ಚಿಂಚೋಳಿ ಉಪ ಚುನಾವಣೆ : ಬಿಜೆಪಿಯ ಅವಿನಾಶ್ ಜಾಧವ್ ಗೆಲುವು
ಕಲಬುರಗಿ, ಮೇ 23 : ಭಾರಿ ಕುತೂಹಲ ಮೂಡಿಸಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ. ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದಾಗಿ ಉಪ ಚುನಾವಣೆ ಎದುರಾಗಿತ್ತು.
ಗುರುವಾರ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಅವರು 8026 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಕಾಂಗ್ರೆಸ್-ಜೆಡಿಎಸ್ನ ಸುಭಾಷ್ ರಾಥೋಡ್ ಅವರು ಸೋಲು ಅನುಭವಿಸಿದರು.
2018ರ ಚುನಾವಣೆಯಲ್ಲಿ ಕಾಂಗ್ರೆಸ್ನ ಡಾ.ಉಮೇಶ್ ಜಾಧವ್ ಕ್ಷೇತ್ರದಲ್ಲಿ ಜಯಗಳಿಸಿದ್ದರು. ಈಗ ಉಪ ಚುನಾವಣೆಯಲ್ಲಿ ಅವರ ಪುತ್ರ ಡಾ.ಅವಿನಾಶ್ ಜಾಧವ್ ಅವರು ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಾ.ಉಮೇಶ್ ಜಾಧವ್ ಅವರ ನಡುವಿನ ಪ್ರತಿಷ್ಠೆಯ ಹೋರಾಟವಾಗಿತ್ತು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಗುಲ್ಬರ್ಗದಲ್ಲಿ ಗೆದ್ದ ಉಮೇಶ್ ಜಾಧವ್, ಚಿಂಚೋಳಿಯಲ್ಲಿ ಪುತ್ರನನ್ನು ಗೆಲ್ಲಿಸಿದ್ದಾರೆ. ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ದೊಡ್ಡ ಅಘಾತ ಉಂಟು ಮಾಡಿದ್ದಾರೆ.

ಡಾ.ಅವಿನಾಶ್ ಜಾಧವ್ ಗೆಲುವು
* ಡಾ.ಅವಿನಾಶ್ ಜಾಧವ್ 69,109 ಮತ
* ಸುಭಾಷ್ ರಾಥೋಡ್ 61079 ಮತ
* ಗೆಲುವಿನ ಅಂತರ 8030 ಮತಗಳು

ಡಾಕ್ಟರ್ ಈಗ ಶಾಸಕರು
ಡಾ.ಅವಿನಾಶ್ ಜಾಧವ್ ಅವರು ಎಂಬಿಬಿಎಸ್ ಪೂರ್ಣಗೊಳಿಸಿದ್ದಾರೆ. ಎಂಡಿ ಜನರಲ್ ಮೆಡಿಸಿನ್ ಕೋರ್ಸ್ ಅನ್ನು ಕಲಬುರಗಿಯ ಕೆಬಿಎಸ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೇ 8ರಂದು ಅವರು ಪರೀಕ್ಷೆ ಬರೆದಿದ್ದಾರೆ.

ಅಪ್ಪ ಸಂಸತ್ಗೆ, ಮಗ ವಿಧಾನಸಭೆಗೆ
ಡಾ.ಉಮೇಶ್ ಜಾಧವ್ ಅವರು ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿ ಸಂಸತ್ ಪ್ರವೇಶಿಸಿದ್ದಾರೆ. ಉಮೇಶ್ ಜಾಧವ್ ಪುತ್ರ ಡಾ.ಅವಿನಾಶ್ ಜಾಧವ್ ಚಿಂಚೋಳಿ ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದಾರೆ.

ಮಾವನ ಮನೆಯಲ್ಲಿ ಒಪ್ಪಿಗೆ ಇರಲಿಲ್ಲ
ಡಾ.ಅವಿನಾಶ್ ಜಾಧವ್ ಅವರು 6 ತಿಂಗಳ ಹಿಂದೆ ವಿವಾಹವಾಗಿದ್ದಾರೆ. ಮಾವನ ಮನೆಯಲ್ಲಿ ಅವರು ರಾಜಕೀಯಕ್ಕೆ ಬರುವುದಕ್ಕೆ ಒಪ್ಪಿಗೆ ಇರಲಿಲ್ಲ. ಆದರೆ, ಪಕ್ಷ ಹೈಕಮಾಂಡ್ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಅವರು ಜಯಗಳಿಸಿದ್ದಾರೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications