ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ತುಂಬಿ ಹರಿದ ಕಾಗಿಣಾ ನದಿ; ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಜುಲೈ 4: ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ಹಾಗೂ ಉಪನದಿಗಳ ಒಳಹರಿವಿನಲ್ಲಿ ಏರಿಕೆಯಾಗಿದೆ. ಜೊತೆಗೆ ಮಹಾರಾಷ್ಟ್ರದಿಂದ ನಿನ್ನೆ ನೀರು ಬಿಟ್ಟಿದ್ದು, ಕಾಗಿಣಾ ನದಿಯ ಒಳ ಹರಿವೂ ಹೆಚ್ಚಾಗಿದೆ.

ಈ ನಡುವೆ ಸೇಡಂ ತಾಲೂಕಿನ ಬಿದ್ದಳ್ಳಿ ಗ್ರಾಮದ ಬಳಿ ಮರಳು ತರಲೆಂದು ಕಾಗಿಣಾ ನದಿಗೆ ಎಂಟು ಮಂದಿ ಇಳಿದಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯ ನೀರಿನ ಹರಿವು ಹೆಚ್ಚಾಗಿದ್ದರಿಂದ ನೀರಿನ ನಡುವೆಯೇ ಎಲ್ಲರೂ ಸಿಲುಕಿಕೊಂಡಿದ್ದಾರೆ. ದಿಕ್ಕು ತೋಚದೇ ನಡುಗಡ್ಡೆಯಲ್ಲೇ ಭಯದಿಂದ ಉಳಿದುಕೊಂಡಿದ್ದಾರೆ.

ನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ: ನಡುಗಡ್ಡೆ ಗ್ರಾಮಗಳಲ್ಲಿ ಆತಂಕನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ: ನಡುಗಡ್ಡೆ ಗ್ರಾಮಗಳಲ್ಲಿ ಆತಂಕ

8 Persons Rescued From Kagina River Flood In Kalaburagi

ಎಂಟು ಮಂದಿಯು ನದಿ ನಡುವೆ ಸಿಲುಕಿರುವ ವಿಷಯ ತಿಳಿಯುತ್ತಿದ್ದಂತೆ ಸೇಡಂ ಠಾಣೆಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಎಲ್ಲರನ್ನೂ ನಡುಗಡ್ಡೆಯಿಂದ ರಕ್ಷಿಸಲಾಗಿದೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

English summary
8 Persons who stucked in flood of Kagina River near sedam taluk biddalli village rescued yesterday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X