ದಲಿತ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವೆಸಗಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ
ಕರೌಲಿ, ಮೇ 01: ದಲಿತ ಅಪ್ರಾಪ್ತೆ ಬಾಲಕಿಯನ್ನು ಕಿಡ್ನಾಪ್ ಮಾಡಿ ಬಸ್ನಲ್ಲಿ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಆರೋಪಿ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕರೌಲಿಯ ಪೋಕ್ಸೊ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಶನಿವಾರ ಕಾಮುಕನ ವಿರುದ್ಧ ತೀರ್ಪು ನೀಡಿದ್ದಾರೆ.
ಆರೋಪಿ ನರೇಂದ್ರ ಸಿಂಗ್ ಅಲಿಯಾಸ್ ಭೀಮ ಎಂಬಾತ ಅಪ್ರಾಪ್ತೆಯನ್ನು ಅಪರಿಸಿಕೊಂಡು ಅವಳ ಮೇಲೆ ಅತ್ಯಾಚಾರ ಮಾಡಿದ್ದನು. ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ 30 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ದಂಡದ ಮೊತ್ತದಲ್ಲಿ ಸಂತ್ರಸ್ತರಿಗೆ 1 ಲಕ್ಷ ರೂ. ಹಾಗೂ ಸರ್ಕಾರಿ ಖಜಾನೆಗೆ 30 ಸಾವಿರ ರೂ. ನೀಡಬೇಕೆಂದು ತೀರ್ಪು ನೀಡಿರುವ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಅವರು ಕೇವಲ 13 ತಿಂಗಳ ಅವಧಿಯಲ್ಲಿ ಸಂತ್ರಸ್ತೆಯಾದ ಬಾಲಕಿಗೆ ನ್ಯಾಯ ಒದಗಿಸುವ ಮೂಲಕ ಅತ್ಯಾಚಾರಿಗಳಿಗೆ ನಿಜವಾದ ಸಂದೇಶ ನೀಡುವ ಮೂಲಕ ನ್ಯಾಯಾಲಯ ಮಾದರಿಯಾಗಿದೆ.
15 ವರ್ಷದ ಬಾಲಕಿ ತನ್ನ ಹಳೆಯ ಮನೆಯಿಂದ ತಮ್ಮ ಹೊಸ ಮನೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ವೇಳೆ ಆರೋಪಿ ನರೇಂದ್ರ ಸಿಂಗ್ ಅಲಿಯಾಸ್ ಭೀಮ ಮಾಳಿ ಎಂಬಾತನು ಮೂಲತಃ ಕೇಶ್ವಾಪುರ ಮತ್ತು ಹಾಲ್ ಎಂಐಎಸ್ ಶಾಲೆ ಬಳಿಯ ತೇಲಿಯ ಪನ್ಸೇರಿ ರಸ್ತೆಯ ನಿವಾಸಿಯಾದ್ದ ಇವನು ಅಪ್ರಾಪ್ತೆ ಬಾಲಕಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಬಸ್ಸಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಕಳೆದ ವರ್ಷ ಮಾರ್ಚ್ 13ರಂದು ಬಾಲಕಿ ತಂದೆ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆ ಮತ್ತು ಎಸ್ಸಿಎಸ್ಟಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾದ ಈ ದೂರನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದ ಪೋಲಿಸರು ಮೇ 25ರಂದು ಆರೋಪಿಯನ್ನು ಬಂಧಿಸಿದ್ದಾರೆ. ಎರಡು ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ಅಂದಿನಿಂದ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದ ಈ ಆರೋಪಿಯನ್ನು ಶನಿವಾರ ಕರೌಲಿ ನ್ಯಾಯಾಲಯವು ವಿಚಾರಣೆಯ ಬಳಿಕ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.

ಪೊಲೀಸರು ಜೂನ್ನಲ್ಲಿ ಆರೋಪಪಟ್ಟಿ ಸಲ್ಲಿಸಿದ ನಂತರ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಪರವಾಗಿ 16 ಸಾಕ್ಷಿಗಳು ಮತ್ತು 21 ದಾಖಲೆಗಳನ್ನು ಸಾಕ್ಷ್ಯವಾಗಿ ಸಲ್ಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದರು. ಪೋಕ್ಸೊ ನ್ಯಾಯಾಲಯದಲ್ಲಿ ಸುಮಾರು 10 ತಿಂಗಳ ಕಾಲ ನಡೆದ ಎರಡೂ ಕಡೆಯ ವಿಚಾರಣೆಯ ನಂತರ ವಿಶೇಷ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಶನಿವಾರ ಈ ಪ್ರಕರಣದ ತೀರ್ಪು ನೀಡಿದರು. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ನರೇಂದ್ರ ಸಿಂಗ್ ಅಲಿಯಾಸ್ ಭೀಮ ಮಾಳಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ 30 ಸಾವಿರ ದಂಡ ವಿಧಿಸಿ ಶನಿವಾರ ಕೋರ್ಟ್ ತೀರ್ಪು ನೀಡಿತು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications