ದಲಿತ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವೆಸಗಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ
ಕರೌಲಿ, ಮೇ 01: ದಲಿತ ಅಪ್ರಾಪ್ತೆ ಬಾಲಕಿಯನ್ನು ಕಿಡ್ನಾಪ್ ಮಾಡಿ ಬಸ್ನಲ್ಲಿ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಆರೋಪಿ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕರೌಲಿಯ ಪೋಕ್ಸೊ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಶನಿವಾರ ಕಾಮುಕನ ವಿರುದ್ಧ ತೀರ್ಪು ನೀಡಿದ್ದಾರೆ.
ಆರೋಪಿ ನರೇಂದ್ರ ಸಿಂಗ್ ಅಲಿಯಾಸ್ ಭೀಮ ಎಂಬಾತ ಅಪ್ರಾಪ್ತೆಯನ್ನು ಅಪರಿಸಿಕೊಂಡು ಅವಳ ಮೇಲೆ ಅತ್ಯಾಚಾರ ಮಾಡಿದ್ದನು. ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ 30 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ದಂಡದ ಮೊತ್ತದಲ್ಲಿ ಸಂತ್ರಸ್ತರಿಗೆ 1 ಲಕ್ಷ ರೂ. ಹಾಗೂ ಸರ್ಕಾರಿ ಖಜಾನೆಗೆ 30 ಸಾವಿರ ರೂ. ನೀಡಬೇಕೆಂದು ತೀರ್ಪು ನೀಡಿರುವ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಅವರು ಕೇವಲ 13 ತಿಂಗಳ ಅವಧಿಯಲ್ಲಿ ಸಂತ್ರಸ್ತೆಯಾದ ಬಾಲಕಿಗೆ ನ್ಯಾಯ ಒದಗಿಸುವ ಮೂಲಕ ಅತ್ಯಾಚಾರಿಗಳಿಗೆ ನಿಜವಾದ ಸಂದೇಶ ನೀಡುವ ಮೂಲಕ ನ್ಯಾಯಾಲಯ ಮಾದರಿಯಾಗಿದೆ.
15 ವರ್ಷದ ಬಾಲಕಿ ತನ್ನ ಹಳೆಯ ಮನೆಯಿಂದ ತಮ್ಮ ಹೊಸ ಮನೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ವೇಳೆ ಆರೋಪಿ ನರೇಂದ್ರ ಸಿಂಗ್ ಅಲಿಯಾಸ್ ಭೀಮ ಮಾಳಿ ಎಂಬಾತನು ಮೂಲತಃ ಕೇಶ್ವಾಪುರ ಮತ್ತು ಹಾಲ್ ಎಂಐಎಸ್ ಶಾಲೆ ಬಳಿಯ ತೇಲಿಯ ಪನ್ಸೇರಿ ರಸ್ತೆಯ ನಿವಾಸಿಯಾದ್ದ ಇವನು ಅಪ್ರಾಪ್ತೆ ಬಾಲಕಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಬಸ್ಸಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಕಳೆದ ವರ್ಷ ಮಾರ್ಚ್ 13ರಂದು ಬಾಲಕಿ ತಂದೆ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆ ಮತ್ತು ಎಸ್ಸಿಎಸ್ಟಿ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾದ ಈ ದೂರನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದ ಪೋಲಿಸರು ಮೇ 25ರಂದು ಆರೋಪಿಯನ್ನು ಬಂಧಿಸಿದ್ದಾರೆ. ಎರಡು ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ಅಂದಿನಿಂದ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದ ಈ ಆರೋಪಿಯನ್ನು ಶನಿವಾರ ಕರೌಲಿ ನ್ಯಾಯಾಲಯವು ವಿಚಾರಣೆಯ ಬಳಿಕ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ.

ಪೊಲೀಸರು ಜೂನ್ನಲ್ಲಿ ಆರೋಪಪಟ್ಟಿ ಸಲ್ಲಿಸಿದ ನಂತರ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಪರವಾಗಿ 16 ಸಾಕ್ಷಿಗಳು ಮತ್ತು 21 ದಾಖಲೆಗಳನ್ನು ಸಾಕ್ಷ್ಯವಾಗಿ ಸಲ್ಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದರು. ಪೋಕ್ಸೊ ನ್ಯಾಯಾಲಯದಲ್ಲಿ ಸುಮಾರು 10 ತಿಂಗಳ ಕಾಲ ನಡೆದ ಎರಡೂ ಕಡೆಯ ವಿಚಾರಣೆಯ ನಂತರ ವಿಶೇಷ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಶನಿವಾರ ಈ ಪ್ರಕರಣದ ತೀರ್ಪು ನೀಡಿದರು. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ನರೇಂದ್ರ ಸಿಂಗ್ ಅಲಿಯಾಸ್ ಭೀಮ ಮಾಳಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ 30 ಸಾವಿರ ದಂಡ ವಿಧಿಸಿ ಶನಿವಾರ ಕೋರ್ಟ್ ತೀರ್ಪು ನೀಡಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications