'ಬಿಜೆಪಿ ಪರಿವರ್ತನಾ ಯಾತ್ರೆ ಜನರ ದಾರಿ ತಪ್ಪಿಸುವಂತದ್ದು'
ಕಲಬರಗಿ, ಡಿಸೆಂಬರ್ 13: ಬಿಜೆಪಿ ಪರಿವರ್ತನಾ ಯಾತ್ರೆ ಜನರಿಗೆ ದಾರಿ ತಪ್ಪಿಸುವ ಯಾತ್ರೆಯಾಗಿದೆ. ಬಿಜೆಪಿಯವರು ತಮಗೆ ತಾವೇ ಮೊದಲು ಪರಿವರ್ತನೆ ಮಾಡಿಕೊಳ್ಳಲಿ ಎಂದು ಸಚಿವ ಶರಣಪ್ರಕಾಶ ಪಾಟೀಲ್ ಹೇಳಿದರು.
ಕಲಬುರಗಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈ.ಕ ಅಭಿವೃದ್ಧಿ ಬಗ್ಗೆ ಖರ್ಗೆ ಅವರೊಂದಿಗೆ ಭಹಿರಂಗ ಚರ್ಚೆಗೆ ಕೇಂದ್ರ ಸಚಿವ ಅನಂತಕುಮಾರ ಅವರು ಹಾಕಿದ ಸವಾಲಿನ ಕುರಿತು ಮಾತನಾಡಿ, ಖರ್ಗೆ ಅವರೊಂದಿಗೆ ಭಹಿರಂಗ ಚರ್ಚೆಗೆ ಅನಂತಕುಮಾರ, ಯಡಿಯೂರಪ್ಪಗೆ ಯೋಗ್ಯತೆ ಇಲ್ಲ. ಇವರೊಂದಿಗೆ ಭಹಿರಂಗ ಚರ್ಚೆಗೆ ನಾನು ಸಾಕು.. ಚರ್ಚೆಗೆ ನಾನು ಯಾವಾಗಲೂ ಸಿದ್ಧ ಎಂದರು.

ನಾನು ಯಾರೊಂದಿಗೂ ಒಂದೇ ರೂಪಾಯಿ ಕಮಿಷನ್ ತಿಂದಿಲ್ಲ ಹೀಗೆ ಆರೋಪಿಸುವ ಅನಂತಕುಮಾರ ಅವರು ಅದೇ ದಂಧೆಯಲ್ಲಿ ತೊಡಗಿಸಿಕೊಂಡಂತಿದೆ. ರಾಜ್ಯಕ್ಕೆ ಅನಂತಕುಮಾರ ಕೊಡುಗೆ ಏನಿದೆ ಮೊದಲು ಹೇಳಲಿ ಎಂದು ಬಿಜೆಪಿ ಮುಖಂಡರ ವಿರುದ್ಧ ಡಾ ಶರಣಪ್ರಕಾಶ ಪಾಟೀಲ್ ಕಿಡಿಕಾರಿದ್ದಾರೆ.
ಸಿಎಂ ರಾಜ್ಯ ಪ್ರವಾಸದ ಬಗ್ಗೆ ಪಕ್ಷದಲ್ಲಿ ಯಾವುದೇ ರೀತಿಯ ಅಪಸ್ವರ ಇಲ್ಲ. ಇದು ಸರಕಾರಿ ಕಾರ್ಯಕ್ರಮವಾದ್ದರಿಂದ ಪ್ರೋಟೋಕಾಲ್ ಪ್ರಕಾರ ನಡೆಯುತ್ತದೆ. ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಪ್ರತ್ಯೇಕ ಯಾತ್ರೆ ಕೈಗೊಳ್ಳಲಾಗುತ್ತದೆ. ಸಿಎಂ ಯಾತ್ರೆಯ ಬಗ್ಗೆ ನಮ್ಮಲ್ಲಿ ಯಾವುದೇ ರೀತಿಯ ಅಸಮಾಧಾನ , ಅಪಸ್ವರ ಇಲ್ಲವೇ ಇಲ್ಲ ಎಂದು ಹೇಳಿದರು.
ಹಲವು ಯೋಜನೆಗಳಿಗೆ ಅಡಿಗಲ್ಲು, ಉದ್ಘಾಟನೆ ಮತ್ತು ಈಗಾಗಲೇ ಕೈಗೊಂಡಿರುವ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಲು ಈ ಯಾತ್ರೆ ಕೈಗೊಳ್ಳಲಾಗಿದೆ. ಸರಕಾರಿ ಹಣದಲ್ಲಿ ಪಕ್ಷದ ಪ್ರಚಾರ ಅನ್ನೋ ಟೀಕೆ ಸರಿಯಲ್ಲ. ಈ ರೀತಿಯ ಯಾತ್ರೆಗಳು ನಮಗೆ ಹೊಸದೇನೂ ಅಲ್ಲ ಎಂದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications