ತಾಯಿಯೊಂದಿಗೆ ಜೈಲು ಸೇರಿದ್ದ 3 ವರ್ಷದ ಬಾಲಕಿ ಸಾವು: ಭಾರೀ ಪ್ರತಿಭಟನೆ
ಕಲಬುರಗಿ, ಜನೆವರಿ 4: ತಾಯಿಯೊಂದಿಗೆ ಜೈಲಿಗೆ ಕಳುಹಿಸಲ್ಪಟ್ಟಿದ್ದ ಮೂರು ವರ್ಷದ ಬಾಲಕಿ ಮೃತ ಪಟ್ಟಿರುವ ಘಟನೆ ಶನಿವಾರ (ಜ.2) ದಂದು ಕಲಬುರಗಿಯಲ್ಲಿ ನಡೆದಿದೆ.
ಬಾಲಕಿಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ನೂರಾರು ಜನರು, ಕಲಬುರಗಿಯ ಗುಲ್ಬರ್ಗಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಜಿಮ್ಸ್) ಹೊರಗೆ ಸ್ಥಳೀಯ ಪೊಲೀಸರ ವಿರುದ್ಧ ಭಾನುವಾರ ಪ್ರತಿಭಟನೆ ನಡೆಸಿದರು.
ಮೂರು ವರ್ಷದ ಬಾಲಕಿಗೆ ಅನಾರೋಗ್ಯ ಮತ್ತು ಜೈಲಿನಲ್ಲಿನ ಹದಗೆಟ್ಟ ಸ್ಥಿತಿ ಇದ್ದು, ಬಾಲಕಿಯನ್ನು ಗಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ.

"ಮಹಿಳೆಯೊಬ್ಬರನ್ನು ಪ್ರಕರಣವೊಂದರಲ್ಲಿ ಬಂಧಿಸಲಾಗಿದ್ದು, ಆಕೆಯ ಮಗುವಿನೊಂದಿಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಜೈಲಿಗೆ ಹಾಕಲಾಯಿತು. ಮಗುವಿಗೆ ಕಾಯಿಲೆ ಬಿದ್ದು ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಮಗು ಸಾವನ್ನಪ್ಪಿದ್ದು, ತನಿಖೆ ನಡೆಯುತ್ತಿದೆ' ಎಂದು ಕಲಬುರಗಿ ಎಸ್ಪಿ ಸಿಮಿ ಮೆರಿಯಮ್ ಜಾರ್ಜ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್, "ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ಸಂದರ್ಭದಲ್ಲಿ ಡಿ.30 ರಂದು ಎರಡು ಗುಂಪುಗಳ ನಡುವೆ ಜಗಳವಾಯಿತು. ನಮ್ಮ ಪಕ್ಷದ ಜನರನ್ನು ಜಾಮೀನು ರಹಿತ ಕಾನೂನುಗಳ ಅಡಿಯಲ್ಲಿ ಜೈಲಿಗೆ ಹಾಕಲಾಯಿತು. ಪೊಲೀಸರು ಬಿಜೆಪಿ ಜನರನ್ನು ಜಾಮೀನು ಅಪರಾಧಕ್ಕೆ ಒಳಪಡಿಸಿದರು ಮತ್ತು ಅವರಿಗೆ ಪೊಲೀಸ್ ಸ್ಟೇಷನ್ ನಲ್ಲಿಯೇ ಜಾಮೀನು ಸಿಕ್ಕಿತು' ಎಂದು ಆರೋಪಿಸಿದ್ದಾರೆ.
"ಡಿಸೆಂಬರ್ 31 ರಂದು ಪೊಲೀಸರು, ಮಹಿಳೆಯರು ಮತ್ತು ಮಕ್ಕಳನ್ನು ಬಂಧಿಸಿದ್ದಾರೆ. ಶನಿವಾರ ಮೂರು ವರ್ಷದ ಮಗುವನ್ನು ಕೊಲ್ಲಲಾಗಿದೆ. ಇದಕ್ಕೆ ನಾನು ಪೊಲೀಸರನ್ನು ಹೊಣೆಗಾರನನ್ನಾಗಿ ಮಾಡುತ್ತಿದ್ದೇನೆ. ಈ ಪ್ರಕರಣದಲ್ಲಿ ನಮಗೆ ತನಿಖೆಯಾಗಬೇಕು' ಎಂದು ಶಾಸಕ ಡಾ.ಅಜಯ್ ಸಿಂಗ್ ಒತ್ತಾಯಿಸಿದರು.
ಬಾಲಕಿ ಸಾವಿನ ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆ ನಡೆಸುವ ಬಗ್ಗೆ ಪ್ರತಿಭಟನಾಕಾರರಿಗೆ ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಯಿತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications