ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ಪ್ರೆಸ್ ಹೆದ್ದಾರಿ ನಿರ್ಮಾಣ; ಬಸವರಾಜ ಬೊಮ್ಮಾಯಿ
ಕಲಬುರಗಿ, ಸೆಪ್ಟೆಂಬರ್ 17- ಬೀದರ್ದಿಂದ ಬಳ್ಳಾರಿವರೆಗೆ ಚತುಷ್ಪಥ ಎಕ್ಸ್ಪ್ರೆಸ್ ಹೈವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, "ಈ ಪ್ರದೇಶ ಅಷ್ಟು ಸುಲಭವಾಗಿ ದೊರೆತಿಲ್ಲ. ಈ ಭಾಗದ ವಿಮೋಚನೆಗೆ ನಾವು ಒಂದು ವರ್ಷ ಕಾಯಬೇಕಾಯಿತು. ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟ ನಿಲುವು ಮತ್ತು ನೇತೃತ್ವದಿಂದ ನಿರ್ಧಾರದಿಂದ ಈ ಭಾಗ ಸಮಗ್ರ ಕರ್ನಾಟಕ ಸೇರುವಂತಾಯಿತು ಎಂದು ಕಲ್ಯಾಣ ಕರ್ನಾಟಕ ವಿಮೋಚನೆಗೆ ಶ್ರಮಿಸಿದ ಗಣ್ಯರು ಹಾಗೂ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸಲು ಮಹನೀಯರು ಹೋರಾಟ ನಡೆಸಿದ್ದಾರೆ," ಎಂದು ಮುಖ್ಯಮಂತ್ರಿ ಸ್ಮರಿಸಿದರು.
ಇನ್ನು ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ ಸಂಪರ್ಕ ಉತ್ತಮ ಗೊಳಿಸಲು ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ಪ್ರೆಸ್ ಹೆದ್ದಾರಿ ಪ್ರಮುಖ ಪಾತ್ರ ವಹಿಸಲಿದೆ. ಈ ಭಾಗದಲ್ಲಿ ರಾಯಚೂರು, ಬಳ್ಳಾರಿ ವಿಮಾನ ನಿಲ್ದಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರದ ನೆರವಿನೊಂದಿಗೆ ಯಾದಗಿರಿ, ರಾಯಚೂರು, ಕಲಬುರಗಿ ರಿಂಗ್ ರೋಡ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್
ಈ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. ಕೇಂದ್ರ ಸರಕಾರ ಕಲಬುರಗಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಿದೆ. ರಾಜ್ಯ ಸರಕಾರ ರಾಯಚೂರು ಹಾಗೂ ಬಿಜಾಪುರದಲ್ಲಿ ಜವಳಿ ಪಾರ್ಕ್ ಮಾಡಲು ನಿರ್ಧರಿಸಿದೆ. ಇದರಿಂದ ಕನಿಷ್ಠ 25 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದಲ್ಲದೆ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾಸೂಟಿಕಲ್ ಕ್ಲಸ್ಟರ್ ನಿರ್ಮಿಸಲಾಗುವುದು. ಕೊಪ್ಪಳದಲ್ಲಿ ಈಗಾಗಲೇ ಆಟಿಕೆಗಳ ಕ್ಲಸ್ಟರ್ ನಿರ್ಮಾಣವಾಗುತ್ತಿದೆ. ಬೀದರ್ನಲ್ಲಿ ಕೇಂದ್ರದ ನೆರವಿನೊಂದಿಗೆ 90 ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಿಪೆಟ್ ಸಂಸ್ಥೆ ಪ್ರಾರಂಭಿಸಲಾಗುವುದು. ಹೀಗೆ ಪ್ರತಿ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಪ್ರಾಮಾಣಿಕವಾಗಿ ಕೆಲಸ ಮಾಡಲು ಕಿವಿಮಾತು
ಈ ಭಾಗದ ಅಭಿವೃದ್ದಿಯಾಗಬೇಕೆಂದರೆ ರಾಜಕಾರಣಿಗಳು ಪಕ್ಷಬೇದ ಮರೆತು ಕೆಲಸ ಮಾಡಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರಾಜಕಾರಣ ಮಾಡಿದರೆ ಈ ಭಾಗಕ್ಕೆ ದೊಡ್ಡ ದ್ರೋಹ ಮಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ
ಕಲಬುರ್ಗಿ ಅಭಿವೃದ್ಧಿಗೆ 100 ಕೋಟಿ ನೀಡಿದ್ದೇನೆ. ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ, ಇಲ್ಲಿ ಎಲ್ಲ ರೀತಿಯ ವೈ ಫೈ ಕನೆಕ್ಟ್, ಕೇಬಲ್ ಕನೆಕ್ಟ್ ಮತ್ತಿತರ ಅತ್ಯಾಧುನಿಕ ಸೌಲಭ್ಯ ಒದಗಿಸುವ ಮೂಲಕ ಅಂತಾರಾಷ್ಟ್ರೀಯ ನಗರ ಮಾಡಲು ತೀರ್ಮಾನಿಸಿದ್ದೇವೆ. ಸಮಸ್ತ ಕರ್ನಾಟಕ ಅಭಿವೃದ್ದಿಯಾಗುತ್ತಿರುವ ಈ ಸಮಯದಲ್ಲಿ ಐತಿಹಾಸಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕವೂ ಅಷ್ಟೇ ವೇಗವಾಗಿ ಬೆಳೆಯಬೇಕು. ಕಲ್ಯಾಣ ಕರ್ನಾಟಕದ ಮೂಲಕ ನವ ಕರ್ನಾಟಕ ಹಾಗೂ ನವ ಭಾರತದ ಅಭಿವೃದ್ದಿಯಾಗಬೇಕು ಎಂದು ಮುಖ್ಯಮಂತ್ರಿ ಆಶಿಸಿದರು.

ಅಮೃತ ಮಹೋತ್ಸವ ವರ್ಷಪೂರ್ತಿ ಆಚರಣೆ
ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ವರ್ಷವನ್ನು ವರ್ಷಪೂರ್ತಿ ಆಚರಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಜನಜಾಗೃತಿಗಾಗಿ ಎಲ್ಲ ಜಿಲ್ಲೆಗಳಲ್ಲಿ ರಥಯಾತ್ರೆ ಕೈಗೊಳ್ಳಲಾಗುವುದು. ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ, ಅವರಿಗೆ ಸಮಸ್ತ ಕರ್ನಾಟಕ ವಿಶೇಷವಾಗಿ ಕಲ್ಯಾಣ ಕರ್ನಾಟಕ ಜನತೆಯ ಪರವಾಗಿ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಅವರು ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಅಂತ ಭರವಸೆ ನೀಡಿ ಎಂದು ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications