ಉಮೇಶ್ ಜಾಧವ್ ಕಾಂಗ್ರೆಸ್ ತೊರೆಯಲು 3 ಕಾರಣಗಳು
Recommended Video

ಕಲಬುರಗಿ, ಜನವರಿ 29 : ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ಉಮೇಶ್ ಜಾಧವ್ ಕಾಂಗ್ರೆಸ್ ತೊರೆಯುವ ನಿರ್ಧಾರ ಕೈಗೊಳ್ಳಲು ಕಾಂಗ್ರೆಸ್ ನಾಯಕರೇ ಕಾರಣ ಎಂಬುದು ಅವರ ಅಭಿಮಾನಿಗಳ ಮಾತು. ಅದರಲ್ಲೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಅಸಮಾಧಾನವೇ ಕಾರಣ ಎಂಬುದು ಜಿಲ್ಲೆಯಲ್ಲಿ ಹಬ್ಬಿರುವ ಸುದ್ದಿ.
ಉಮೇಶ್ ಜಾಧವ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದ್ದರೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮೌನಕ್ಕೆ ಶರಣಾಗಿದ್ದಾರೆ. ಅವರನ್ನು ಕರೆದು ಮಾತನಾಡಿಸುವ, ಮನವೊಲಿಸುವ ಯಾವ ಪ್ರಯತ್ನವನ್ನು ಮಾಡಿಲ್ಲ.
'ಆಪರೇಷನ್ ಕಮಲಕ್ಕೆ ಜಾಧವ್ ಬಲಿಯಾಗಿದ್ದಾರೆ' ಎಂದು ಆರೋಪಿಸಿ ಅವರ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದನ್ನು ಪ್ರಿಯಾಂಕ್ ಖರ್ಗೆ ಅವರೇ ಮಾಡಿಸಿದ್ದಾರೆ ಎಂಬುದು ಉಮೇಶ್ ಜಾಧವ್ ಅವರ ಆರೋಪವಾಗಿದೆ.

ಕಾರಣ - 1
ಕಾರು ಅಪಘಾತದಲ್ಲಿ ಡಾ.ಉಮೇಶ್ ಜಾಧವ್ ಅವರು ಗಾಯಗೊಂಡು ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದರು. ಅಜಯ್ ಸಿಂಗ್ ಅವರು ಅಲ್ಲಿಗೆ ಹೋಗಿ ಆರೋಗ್ಯ ವಿಚಾರಿಸಿದ್ದರು. ಆದರೆ, ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದು ಕಲಬುರಗಿಗೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿಲಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ.

ಕಾರಣ - 2
ಕೆಲವು ದಿನಗಳ ಹಿಂದೆ ಉಮೇಶ್ ಜಾಧವ್ ಅವರ ಪುತ್ರನ ವಿವಾಹ ಕಲಬುರಗಿಯಲ್ಲಿ ನಡೆಯಿತು. ವಿವಾಹದ ಹಿಂದಿನ ದಿನ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲಿದ್ದರು. ಆದರೆ, ಉಮೇಶ್ ಜಾಧವ್ ಅವರ ನಿವಾಸಕ್ಕೆ ಭೇಟಿ ನೀಡಲಿಲ್ಲ. ಪ್ರಿಯಾಂಕ್ ಖರ್ಗೆ ಅವರು ವಿವಾಹದ ದಿನ ಬಂದಿದ್ದರು. ದೆಹಲಿಗೆ ಹೋಗಿ ಆಮಂತ್ರಣ ಕೊಟ್ಟು ಬಂದರೂ, ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲಿದ್ದರೂ ಮನಗೆ ಬಂದು ಹೋಗಲಿಲ್ಲ ಎಂದು ಜಾಧವ್ ಮುನಿಸಿಕೊಂಡಿದ್ದಾರೆ.

ಕಾರಣ -3
ಉಮೇಶ್ ಜಾಧವ್ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನದಿಂದ ಹರಿದಾಡುತ್ತಿವೆ. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರು ಜಾಧವ್ ಅವರನ್ನು ಕರೆದು ಮಾತನಾಡಿಲ್ಲ. ಉದ್ದೇಶಪೂರ್ವಕವಾಗಿ ನನ್ನನ್ನು ನಿರ್ಲಕ್ಷ್ಯಿಸುತ್ತಿದ್ದಾರೆ ಎಂದು ಡಾ.ಉಮೇಶ್ ಜಾಧವ್ ಅವರು ಆರೋಪ ಮಾಡುತ್ತಿದ್ದಾರೆ.

ಲೋಕಸಭೆ/ವಿಧಾನಸಭೆಗೆ ಸ್ಪರ್ಧೆ
ಡಾ.ಉಮೇಶ್ ಜಾಧವ್ ಕಾಂಗ್ರೆಸ್ ತೊರೆಯುವುದು ಬಹುತೇಕ ಖಚಿತವಾಗಿದೆ. ಗುಲ್ಪರ್ಗಾ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ದೊರೆಯದಿದ್ದರೆ ಚಿಂಚೋಳಿಯಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆ ಎದುರಿಸುವ ಲೆಕ್ಕಾಚಾರದಲ್ಲಿ ಅವರು ಇದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications