ಹೆರಿಗೆ ರಜೆ ಮುಗಿಸಿ ಬಂದ ಶಿಕ್ಷಕಿಯಿಂದ ಲಂಚ; ಎಸಿಬಿ ಅಧಿಕಾರಿಗಳ ದಾಳಿ
ಕಲಬುರಗಿ, ಜೂನ್ 18: ಹೆರಿಗೆ ರಜೆ ಪಡೆದು ಹೋಗಿದ್ದ ಶಿಕ್ಷಕಿಯಿಂದ ಲಂಚಕ್ಕೆ ಬೇಡಿಕೆ ಇಟ್ಟು ಶಿಕ್ಷಣ ಇಲಾಖೆ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ಇಂದು ನಡೆದಿದೆ.
Recommended Video
ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ದ್ವಿತೀಯ ದರ್ಜೆ ಸಹಾಯಕ ಇಂದು ಬೆಳಿಗ್ಗೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಶಿಕ್ಷಕಿಯೊಬ್ಬರು ಹೆರಿಗೆ ರಜೆ ಮುಗಿಸಿ ವಾಪಸ್ಸಾಗಿದ್ದು, ಶಾಲೆಗೆ ಮರಳಿ ಸೇರಿಸಿಕೊಳ್ಳಲು ಇವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಶಿಕ್ಷಕಿಯಿಂದ ಲಂಚ ಪಡೆಯುವಾಗ ಆಳಂದ ಬ್ಲಾಕ್ ಎಜುಕೇಷನ್ ಆಫೀಸರ್ ಈಶ್ವರಪ್ಪ ಹಾಗೂ ದ್ವಿತೀಯ ದರ್ಜೆ ಸಹಾಯ ಶಶಿಕಾಂತ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಕೊಂಡಿದ್ದಾರೆ.

ಎಸ್.ಡಿ.ಎ. ಶಶಿಕಾಂತ್ ಶಿಕ್ಷಕಿಯಿಂದ 5 ಸಾವಿರ ರೂಪಾಯಿ ಲಂಚ ಪಡೆದಿದ್ದಾರೆ. ನಂತರ ಆ ಹಣವನ್ನು ಬಿಇಒ ಈಶ್ವರಪ್ಪಗೆ ಮುಟ್ಟಿಸಿದ್ದಾರೆ. ಈ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯವರ ಮನೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಶಿಕ್ಷಕಿಯೊಬ್ಬರು ಪಡೆದಿದ್ದ ಹೆರಿಗೆ ರಜೆಯ ನಂತರ ಶಾಲೆಗೆ ಸೇರಿಸಿಕೊಳ್ಳಲು ಹಿರಿಯ ಅಧಿಕಾರಿಯಾದವರು ಹೀಗೆ ಲಂಚ ಪಡೆದುಕೊಂಡಿರುವುದು ಚರ್ಚಿತ ವಿಷಯವಾಗಿದೆ.












Click it and Unblock the Notifications