ಕಲಬುರಗಿ: ಕೇಂದ್ರೀಯ ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಮೂವರ ವಿರುದ್ಧ FIR ದಾಖಲು
ಕಲಬುರಗಿ, ಏಪ್ರಿಲ್ 11: ಭಾನುವಾರದಂದು (ಏ.10) ರಾಮನವಮಿ ಆಚರಿಸಿ ಮರುಳುವಾಗ ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಾಧಿಕ್, ರಾಹುಲ್ ಹಾಗೂ ರಾಹುಲ್ ಆರ್ಯ ಎಂಬುವರ ಮೇಲೆ ನರೋಣ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 143 (ಕಾನೂನು ಬಾಹಿರ ಚಟುವಟಿಕೆ), 147 (ಗಲಭೆ), 341 (ತಪ್ಪು ಗ್ರಹಿಕೆ), 323 (ಸ್ವಯಂಪ್ರೇರಿತ ಹಲ್ಲೆ), 324(ಆಯುಧಗಳಿಂದ ಹಲ್ಲೆ), 307 (ಹತ್ಯೆಗೆ ಯತ್ನ), 504 (ಉದ್ದೇಶಪೂರಕವಾಗಿ ಅವಹೇಳನ ಮಾಡುವುದಕ್ಕೆ), 506 (ಕ್ರಿಮಿನಲ್ ಬೆದರಿಕೆ)ರ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಘಟನೆ ಹಿನ್ನೆಲೆ
ರಾಮನವಮಿ ನಿಮಿತ್ತ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿರುವ ಲಕ್ಷ್ಮೀ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದ ವಿದ್ಯಾರ್ಥಿಗಳು ಮರಳಿ ಬರುವಾಗ ನಾವು ಎಬಿವಿಪಿ, ಆರ್ಎಸ್ಎಸ್ ಸಂಘಟನೆಯವರು ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದವರು ಯಾವ ಸಂಘಟನೆಯವರು ಎಂದು ಗೊತ್ತಿಲ್ಲ. ಆದರೆ ನಾವು ಎಬಿವಿಪಿ ಸಂಘಟನೆಯವರು ಅಂತ ಹಲ್ಲೆ ಮಾಡಿದ್ದಾರೆ. ಕ್ಯಾಂಪಸ್ ಆವರಣದಲ್ಲಿ ಯಾಕೆ ರಾಮನವಮಿ ಮಾಡಿದ್ದೀರಿ? ಎಂದು ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ವಿಶ್ವನಾಥ್ ಹೇಳಿದ್ದು, ಅವರು ನೀರಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ರಾಮನವಮಿ ಆಚರಣೆ ಮುಗಿದ ನಂತರ ವಿಶ್ವನಾಥ ಮತ್ತು ನರೇಂದ್ರ ಕುಮಾರ ಬೈಕ್ ಮೇಲೆ ತೆರಳುತ್ತಿದ್ದಾಗ, ಅಡ್ಡಗಟ್ಟಿದ ತೆಲಂಗಾಣ ಮೂಲದ ಸಾಧಿಕ್, ಆಂಧ್ರಪ್ರದೇಶ ಮೂಲದ ರಾಹುಲ್ ಮತ್ತು ಕಲಬುರಗಿಯ ರಾಹುಲ್ ಆರ್ಯಾ ಎನ್ನುವ ಮೂವರು ವಿದ್ಯಾರ್ಥಿಗಳೇ ಹಲ್ಲೆ ಮಾಡಿದವರು ಎಂದು ಗಾಯಾಳುಗಳು ನರೋಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Recommended Video
ಇದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿಯ ಮುಂದೆ ಪ್ರತಿಭಟನೆ ನಡೆಸಿ ಈ ವಿದ್ಯಾರ್ಥಿಗಳ ಬಂಧನಕ್ಕೆ ಆಗ್ರಹಿಸಿದರು. ಕಲಬುರಗಿ ಕೇಂದ್ರೀಯ ವಿವಿಯನ್ನು ಮತ್ತೊಂದು ಜೆಎನ್ಯು ಮಾಡಲು ಹೊರಟಿದ್ದಾರೆ ಎಂದು ಎಬಿವಿಪಿ ಕಾರ್ಯಕರ್ತರು ಮತ್ತು ಶ್ರೀರಾಮಸೇನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications