"ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುದಾನ ಬಿಡುಗಡೆಯಾಗಲಿ"
ಕಲಬುರಗಿ, ಸೆಪ್ಟೆಂಬರ್ 09: ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಅನುದಾನ ಬಿಡುಗಡೆಯಾಗದ ಕಾರಣಕ್ಕಾಗಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಮೊಟ್ಟೆಯನ್ನು ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂಬ ದೂರು ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಭಾಗದಲ್ಲಿ ಕೇಳಿಬರುತ್ತಿದೆ. "ಮಕ್ಕಳಿಗೆ ಮೊಟ್ಟೆಯನ್ನು ನಮ್ಮದೇ ಜೇಬಿನಿಂದ ಹಣ ಖರ್ಚು ಮಾಡಿ ನೀಡುತ್ತಿದ್ದೇವೆ. ಇನ್ನೆಷ್ಟು ದಿನ ಅನುದಾನಕ್ಕಾಗಿ ನಾವು ಕಾಯಬೇಕು?" ಎಂಬುದು ಅಂಗನವಾಡಿ ಕಾರ್ಯಕರ್ತೆಯರ ಪ್ರಶ್ನೆ.
ಅಪೌಷ್ಠಿಕತೆಯ ನಿರ್ಮೂಲನೆಗಾಗಿ ಸರ್ಕಾರ ಜಾರಿಗೊಳಿಸಿದ ಹಲವು ಯೋಜನೆಗಳಲ್ಲಿ ಗರ್ಭಿಣಿಯರಿಗೆ ಮತ್ತು 3-6 ವರ್ಷ ವಯಸ್ಸಿನ ಮಕ್ಕಳಿಗೆ ಮೊಟ್ಟೆಯನ್ನು ನೀಡುವುದೂ ಒಂದು. ಅಂಗನವಾಡಿ ಕಾರ್ಯಕರ್ತರಿಗೆ ತಮ್ಮದೇ ಹಣದಲ್ಲಿ ಮೊಟ್ಟೆಯನ್ನು ನೀಡುವಂತೆ ಒತ್ತಾಯಿಸುತ್ತಿರುವ ದೂರೂ ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ಕೇಳಿಬರುತ್ತಿದೆ.
ಅಷ್ಟೇ ಅಲ್ಲ, ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಎಂಟು ತಿಂಗಳಿನಿಂದ ಅವರ ಸಂಬಳವನ್ನೂ ನೀಡಲಾಗಿಲ್ಲ. "ಮೊಟ್ಟೆಯನ್ನು ಪೂರೈಕೆ ಮಾಡುವುದನ್ನು ನಿಲ್ಲಿಸಬೇಡಿ ಎಂದು ನಾವು ಡಿಸ್ಟ್ರಿಬ್ಯೂಟರ್ ಗಳಿಗೆ ತಿಳಿಸಿದ್ದೇವೆ. ಇಲಾಖೆಯಿಂದ ಅನುದಾನ ಬಿಡುಗಡೆಯಾದ ಕೂಡಲೆ ನೀಡುತ್ತೇವೆ ಎಂದು ಭರವಸೆ ನೀಡುತ್ತಲೇ ಬಂದಿದ್ದೇವೆ. ಆದರೆ ಎಂಟು ತಿಂಗಳಿನಿಂದ ಅವರೂ ನಮ್ಮನ್ನು ಸಹಿಸಿಕೊಂಡಿದ್ದಾರೆ. ಆದರೆ ಇದು ಇನ್ನೆಷ್ಟು ದಿನ? ಈಗ ನಾವೇ ನಮ್ಮ ಜೇಬಿನಿಂದ ಹಣ ಖರ್ಚು ಮಾಡುತ್ತಿದ್ದೇವೆ. ಅದಾದರೂ ನಮಗೆ ಎಷ್ಟು ದಿನ ಸಾಧ್ಯ?' ಎಂಬುದು ಮಹಿಳೆಯೊಬ್ಬರ ಪ್ರಶ್ನೆ. ಸರ್ಕಾರದ ಮಾತೃಪೂರ್ಣ ಯೋಜನೆಯಡಿಯಲ್ಲಿ ಗರ್ಭಿಣಿಯರಿಗೂ ಮೊಟ್ಟೆಯನ್ನು ಸರ್ಕಾರ ನೀಡುತ್ತಿತ್ತು.

"ಮೊದಲಿಗೆ ಹಣದ ಕೊರತೆಯಿಂದಾಗಿ ಅನುದಾನ ಬಿಡುಗಡೆ ಮಾಡಿರಲಿಲ್ಲ. ನಂತರ 'ಬಾಲ ವಿಕಾಸ ಸಮಿತಿ'ಯ ಮೂಲಕ ಅನುದಾನ ಬಿಡುಗಡೆ ಮಾಡಲಾಯಿತಾದರೂ, ಇದೀಗ ಮೊಟ್ಟೆ ಹಂಚಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಅನುದಾನವನ್ನು ತಡೆಹಿಡಿಯಲಾಗಿದೆ" ಎಂಬುದು ಅಧಿಕಾರಿಯೊಬ್ಬರ ಮಾತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications