ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೆ ಕೋಲಿ ಸಮುದಾಯ ನೆನೆಪಾಗಿದೆ: ಬಾಬುರಾವ್ ಚಿಂಚನಸೂರ
Recommended Video
ಚಿಂಚೋಳಿ ಮೇ 13 2019: ಕಳೆದ 50 ವರ್ಷಗಳಿಂದ ನೆನೆಪಾಗದ ಕೋಲಿ ಸಮುದಾಯ ಈಗ ಖರ್ಗೆ ಅವರಿಗೆ ನೆನೆಪಾಗಿದ್ದು, ನರೇಂದ್ರ ಮೋದಿ ಅವರು ಕೋಲಿ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ಭರವಸೆ ನೀಡಿದ ನಂತರ ಕಾಂಗ್ರೆಸ್ ಪಕ್ಷದ ನಾಯಕರಿಗೆ ಜ್ಞಾನೋದಯವಾಗಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚಿಂಚೋಳಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳಿಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಪ್ರಧಾನಿಯಾಗುವ ತಿರುಕನ ಕನಸನ್ನು ಕಾಣುತ್ತಿದ್ದಾರೆ. ಅವರು ಪ್ರಧಾನಿಯಾದ್ರೆ ಕೋಲಿ ಸಮಾಜವನ್ನು ಎಸ್.ಟಿ ಗೆ ಸೇರಿಸುತ್ತೇವೆ ಎಂದು ಖರ್ಗೆ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಎರಡು ವರ್ಷಗಳ ಕಾಲ ನಾನು ಕೋಲಿ ಸಮುದಾಯವನ್ನು ಎಸ್ ಟಿ ಗೆ ಸೇರಿಸಿ ಎಂದು ಪ್ರತಿಭಟನೆ, ಧರಣಿ ಸತ್ಯಾಗ್ರಹ ಹಾಗೂ ಉರುಳು ಸೇವೆಯನ್ನು ಮಾಡಿದ್ದೇನೆ.
ಆಗ ಕಾಂಗ್ರೆಸ್ ನಾಯಕರು ಯಾವುದೇ ಚಕಾರವೆತ್ತಲ್ಲಿಲ್ಲ. 50 ವರ್ಷಗಳಿಂದ ರಾಜಕೀಯದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯುಪಿಎ ಸರಕಾರದ ಅವಧಿಯಲ್ಲಿ ಈ ಬಗ್ಗೆ ಚಿಂತಿಸಬೇಕು ಎನ್ನುವ ಪರಿಜ್ಞಾನ ಇರಲಿಲ್ಲ. ಈಗ ಚಿಂಚೋಳಿ ಉಪಚುನಾವಣೆ ಬಂದಿರುವ ಸಂಧರ್ಭದಲ್ಲಿ ಅವರಿಗೆ ಜ್ಞಾನೋದಯವಾಗಿದೆ. ಆದರೆ, ಈಗಾಗಲೇ ಈ ಫೈಲ್ ಪ್ರಧಾನಿ ನರೇಂದ್ರ ಮೋದಿ ಅವರ ಹತ್ತಿರವಿದ್ದು, ಅವರೇ ಕೋಲಿ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರ್ಪಡೆ ಮಾಡಲಿದ್ದಾರೆ ಎಂದರು.

ಕೋಲಿ ಸಮಾಜದ ಹಕ್ಕನ್ನು ಕಿತ್ತುಕೊಂಡು ಮಗನ ಮಂತ್ರಿ ಮಾಡಿದ್ದಾರೆ. ಸತತವಾಗಿ ಎರಡು ವರ್ಷ ಸತ್ಯಾಗ್ರ ಮಾಡಿದ್ದೇನೆ. ಬೆಂಗಳೂರು ಹಾಗೂ ಕಲಬುರಗಿಯಲ್ಲಿ ಉರುಳು ಸೇವೆ ಮಾಡಿದ್ದೇನೆ. ಆಗ ಖರ್ಗೆ ಮತ್ತು ಸಿದ್ದರಾಮಯ್ಯ ಸೌಜನ್ಯಕ್ಕೂ ಮಾತನಾಡಲಿಲ್ಲಾ. ಖರ್ಗೆ ಮನಸ್ಸು ಮಾಡಿದ್ದರೆ ಎರಡು ನಿಮಿಷದಲ್ಲಿ ಮಾಡಬಹುದಾಗಿದ್ದ ಕೆಲಸ ಇದು ಎಂದು ಹರಿಹಾಯ್ದರು.
ಕೋಲಿ ಸಮುದಾಯವನ್ನು ಎಸ್ ಟಿ ಗೆ ಸೇರಿಸುವಂತೆ ಈಗಾಗಲೇ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೇವೆ. ನನಗೆ ಖರ್ಗೆ ಅವರ ಬಗ್ಗೆ ಗೌರವ ಇದೆ, ಆದರೆ, ಕೆಳ ಮಟ್ಟದಲ್ಲಿ ಮಾತನಾಡುವುದು ಸರಿಯಲ್ಲ ಎಂದರು. ಮೇ 23 ರಂದು ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ. ಹಾಲಿಗಳೆಲ್ಲಾ ಮಾಜಿಗಳಾಗಲಿದ್ದಾರೆ. ಬಿಜೆಪಿ ಸಂವಿಧಾನದ ವಿರೋಧಿಯಲ್ಲ. ಮತದಾರರಿಗೆ ಸುಳ್ಳು ಹೇಳುತ್ತಿದ್ದಾರೆ ಕಾಂಗ್ರೆಸ್ ಪಕ್ಷದ ನಾಯಕರು. ಅನಂತಕುಮಾರ್ ಹೆಗಡೆ ಬಾಯಿಜಾರಿ ಸಂವಿಧಾನ ವಿರೋಧಿ ಮಾತನಾಡಿದ್ದು, ಅದಕ್ಕೆ ಅವರೇ ಕ್ಷಮೆ ಕೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ರೀತಿ ಮಾತನಾಡುವುದು ಸರಿಯಲ್ಲ. ತಾನು ತನ್ನ ಮಗ ಅಭಿವೃದ್ದಿ ಹೊಂದೋದೆ ಖರ್ಗೆ ಗುರಿ. ಎಲ್ಲಾ ಸಮುದಾಯದ ಜನರನ್ನು ತುಳಿದ್ದಿದ್ದಾರೆ. ಕೋಲಿ ಸಮಾಜದ ಚೌಕಿದಾರ ನಾನು. ಕೋಲಿ ಸಮಾಜವನ್ನು ಎಸ್ ಟಿ ಗೆ ಸೇರಿಸಿ ಸಾಯುತ್ತೇನೆ. ಮೇ 15 ರಂದು ಚಿಂಚೋಳಿಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಕೋಲಿ ಸಮಾವೇಶವನ್ನು ಆಯೋಜಿಸಿದ್ದೇವೆ ಎಂದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications