ಬಿಜೆಪಿ ಸಂಖ್ಯಾಬಲ 104 ರಿಂದ 106ಕ್ಕೇರಿಕೆ: ಶೋಭಾ ಕರಂದ್ಲಾಜೆ ವಿಶ್ವಾಸ
ಚಿಂಚೋಳಿ, ಮೇ 12: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ದಿನ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿಯ ಬಹುತೇಕ ಮುಖಂಡರು ಪಕ್ಷದ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆಯವರು ಚಿಂಚೋಳಿಯಲ್ಲಿ ಮಹಿಳಾ ಪ್ರಚಾರ ಸಮಾವೇಶ ನಡೆಸಿದರು. ಅದಕ್ಕೂ ಮುನ್ನ ತಾಲ್ಲೂಕಿನ ವಿವಿಧ ಗ್ರಾಮಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸಿದರು.
ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಈ ಉಪಚುನಾವಣೆಯ ನಂತರ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 104 ರಿಂದ 106 ಕ್ಕೆ ಏರಿಕೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಂತಹ ಸಂದರ್ಭದಲ್ಲಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಸಹ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕಕ್ಕೆ ಅಪಾರ ಕೊಡುಗೆ ನೀಡಿದೆ.
ಸುವರ್ಣ ಗ್ರಾಮ ನೀರಾವರಿ ಯೋಜನೆಗಳು ಮತ್ತು ರೈಲ್ವೆ ಯೋಜನೆಗಳನ್ನ ಸಕ್ರಿಯವಾಗಿ ಅನುಷ್ಠಾನಗೊಳಿಸಿ ಕಾರ್ಯ ಮಾಡಿದೆ. ಹಾಗಾಗಿ ಇಲ್ಲಿನ ಜನ ಈ ಬಾರಿ ಬಿಜೆಪಿಯನ್ನು ಬಾರಿ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ವಿರುದ್ಧ ಶೋಭ ವಾಗ್ದಾಳಿ
ಉಪಚುನಾವಣೆ ಮತ್ತು ಪ್ರತಿಷ್ಠಿತ ಚುನಾವಣಾ ಕಣಗಳಲ್ಲಿ ಡಿ.ಕೆ.ಶಿವಕುಮಾರ್ ಹಣಬಲ, ಅಧಿಕಾರದ ಬಲ ಮತ್ತು ಬಹುಬಲದಿಂದ ಚುನಾವಣಾ ಅಕ್ರಮ ಎಸಗುತ್ತಿದ್ದಾರೆ. ಆದರೆ ನಮ್ಮ ಕಾರ್ಯಕರ್ತರು ಯಾರು ಕೂಡ ಖರೀದಿಗಿಲ್ಲ. ಇನ್ನು ತಮ್ಮ ಕಾರಿನಲ್ಲೇ ಪ್ರಯಾಣಿಸುವಂತೆ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಬಿಜೆಪಿ ಕಾರು ಇದೆ ಕಾರ್ಯಕರ್ತರು ಇದ್ದಾರೆ. ನಮ್ಮ ಬದಲು ಪೋಲಿಸಿನವರೋ ಅಥವಾ ಇಂಟೆಲಿಜೆನ್ಸ್ ನವರೋ ಪ್ರಯಾಣ ಬೆಳೆಸಿದರೆ ಚುನಾವಣೆಯಲ್ಲಿ ಅಕ್ರಮವಾಗಿ ಹಣ ಹಂಚುವುದನ್ನು ತಡೆಯಬಹುದು ಎಂದು ಶೋಭಾ ಕರಂದ್ಲಾಜೆಯವರು ತಿಳಿಸಿದರು.

ರಾಜ್ಯ ಸರ್ಕಾರ ಬಿದ್ದರೆ ಅದು ಬಿಜೆಪಿಯಿಂದ ಅಲ್ಲ
ರಾಜ್ಯ ಸರ್ಕಾರ ಬಿದ್ದರೆ ಅದು ಬಿಜೆಪಿಯಿಂದ ಅಲ್ಲ ಬದಲಾಗಿ ಕಾಂಗ್ರೇಸ್ನವರ ಒಳಜಗಳ ಮತ್ತು ಒಳಬೇಗುದಿಯಿಂದ ಎಂದು ಶೋಭಾ ಕರಂದ್ಲಾಜೆಯವರು ತಿಳಿಸಿದರು. ಸಿದ್ದರಾಮಯ್ಯ , ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ. ಶಿವಕುಮಾರ್ ಅವರ ಮೇಲಾಟಗಳಿಗೆ ಸರ್ಕಾರ ಬಿದ್ದರು ಬೀಳಬಹುದು ಎಂದರು.

ಮಹಿಳಾ ಪ್ರಚಾರ ಸಮಾವೇಶ
ಇನ್ನು ಚಿಂಚೋಳಿಯ ಪಟ್ಟದ ಹಾರಕೋಡು ಕಲ್ಯಾಣ ಮಂಟಪದಲ್ಲಿ ಶೋಭಾ ಕರಂದ್ಲಾಜೆಯವರು ನೇತೃತ್ವದಲ್ಲಿ ನಡೆದ ಮಹಿಳಾ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಭಾರತಿ, ಸ್ಥಳೀಯ ಮುಖಂಡರಾದ ಉಮಾ ಪಾಟೀಲ್, ಶಕುಂತಲಾ ಪಾಟೀಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಹಲವೆಡೆ ರೋಡ್ ಶೋ ನಡೆಸಿದ ಶೋಭಾ
ಇದಕ್ಕೂ ಮೊದಲು ಚಿಂಚೋಳಿ ವಿಧಾನಸಭಾ ಕ್ಷೇತ್ರದ ರಟಕಲ, ಐನಾಪುರ, ಕೊಟಗಿ, ಚಂದನಾಕ್ಕೆರಾ ದಲ್ಲಿ ರೋಡ್ ಶೋ ನಡೆಸಿ ನಂತರ ಸಾರ್ವಜನಿಕವಾಗಿ ಮಾತಯಾಚನೆ ಮಾಡಿದರು.
ಈ ವೇಳೆ ಮಾತನಾಡಿದ ಶೋಭಾ ಕರಂದ್ಲಾಜೆಯವರು ನವ ಕರ್ನಾಟಕ ನಿರ್ಮಾಣಕ್ಕೆ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಇದಕ್ಕಾಗಿ ಚಿಂಚೋಳಿಯ ಮತದಾರರು ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಅವರನ್ನು ಅಭೂತಪೂರ್ವ ಅಂತರದಿಂದ ಗೆಲ್ಲಿಸಬೇಕೆಂದು ಕೇಳಿಕೊಂಡರು.

ಯುವ ಮತದಾರರ ಜೊತೆ ಸಂವಾದ ನಡೆಸಿದರು
ಈ ರೋಡ್ ಶೋ ಮತ್ತು ಬಹಿರಂಗ ಪ್ರಚಾರದ ಉದ್ದಕ್ಕೂ ಸ್ಥಳೀಯ ಗ್ರಾಮಗಳಿಗೆ ತೆರಳಿ ಅಲ್ಲಿನ ಜನರಿಗೆ ಬಿಜೆಪಿಗೆ ಮತ ಚಲಾಯಿಸುವಂತೆ ಮನವರಿಕೆ ಮಾಡಲಾಯಿತು. ಅಲ್ಲದೆ ಯುವ ಮತದಾರರ ಜೊತೆ ಸಂವಾದ ನಡೆಸಿ ಬಿಜೆಪಿಯನ್ನು ಬೆಂಬಲಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಕುಮಾರಿ ಶೋಭಾ ಕರಂದ್ಲಾಜೆಯವರ ಜೊತೆಯಲ್ಲಿ ಯುವ ನಾಯಕರಾದ ದೊಡ್ಡಪ್ಪ ಗೌಡ ಪಾಟೀಲ್ ನರಿಬೊಳ, ಶ್ರೀಮತಿ ಶಶಿಕಲಾ ಟೆಂಗಳಿ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೋಂಡರು. ಈ ವೇಳೆ ದೇವಕರ ಮಹಾರಾಜ, ರಾಮರಾವ ಪಾಟೀಲ ಹಾಗೂ ಅನೇಕ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications