ಬೈಕ್ ಸರ್ವಿಸ್ ಮಾಡ್ಲಿಲ್ಲ ಅಂತ ಶೋರೂಂಗೆ ಹೀಗಾ ಮಾಡೋದು?
ಕಲಬುರಗಿಯಲ್ಲಿ ನಡೆದಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿದೆ. ವ್ಯಕ್ತಿಯೊಬ್ಬ ತನ್ನ ಎಲೆಕ್ಟ್ರಿಕ್ ಬೈಕ್ (ಇವಿ) ಸರಿಯಾಗಿ ಸರ್ವೀಸ್ ಮಾಡಿಲ್ಲ ಎಂಬ ಕಾರಣಕ್ಕೆ ದೊಡ್ಡ ಅವಾಂತರವನ್ನೇ ಮಾಡಿದ್ದಾನೆ. ಇದೇ ಕೋಪದಲ್ಲಿ ನೇರವಾಗಿ ಓಲಾ ಶೋರೂಂಗೆ ಹೋಗಿ ಬೆಂಕಿ ಇಟ್ಟು ಬಂದಿದ್ದಾನೆ ಎಂದು ವರದಿಯಾಗಿದೆ.
ಹೌದು, ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದಾನೆ. ನಿನ್ನೆ ಬೆಳಿಗ್ಗೆ ಶೋ ರೂಂಗೆ ಬೆಂಕಿ ಬಿದ್ದಿತ್ತು. ಮೊದಲಿಗೆ ಇದನ್ನು ಎಲ್ಲರೂ ಶಾರ್ಟ್ಸರ್ಕ್ಯೂಟ್ನಿಂದ ಆಗಿರಬಹುದು ಎಂದು ಭಾವಿಸಿದ್ದರು. ಆದರೆ, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿರುವ ವಿಚಾರ ಬೆಳಕಿಗೆ ಬಂದಿದೆ.

ಪೊಲೀಸರು ಹೇಳುವಂತೆ ಮಹಮ್ಮದ್ ನದೀಮ್ ಎಂಬ ವ್ಯಕ್ತಿಯು ತನ್ನ ಬಳಿಯಿದ್ದ ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋರೂಂ ಸ್ಟಾಫ್ ಜೊತೆಗೆ ಗಲಾಟೆ ಮಾಡಿದ್ದ. ನಂತರ ಪೆಟ್ರೋಲ್ ತೆಗೆದುಕೊಂಡು ಬಂದು ಶೋರೂಂಗೆ ಎರಚಿ, ಬೆಂಕಿ ಹಚ್ಚಿದ್ದಾನೆ ಎಂದು ಹೇಳಲಾಗಿದೆ.
At a place in India, 26-year-old Mohammad Nadeem set fire to an Ola scooter showroom in Kalaburagi over disagreement with the showroom management.
— Amit Jha (@Amitranu7368006) September 11, 2024
Every day a new crime of Abduls. pic.twitter.com/DiLtULQaWk
ಇನ್ನು ಈ ಸಂಬಂಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿ ನದೀಮ್ನನ್ನು ವಶಕ್ಕೆ ಪಡೆಯಲಾಗಿದೆ. ಶೋರೂಂಗೆ ಬೆಂಕಿ ಬಿದ್ದು ಹೊತ್ತಿ ಉರಿದ ಪರಿಣಾಮ ಒಳಗಿದ್ದ 6 ಹೊಸ ಎಲೆಕ್ಟ್ರಿಕ್ ಬೈಕ್ಗಳು ಬೆಂಕಿಗಾಹುತಿಯಾಗಿವೆ. ಜೊತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕೂಡ ಸುಟ್ಟುಹೋಗಿವೆ ಎಂದು ಹೇಳಿದ್ದಾರೆ.
ಮೂರು ವಾರಗಳ ಹಿಂದಷ್ಟೇ ಆರೋಪಿಯು ಈ ಶೋರೂಂನಿಂದ ಓಲಾ ಸ್ಕೂಟರ್ ಖರೀದಿ ಮಾಡಿದ್ದ. ಆದರೆ ಪದೇ ಪದೇ ಬಂದು ಬೈಕ್ ರಿಪೇರಿ ಬರುತ್ತಿದೆ ಎಂದು ಕೋಪಗೊಳ್ಳುತ್ತಿದ್ದ. ಅಲ್ಲದೆ ಶೋರೂಂಗೂ ಬಂದು ರಿಪೇರಿ ಮಾಡಿಕೊಡಿ ಎಂದು ಕೇಳಿಕೊಂಡಿದ್ದ. ಶೋರೂಂನವರು ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ ಎಂದು ದೂರಲಾಗಿದೆ. ಇದೇ ಕಾರಣಕ್ಕೆ ಆರೋಪಿ ಶೋರೂಂಗೆ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದ್ದಾನೆ.

ಕೊನೆಗೆ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಇನ್ನು ಈ ಶೋರೂಂಗೆ ಬೆಂಕಿ ಬಿದ್ದಿರುವ ವಿಡಿಯೋ ನಿನ್ನೆಯಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಮೊದಲಿಗೆ ವಿದ್ಯುತ್ ಅವಘಡದಿಂದ ಶೋರೂಂಗೆ ಬೆಂಕಿ ತಗುಲಿತ್ತು ಎಂದೇ ಹೇಳಲಾಗಿತ್ತು. ಆದರೆ ಇಂದು ಈ ಘಟನೆಯ ಅಸಲಿ ಸತ್ಯವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications