ಬಿಎಸ್ ವೈ ಗೆ ಬೈ ಕಾಂಗ್ರೆಸ್ ಗೆ ಜೈ ಎಂದ ಕೆಜಿಪಿ ಶಾಸಕ ಬಿಆರ್ ಪಾಟೀಲ್
ಕಲಬುರಗಿ, ಜನವರಿ. 16 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಮುಂದಿನ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ.
ಈ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಬಿ.ಆರ್.ಪಾಟೀಲ್ " ಜಾತ್ಯಾತೀತತೆ ಉಳಿಬೇಕಾದರೆ ಬಿಜೆಪಿಯೇತರ ಪಕ್ಷಗಳ ಒಗ್ಗೂಡುವಿಕೆಯ ಅಗತ್ಯವಿದೆ, ಜೆಡಿಎಸ್'ಗೆ ಮರಳುವುದು ಕನಸಿನ ಮಾತು.
ಇನ್ನು ಬಿಜೆಪಿ ಒಡೆದ ಮನೆಯಾಗಿದೆ ಹಾಗಾಗಿ ಬದಲಾವಣೆ ಬಯಸಿ ರಾಜಕೀಯಕ್ಕೆ ಬಂದ ತಮಗೆ ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಅನಿವಾರ್ಯವಿದೆ ಎಂದು ಹೇಳುವ ಮೂಲಕ ತಾವೂ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಉತ್ಸುಕವಾಗಿರುವುದಾಗಿ ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಬಹಿರಂಗಪಡಿಸಿದ್ದಾರೆ.

ಕಾಂಗ್ರೆಸ್ ಮನೆ ಕದತಟ್ಟಿರುವ ಅವರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಇದಕ್ಕೆ ಕೈ ನಾಯಕರಿಂದ ಹಸಿರು ನಿಶಾನೆ ದೊರೆತಿದೆ ಎಂದು ಸ್ವತಃ ಬಿ.ಆರ್.ಪಾಟೀಲ್ ತಿಳಿಸಿದ್ದಾರೆ.
ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಇಬ್ಬಾಗವಾದಾಗ ಬಿ.ಎಸ್.ವೈ ಜತೆ ಗುರುತಿಸಿ ಕೊಂಡ ಬಿ.ಆರ್.ಪಾಟೀಲ್, 2013ರಲ್ಲಿ ಆಳಂದ ಕ್ಷೇತ್ರದಿಂದ ಕೆಜೆಪಿಯಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.
ಬಳಿಕ ಯಡಿಯೂರಪ್ಪ ಮತ್ತೆ ಬಿಜೆಪಿ ಸೇರಿದಾಗ ಇವರು ಅತಂತ್ರವಾಗಿ ಉಳಿದಿದ್ದರು. ಇದೀಗ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮುಂದಿನ ರಾಜಕೀಯ ಭವಿಷ್ಯವನ್ನು ಕಂಡುಕೊಳ್ಳುಲು ಬಿ.ಆರ್. ಪಾಟೀಲ್ ಮುಂದಾಗಿದ್ದಾರೆ.
ಲೋಕಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಇವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications