ಅಂತೂ ರದ್ದಾಗಿದೆ ಬಹಮನಿ ಉತ್ಸವ, ಖುದ್ದಾಗಿ ಹೇಳಿದ್ದಾರೆ ಶರಣಪ್ರಕಾಶ್
ಕಲಬುರಗಿ, ಫೆಬ್ರವರಿ 16: ರಾಜ್ಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿದ್ದ ಬಹಮನಿ ಉತ್ಸವ ಆಚರಿಸುವ ನಿರ್ಧಾರದಿಂದ ಹಿಂಪಡೆಯಲಾಗಿದೆ. ಅಲ್ಲಿಗೆ ಬಹಮನಿ ಉತ್ಸವ ರದ್ದು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಬಹಮನಿ ಉತ್ಸವವನ್ನು ರದ್ದುಗೊಳಿಸಲಾಗಿದೆ ಅಂತ ಹೇಳಿದ್ದಾರೆ.
ಮಳಖೇಡ ಉತ್ಸವ ನಿಗದಿಯಂತೆ ನಡೆಯಲಿದೆ. ಮಳಖೇಡ ಉತ್ಸವ ಆಚರಣೆಗೆ ಸರಕಾರದ ಆದೇಶ ಹೊರಬಿದ್ದಿತ್ತು. ಆದರೆ ಕೆಲವರು ಆಗ್ರಹಿಸಿದ್ದರಿಂದ ಬಹಮನಿ ಉತ್ಸವ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸರಕಾರದಿಂದ ಆದೇಶ ಹೊರಬಿದ್ದಿರಲಿಲ್ಲ. ಅನೇಕರು ಬಹಮನಿ ಉತ್ಸವಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಉತ್ಸವ ಮಾಡುವ ನಿರ್ಧಾರ ಕೈ ಬಿಡಲಾಗಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಬಹಮನಿ ಉತ್ಸವವನ್ನು ಸರಕಾರದಿಂದ ಮಾಡುವ ವಿಚಾರ ಇಲ್ಲ. ಖಾಸಗಿಯಾಗಿ ಯಾವುದಾದರು ಸಂಘ- ಸಂಸ್ಥೆಗಳು ಮಾಡುತ್ತೇವೆ ಎಂದು ಮುಂದೆ ಬಂದರೆ ಪರಿಶೀಲನೆ ಮಾಡಲಾಗುತ್ತದೆ ಎಂದಿದ್ದಾರೆ. ಬಹಮನಿ ಉತ್ಸವ ಆಚರಣೆ ನಿರ್ಧಾರವು ದೊಡ್ಡ ವಿವಾದದ ಸ್ವರೂಪ ಪಡೆದಿತ್ತು. ಬಹಮವಿ ಉತ್ಸವ ಮಾಡದಂತೆ ಬಿಜೆಪಿ ಸೇರಿದಂತೆ ಕೆಲ ಕನ್ನಡಪರ ಸಂಘಟನೆಗಳು ಆಗ್ರಹಿಸಿದ್ದವು.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications