ನೀರಿಗಾಗಿ ಹಾಹಾಕಾರ; ಕಳ್ಳತನ ತಪ್ಪಿಸಲು ಬೀಗ ಜಡಿದ ಜನರು!
ಜೈಪುರ, ಜೂನ್ 11; ಅಚ್ಚರಿಯಾದರೂ ಇದು ಸತ್ಯ. ನೀರಿನ ಕಳ್ಳತನ ತಪ್ಪಿಸಲು ಜನರು ನೀರು ಸಂಗ್ರಹ ಮಾಡಿದ ಡ್ರಂಗಳಿಗೆ ಬೀಗ ಜಡಿದಿದ್ದಾರೆ. ಗ್ರಾಮದಲ್ಲಿ ನೀರಿನ ಸಮಸ್ಯೆ ಯಾವ ಮಟ್ಟಕ್ಕೆ ತಲುಪಿದೆ ಎಂಬುದನ್ನು ಇದರಿಂದಲೇ ಊಹಿಸಬಹುದಾಗಿದೆ.
ರಾಜಸ್ಥಾನ ರಾಜ್ಯದ ಅಜ್ಮೀರ್ ಗ್ರಾಮೀಣ ಪ್ರದೇಶದ ಜನರು ನೀರಿಗಾಗಿ ಪರದಾಟ ನಡೆಸುತ್ತಿದ್ದಾರೆ. ಕಷ್ಟಪಟ್ಟು ಸಂಗ್ರಹ ಮಾಡಿರುವ ನೀರನ್ನು ಸಹ ಕಳ್ಳತನ ಮಾಡುವುದರಿಂದ ಡ್ರಂಗಳಿಗೆ ಬೀಗ ಹಾಕಿದ್ದಾರೆ.
"12 ವರ್ಷಗಳಿಂದ ನಾವು ನೀರಿನ ಸಮಸ್ಯೆ ಎದುರಿಸುತ್ತಿದ್ದೇವೆ. ಎರಡು ದಿನಕ್ಕೊಮ್ಮೆ ಟ್ಯಾಂಕರ್ ಮೂಲಕ ನೀರು ಬರುತ್ತದೆ. ಸಂಗ್ರಹವಾದ ನೀರನ್ನು ಕಳ್ಳತನ ಮಾಡದಿರಲಿ ಎಂದು ನಾವು ಬೀಗ ಹಾಕುತ್ತೇವೆ" ಎಂದು ಮಹಿಳೆಯೊಬ್ಬರು ಹೇಳಿದ್ದಾರೆ.

ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಇದೆ ಎಂಬುದನ್ನು ಅಧಿಕಾರಿಗಳು ಸಹ ಒಪ್ಪಿಕೊಳ್ಳುತ್ತಾರೆ. "48 ರಿಂದ 72 ಗಂಟೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಕೆಲವು ಗ್ರಾಮಗಳಿಗೆ 72 ಗಂಟೆಗಳ ಕಾಲ ನೀರು ಪೂರೈಕೆ ಆಗುವುದಿಲ್ಲ" ಎಂದು ಅಧಿಕಾರಿಗಳು ಹೇಳಿದ್ದಾರೆ.
Rajasthan: Residents of Ajmer's rural area put lock on their water containers in view of water crisis
— ANI (@ANI) June 10, 2021
"We are facing this issue for past 12yrs. Water tanker comes here after every 2 days. We store water & put lock on it so it doesn't get polluted or stolen, said a local (10.06) pic.twitter.com/QW2IXI8vme
"ವಿದ್ಯುತ್ ಸಮಸ್ಯೆ, ಪೈಪ್ ಲೈನ್ ಸಮಸ್ಯೆಯ ಕಾರಣ ಕೆಲವು ಬಾರಿ ಗ್ರಾಮಗಳಿಗೆ ನೀರನ್ನು ಪೂರೈಕೆ ಮಾಡುವುದು ತಡವಾಗುತ್ತದೆ" ಎಂದು ಇಂಜಿನಿಯರಿಂಗ್ ವಿಭಾಗದ ಸೂಪರಿಟೆಂಡೆಟ್ ಹೇಳಿದ್ದಾರೆ.
ಸ್ಥಳೀಯ ಆಡಳಿತ ಅಜ್ಮೀರ್ನ 586 ಗ್ರಾಮಗಳನ್ನು ನೀರಿನ ಕೊರತೆ ಇರುವ ಗ್ರಾಮ ಎಂದು ಗುರುತಿಸಿದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕವೇ ನೀರನ್ನು ಸರಬರಾಜು ಮಾಡಲಾಗುತ್ತದೆ. ಪಂಚಾಯಿತಿ ಮಟ್ಟದಲ್ಲಿ ಸಹ ನೀರನ್ನು ಹೊಂದಿಸಿಕೊಳ್ಳಲು ಸಾಧ್ಯವಿಲ್ಲದ ಕಾರಣ ಟ್ಯಾಂಕರ್ ಮೂಲಕ ಸರಬರಾಜು ಮಾಡುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನರು ನೀರನ್ನು ಕಾಪಾಡಿಕೊಳ್ಳಲು ಬೀಗ ಹಾಕುವುದು ಇದೇ ಮೊದಲಲ್ಲ. ಹಲವು ವರ್ಷಗಳಿಂದ ಹೀಗೆಯೇ ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಇದ್ದಾಗ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಸ್ಥಿತಿ ಅವಲೋಕನ ಮಾಡುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ನೀರಿನ ಕೊರತೆ ಇರುವುದರಿಂದ ಗ್ರಾಮೀಣ ಭಾಗದ ಜನರು ಸರ್ಕಾರ ಪೂರೈಕೆ ಮಾಡುವ ಟ್ಯಾಂಕರ್ ನೀರನ್ನು ಅವಲಂಬಿಸುವುದು ಅನಿವಾರ್ಯವಾಗಿದೆ. ಕಷ್ಟಪಟ್ಟು ಸಂಗ್ರಹಿಸಿದ ನೀರು ಕಳ್ಳರ ಪಾಲಾಗದಿರಲಿ ಎಂದು ಡ್ರಂಗೆ ಬೀಗ ಹಾಕುತ್ತಾರೆ.
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications