Get Updates
Get notified of breaking news, exclusive insights, and must-see stories!

ಅಫಜಲಪುರ : ಬಿಜೆಪಿ ಭಿನ್ನಮತ, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಕಲಬುರಗಿ, ಏಪ್ರಿಲ್ 11 : ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾದ ಬಳಿಕ ಕಲಬುರಗಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ಪದಾಧಕಾರಿಗಳು ಮತ್ತು ತಾಲೂಕು ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

ಎಂ.ವೈ.ಪಾಟೀಲ್ ಬೆಂಬಲಿಗರಾದ ಬಿಜೆಪಿ ಪದಾಧಿಕಾರಿಗಳು ಮತ್ತು ತಾಲೂಕು ಪಂಚಾಯಿತು ಸದಸ್ಯರ ಬಿಜೆಪಿ ಸದಸ್ಯತ್ವಕ್ಕೆ ಬುಧವಾರ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಎಂ.ವೈ.ಪಾಟೀಲ ಬೆಂಬಲಿಸುವುದಾಗಿ ಘೋಷಣೆ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಹಲವಾರು ವಿರೋಧಗಳ ನಡುವೆಯೇ ಬಿಜೆಪಿ ಸೇರಿದ್ದರು. ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಅವರನ್ನು ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

BJP ticket issue : Mass resignation by Afzalpur BJP leaders

ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಬಳಿಕ ಮಾಜಿ ಶಾಸಕ ಎಂ.ವೈ.ಪಾಟೀಲ ಅಸಮಾಧಾನಗೊಂಡಿದ್ದರು. ನಂತರ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದರು. ಈಗ ಅವರ ಬೆಂಬಲಿಗರು ಸಾಮೂಹಿಕವಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

'30 ವರ್ಷಗಳಿಂದ ಅಫಜಲಪುರದಲ್ಲಿ ರಾಜಕೀಯ ವೈರಿಗಳಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಈಗ ನಾವು ಒಂದಾಗಿ ಸಾಗಲು ಸಾಧ್ಯವಿಲ್ಲ. ಗುತ್ತೇದಾರ್ ವಿರುದ್ಧ ರಾಜಕೀಯ ಹೋರಾಟ ಮುಂದುವರೆಸಲು ಕಾಂಗ್ರೆಸ್ ಸೇರುತ್ತಿರುವುದಾಗಿ' ಎಂ.ವೈ.ಪಾಟೀಲ ಹೇಳಿದ್ದರು.

ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು 7 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 6 ಬಾರಿ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. 2013ರ ಚುನಾವಣೆಯಲ್ಲಿ ಅವರು 38,093 ಮತಗಳನ್ನು ಪಡೆದು ಜಯಗಳಿಸಿದ್ದರು.

ಸಚಿವ ಸ್ಥಾನ ಪಡೆಯಲು ಅವರು ಹಲವಾರಿ ಬಾರಿ ಪ್ರಯತ್ನ ಪಟ್ಟಿದ್ದರು. ಆದರೆ, ಸಚಿವ ಸಂಪುಟ ಸೇರುವ ಅವರ ಆಸೆ ಈಡೇರಿರಲಿಲ್ಲ. ಕೆಲವು ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಿಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು.

ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಬಳಿಕ ಮಾರ್ಚ್ 30ರಂದು ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಆದೇಶ ಹೊರಡಿಸಿದ್ದರು.

ಏಪ್ರಿಲ್ 5ರಂದು ರಾಣೆಬೆನ್ನೂರಿನಲ್ಲಿ ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರನ್ನು ಭೇಟಿ ಮಾಡಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಅವರನ್ನು ಅಫಜಲಪುರ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಕಾಂಗ್ರೆಸ್ ತವರು ಮನೆ : 'ಕಾಂಗ್ರೆಸ್ ನನ್ನ ತವರು ಮನೆ. ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರಿದ್ದರಿಂದ ನಾನು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದೆ. ಈಗ ಮಾತೃಪಕ್ಷಕ್ಕೆ ವಾಪಸ್ ಆಗಿದ್ದೇನೆ' ಎಂದು ಎಂ.ವೈ.ಪಾಟೀಲ ಹೇಳಿದ್ದಾರೆ.

ಉಚ್ಛಾಟನೆ ಮಾಡಬೇಕಾಯಿತು : 'ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ನಾನು, ಸಿದ್ದರಾಮಯ್ಯ ಬಹಳ ಪ್ರಯತ್ನ ನಡೆಸಿದೆವು. ಅವರು ಪಕ್ಷ ತೊರೆಯಲು ಕಾರಣಗಳೇ ಇರಲಿಲ್ಲ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಕಾರಣ ಉಚ್ಛಾಟನೆ ಮಾಡಬೇಕಾಯಿತು' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+