ನರೇಂದ್ರ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ ಎಂದ ಬಾಬಾ ರಾಮ್ ದೇವ್
ಜೈಪುರ್ (ರಾಜಸ್ತಾನ್), ಏಪ್ರಿಲ್ 16: ಪ್ರಧಾನಿ ನರೇಂದ್ರ ಮೋದಿ ಮಾತ್ರ ದೇಶವನ್ನು ರಕ್ಷಿಸಲು ಸಾಧ್ಯ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೇ ಮತ ಹಾಕಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಮಂಗಳವಾರ ಹೇಳಿದ್ದಾರೆ.
ಇನ್ನು ಇಪ್ಪತ್ತು-ಇಪ್ಪತ್ತೈದು ವರ್ಷದಲ್ಲಿ ಭಾರತವನ್ನು ವಿಶ್ವದ ಆರ್ಥಿಕ ಹಾಗೂ ರಾಜಕೀಯದ ಸೂಪರ್ ಪವರ್ ಮಾಡಲು ನಾಅವು ಮೋದಿಯನ್ನು ಬಲಪಡಿಸಬೇಕು. ಅವರ ಕೈಯಲ್ಲಿ ದೇಶವು ಸುರಕ್ಷಿತವಾಗಿರುತ್ತದೆ. ನಮ್ಮ ಯೋಧರ ಭವಿಷ್ಯ ಸುರಕ್ಷಿತ, ಹೆಣ್ಣುಮಕ್ಕಳ ಗೌರವ, ಮರ್ಯಾದೆ ಸುರಕ್ಷಿತ ಹಾಗೂ ರೈತರ ಕೃಷಿ ಜಮೀನು ಸುರಕ್ಷಿತ ಎಂದು ಅವರು ಹೇಳಿದ್ದಾರೆ.
ಜೈಪುರ್ ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿರುವ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ಬೆಂಬಲಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಇದು ಒಬ್ಬ ವ್ಯಕ್ತಿಯ ವಿಚಾರವಲ್ಲ. ಭಾರತ ಮಾತೆಯ ಹೆಮ್ಮೆಯಾದ ಮೋದಿಯ ನಡತೆ ಹಾಗೂ ವ್ಯಕ್ತಿತ್ವದ ವಿಚಾರ ಎಂದಿದ್ದಾರೆ.

ಬರೀ ಗಡಿ ರಕ್ಷಣೆ ಮಾಡುವುದಲ್ಲ, ಇಡೀ ದೇಶದ ರಕ್ಷಣೆ ಮಾಡುವ ಬಗ್ಗೆ ಮೋದಿ ಮಾತ್ರ ಖಾತ್ರಿ ನೀಡಬಲ್ಲರು ಎಂದು ರಾಮ್ ದೇವ್ ಹೇಳಿದ್ದಾರೆ.
ರಾಜ್ಯವರ್ಧನ್ ಸಿಂಗ್ ರಾಥೋಡ್ ಮಾತನಾಡಿ, ಕಾಂಗ್ರೆಸ್ ಈಗ 'ನ್ಯಾಯ್' ಮತ್ತು ಈಗ ನ್ಯಾಯ ಆಗಲಿದೆ ಎಂದು ಮಾತನಾಡುತ್ತಿದೆ. ಹಾಗಿದ್ದರೆ ಅದು ಈವರೆಗೆ ಸಾಧಿಸಿದ್ದೇನು ಎಂದು ಪ್ರಶ್ನಿಸಿದರು. ಈಗ ಅವರನ್ನು ಶಿಕ್ಷಿಸುವ ಸಮಯ. ಪ್ರತಿ ಬೂತ್ ನಲ್ಲಿ ನ್ಯಾಯ್ ಆಗುತ್ತದೆ ಮತ್ತು ಅದು ಸಾರ್ವಜನಿಕವಾಗಿ ಕೊಡಲ್ಪಡುತ್ತದೆ ಎಂದು ಪರೋಕ್ಷವಾಗಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications