ರಾಜಸ್ಥಾನ: ವಸುಂಧರಾ ರಾಜೇ ಮುಂದೆ ಮಂಡಿಯೂರಿದ ಬಿಜೆಪಿ ಹೈಕಮಾಂಡ್
ಜೈಪುರ, ಆ 11: ಬಂಡಾಯ ನಾಯಕನಾಗಿದ್ದ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರ ಬಲ ಬಿಜೆಪಿಗೆ ಸಿಕ್ಕಿದ್ದರೂ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಸಪೋರ್ಟ್, ಬಿಜೆಪಿಗೆ ಸಿಗದಿದ್ದರೆ, ಅಲ್ಲಿ, ಸರಕಾರ ರಚಿಸುವ ಕನಸು, ನನಸಾಗುವುದಿಲ್ಲ ಎನ್ನುವ ಮಾತು ಬಿಜೆಪಿ ವಲಯದಲ್ಲೇ ಕೇಳಿಬರುತ್ತಿತ್ತು.
ರಾಜಸ್ಥಾನದಲ್ಲಿ ನಡೆಯುತ್ತಿದ್ದ ಎಲ್ಲಾ ಬೆಳವಣಿಗೆಗಳ ಬಗ್ಗೆ ದಿವ್ಯಮೌನಕ್ಕೆ ಶರಣಾಗಿದ್ದ ವಸುಂಧರಾ, ಎರಡು ದಿನಗಳ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದರು. ಇದರ ಜೊತೆಗೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನೂ ಭೇಟಿಯಾಗಿದ್ದರು.
ಬಂಡಾಯ ಎದ್ದಾಗಿನಿಂದ ತಮ್ಮ ಪಕ್ಷದ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದರೂ, ತಲೆಕೆಡಿಸಿಕೊಳ್ಳದಿದ್ದ ಸಚಿನ್ ಪೈಲಟ್, ಸೋಮವಾರ (ಆ 10) ರಾಹುಲ್ ಮತ್ತು ಪ್ರಿಯಾಂಕ ಗಾಂಧಿಯವರನ್ನು ಭೇಟಿಯಾಗಿದ್ದಾರೆ.
ಸದ್ಯದ ಮಟ್ಟಿಗೆ ಪೈಲಟ್ ಅವರ ಕೋಪ ಶಮನವಾದಂತೆ ಕಾಣುತ್ತಿದ್ದರೂ, ವಸುಂಧರಾ ಅವರ ಕಠಿಣ ನಿಲುವಿನಿಂದಾಗಿ, ಬಿಜೆಪಿ, ತಮ್ಮ ಸರಕಾರ ರಚಿಸುವ ಪ್ರಯತ್ನಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿದ್ದೇ ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ವಸುಂಧರಾ ದೆಹಲಿ ಭೇಟಿ
ಬಿಜೆಪಿಯ ಪ್ರಮುಖರ ಜೊತೆ ಸತತ ಸಂಪರ್ಕದಲ್ಲಿದ್ದ ಸಚಿನ್ ಪೈಲಟ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಗುವ ಬಗ್ಗೆ ಯಾವುದೇ ಖಚಿತ ಭರವಸೆ ಸಿಕ್ಕಿರಲಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ. ಯಾಕೆಂದರೆ, ವಸುಂಧರಾ ರಾಜೇ, ಬಂಡಾಯ ಏಳುವ ಭಯ, ಬಿಜೆಪಿ ಹೈಕಮಾಂಡ್ ಗೆ ಕಾಡುತ್ತಿತ್ತು. ತಮ್ಮ ದೆಹಲಿ ಭೇಟಿಯ ವೇಳೆ, ವಸುಂಧರಾ, ಈ ವಿಚಾರದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು ಎಂದು ಹೇಳಲಾಗುತ್ತಿದೆ.

ಬಿಜೆಪಿ ಸೇರುವುದಿಲ್ಲಎನ್ನುವ ಹೇಳಿಕೆ - ಸಚಿನ್ ಪೈಲಟ್
ಬಿಜೆಪಿಯಿಂದ ಸಿಎಂ ಹುದ್ದೆಯ ಭರವಸೆ ಸಿಗದ ನಂತರವಷ್ಟೇ, 'ಬಿಜೆಪಿ ಸೇರುವುದಿಲ್ಲ'ಎನ್ನುವ ಹೇಳಿಕೆ ಸಚಿನ್ ಪೈಲಟ್ ಕಡೆಯಿಂದ ಬಂತು ಎಂದು ವ್ಯಾಖ್ಯಾನಿಸಲಾಗುತ್ತಿದೆ. "ಸಚಿನ್ ಪೈಲಟ್ ನೇತೃತ್ವದಲ್ಲಿ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸಲಾಗುವುದು" ಎನ್ನುವ ಹೇಳಿಕೆ ಸಚಿನ್ ಪೈಲಟ್ ಬೆಂಬಲಿಗರಿಂದ ಬಂದಿತ್ತು.

ಗೆಹ್ಲೋಟ್ ಜೊತೆಗೆ, ವಸುಂಧರಾ ರಾಜೇ ಮೃದು ಧೋರಣೆ
ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಜೊತೆಗೆ, ವಸುಂಧರಾ ರಾಜೇ ಮೃದು ಧೋರಣೆ ತಾಳಿರುವ ವಿಚಾರದ ಬಗ್ಗೆ ಹಿಂದೆಯೂ ಸುದ್ದಿ ಹರಿದಾಡುತ್ತಿತ್ತು. ಇದರ ಜೊತೆಗೆ, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಜೊತೆಗೂ, ವಸುಂಧರಾ ಭಿನ್ನಾಭಿಪ್ರಾಯವನ್ನು ಹೊಂದಿದ್ದರು. ಅಲ್ಲದೇ, ಗೆಹ್ಲೋಟ್ ಸರಕಾರ ಉರುಳಿಸುವ ಕೆಲಸಕ್ಕೆ ನನ್ನ ಬೆಂಬಲವಿಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ವಸುಂಧರಾ, ಬಿಜೆಪಿ ಹೈಕಮಾಂಡ್ ಗೆ ಸ್ಪಷ್ಟ ಪಡಿಸಿದ್ದರು.

ಲೋಕತಾಂತ್ರಿಕ ಪಕ್ಷದ ಸಂಸದ ಹನುಮಾನ್ ಬೇನಿವಾಲ್
ಸಚಿನ್ ಪೈಲಟ್, ಪಕ್ಷದಲ್ಲಿ ತಮಗೆ ಪ್ರಬಲ ಪ್ರತಿಸ್ಪರ್ಧಿಯಾಗಬಲ್ಲ ಎನ್ನುವ ಮುಂದಾಲೋಚನೆಯಿಂದ, ವಸುಂಧರಾ, ಬಿಜೆಪಿಯ ಸರಕಾರ ರಚಿಸುವ ಪ್ರಯತ್ನಕ್ಕೆ ಬೆಂಬಲ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ. ಬಿಜೆಪಿಯ ಮಿತ್ರಪಕ್ಷ ಲೋಕತಾಂತ್ರಿಕ ಪಕ್ಷದ ಸಂಸದ ಹನುಮಾನ್ ಬೇನಿವಾಲ್, "ರಾಜಸ್ಥಾನದ ಕಾಂಗ್ರೆಸ್ಸಿನ ಜಾಟ್ ಸಮದಾಯದ ಪ್ರತೀ ಶಾಸಕರ ಬಳಿ ಮಾತನಾಡಿ, ಗೆಹ್ಲೋಟ್ ಅವರನ್ನು ಬೆಂಬಲಿಸುವಂತೆ ವಸುಂಧರಾ ರಾಜೇ ಮನವಿ ಮಾಡಿದ್ದಾರೆ". ಎಂದು ಟ್ವೀಟ್ ಮಾಡಿದ್ದಾರು.

ಕಾಂಗ್ರೆಸ್ಸಿನ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ
ಕಾಂಗ್ರೆಸ್ಸಿನ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ ಎಂದು ಬಿಜೆಪಿ ಹೇಳುತ್ತಿದ್ದರೂ, ಮಾಜಿ ಸಿಎಂ ವಸುಂಧರಾ ರಾಜೇ ಅವರ ಅಸಹಕಾರದಿಂದ, ಬಿಜೆಪಿ, ಸರಕಾರ ರಚಿಸುವ ಪ್ರಯತ್ನದಿಂದ ಹಿಂದಕ್ಕೆ ಸರಿದಿದೆ ಎಂದು ಹೇಳಲಾಗುತ್ತಿದೆ. ಸದ್ಯದ ಮಟ್ಟಿಗೆ, ವಸುಂಧರಾ ಕಠಿಣ ನಿಲುವಿನ ಮುಂದೆ, ಬಿಜೆಪಿ ಹೈಕಮಾಂಡ್ ತಣ್ಣಗಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications