲು ನಾಅವು ಮೋದಿಯನ್ನು ಬಲಪಡಿಸಬೇಕು. ಅವರ ಕೈಯಲ್ಲಿ ದೇಶವು ಸುರಕ್ಷಿತವಾಗಿರುತ್ತದೆ. ನಮ್ಮ ಯೋಧರ ಭವಿಷ್ಯ ಸುರಕ್ಷಿತ, ಹೆಣ್ಣುಮಕ್ಕಳ ಗೌರವ, ಮರ್ಯಾದೆ ಸುರಕ್ಷಿತ ಹಾಗೂ ರೈತರ ಕೃಷಿ ಜಮೀನು ಸುರಕ್ಷಿತ ಎಂದು ಅವರು ಹೇಳಿದ್ದಾರೆ.
ಜೈಪುರ್ ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿರುವ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ಬೆಂಬಲಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಇದು ಒಬ್ಬ ವ್ಯಕ್ತಿಯ ವಿಚಾರವಲ್ಲ. ಭಾರತ ಮಾತೆಯ ಹೆಮ್ಮೆಯಾದ ಮೋದಿಯ ನಡತೆ ಹಾಗೂ ವ್ಯಕ್ತಿತ್ವದ ವಿಚಾರ ಎಂದಿದ್ದಾರೆ.

ಬರೀ ಗಡಿ ರಕ್ಷಣೆ ಮಾಡುವುದಲ್ಲ, ಇಡೀ ದೇಶದ ರಕ್ಷಣೆ ಮಾಡುವ ಬಗ್ಗೆ ಮೋದಿ ಮಾತ್ರ ಖಾತ್ರಿ ನೀಡಬಲ್ಲರು ಎಂದು ರಾಮ್ ದೇವ್ ಹೇಳಿದ್ದಾರೆ.
ರಾಜ್ಯವರ್ಧನ್ ಸಿಂಗ್ ರಾಥೋಡ್ ಮಾತನಾಡಿ, ಕಾಂಗ್ರೆಸ್ ಈಗ 'ನ್ಯಾಯ್' ಮತ್ತು ಈಗ ನ್ಯಾಯ ಆಗಲಿದೆ ಎಂದು ಮಾತನಾಡುತ್ತಿದೆ. ಹಾಗಿದ್ದರೆ ಅದು ಈವರೆಗೆ ಸಾಧಿಸಿದ್ದೇನು ಎಂದು ಪ್ರಶ್ನಿಸಿದರು. ಈಗ ಅವರನ್ನು ಶಿಕ್ಷಿಸುವ ಸಮಯ. ಪ್ರತಿ ಬೂತ್ ನಲ್ಲಿ ನ್ಯಾಯ್ ಆಗುತ್ತದೆ ಮತ್ತು ಅದು ಸಾರ್ವಜನಿಕವಾಗಿ ಕೊಡಲ್ಪಡುತ್ತದೆ ಎಂದು ಪರೋಕ್ಷವಾಗಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications