ಸತ್ತರೂ ಬಿಜೆಪಿ ಸೇರಲ್ಲ ಅಂದಿದ್ರು ಯಡಿಯೂರಪ್ಪ : ಬಿ.ಆರ್.ಪಾಟೀಲ್
ಕಲಬುರಗಿ, ಡಿಸೆಂಬರ್ 05 : 'ಬಿ.ಆರ್.ಪಾಟೀಲ್ ಓರ್ವ ನಂಬಿಕೆ ದ್ರೋಹಿ, ಮೋಸಗಾರ, ಆತ ನನ್ನ ಹೆಸರು ಬಳಸಿ ಚುನಾವಣೆ ಗೆದ್ದಿದಾರೆ' ಎಂದು ಬಿ.ಎಸ್.ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ನಡೆದ ಪರಿವರ್ತನಾ ಯಾತ್ರೆ ವೇಳೆ ಆಡಿದ್ದ ಮಾತಿಗೆ ಶಾಸಕ ಬಿ.ಆರ್.ಪಾಟೀಲ್ ಎದುರುತ್ತರ ನೀಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ವಾಗ್ದಾಳಿ ನಡೆಸಿದ ಆಳಂದ ಶಾಸಕ ಬಿ.ಆರ್.ಪಾಟೀಲ್ 'ಸ್ವಂತ ವರ್ಚಸ್ಸಿನ ಮೇಲೆ ಗೆದ್ದಿರುವವನು ನಾನು, ಕಳೆದ ಚುನಾವಣೆಯಲ್ಲಿ ಕೆಜೆಪಿಯಿಂದ ಶಿವಮೊಗ್ಗದಲ್ಲಿ ಎಷ್ಟು ಜನ ಗೆದ್ದಿದ್ದಾರೆ?' ಎಂದು ಯಡಿಯೂರಪ್ಪ ಅವರಿಗೆ ಬಿ.ಆರ್.ಪಾಟೀಲ್ ಪ್ರಶ್ನೆ ಮಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಸುಳ್ಳುಗಾರ ಎಂದು ಕರೆದ ಅವರು 'ಉಸಿರಿರೋವರೆಗೂ ಬಿಜೆಪಿ ಹೋಗಲ್ಲ, ರಕ್ತದಲ್ಲಿ ಬರೆದು ಕೊಡುತ್ತೇನೆ ಅಂತಾ ಯಡಿಯೂರಪ್ಪ ಹೇಳಿದ್ದರು ಆದರೆ ರಾತೋರಾತ್ರಿ ಬಿಜೆಪಿಗೆ ಪಲಾಯನ ಮಾಡಿದ್ರು, ಇವಾಗ ಹೇಳಿ ನಿಮ್ಮಲ್ಲಿ ಯಾರ ರಕ್ತ ಹರಿಯುತ್ತಿದೆ?' ಎಂದು ವಾಗ್ಬಾಣ ಬಿಟ್ಟರು.
ಸಿದ್ದರಾಮಯ್ಯ ಅವರ ಬಾಲಂಗೋಚಿ ಎಂದು ಕರೆದಿದ್ದಕ್ಕೆ ಉತ್ತರಿಸಿದ ಪಾಟೀಲ್ 'ಸಿದ್ದರಾಮಯ್ಯ ನನ್ನ ಆತ್ಮೀಯ ಗೆಳೆಯರು, ನಾನು ಸಿಎಂ ಸೇರಿದಂತೆ ಯಾರ ಬಾಲಂಗೋಚಿಯೂ ಅಲ್ಲ' ಎಂದರು
ಯಡಿಯೂರಪ್ಪ ಅವರನ್ನು ಮೋಸಗಾರ ಎಂದು ಕರೆದ ಬಿ.ಆರ್.ಪಾಟೀಲ್ 'ಬಿಎಸ್ವೈ ಅವರನ್ನು ನಂಬಿ ಹಲವರು ಕೆಜೆಪಿ ಸೇರಿದ್ದರು ,ಆದರೆ ಅವರಿಗೆಲ್ಲ ಕೈಕೊಟ್ಟು ಯಡಿಯೂರಪ್ಪ ಮಾತ್ರ ಬಿಜೆಪಿ ಸೇರಿದ್ರು, ಇವಾಗ ಹೇಳಿ ಯಾರು ಮೋಸಗಾರ?' ಎಂದು ಅವರು ಪ್ರಶ್ನೆ ಮಾಡಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications