ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್ ನಲ್ಲಿ ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ : ಸೋಮಣ್ಣ ಭವಿಷ್ಯ

|
Google Oneindia Kannada News

Recommended Video

ಜೂನ್ ನಲ್ಲಿ ಬಿ ಎಸ್ ವೈ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತ | ಬಿಜೆಪಿ ನಾಯಕನ ಭವಿಷ್ಯ

ಕಲಬುರಗಿ, ಮೇ 06: ಲೋಕಸಭೆ ಚುನಾವಣೆ 2019ರ ಫಲಿತಾಂಶದ ನಂತರ ರಾಜ್ಯ ಹಾಗೂ ರಾಷ್ಟ್ರ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ವಿ ಸೋಮಣ್ಣ ಅವರು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಬಗ್ಗೆ ಭವಿಷ್ಯ ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರವು ಮೇ 30ರೊಳಗೆ ಪತನವಾಗಲಿದೆ. ಆನಂತರ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ಅಧಿಕಾರ ಸ್ಥಾಪಿಸಲಿದೆ ಎಂದರು.

ಬಿಎಲ್‌ ಸಂತೋಷ್ ಗೆ ಬಡ್ತಿ, ಬಿಜೆಪಿ ಅಧ್ಯಕ್ಷ ಸ್ಥಾನ ರವಿಗೆ ಖಾತ್ರಿ? ಬಿಎಲ್‌ ಸಂತೋಷ್ ಗೆ ಬಡ್ತಿ, ಬಿಜೆಪಿ ಅಧ್ಯಕ್ಷ ಸ್ಥಾನ ರವಿಗೆ ಖಾತ್ರಿ?

ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕೂಡಾ ಲೋಕಸಭೆ ಚುನಾವಣೆ 2019 ಜೊತೆಗೆ ನಡೆಯುತ್ತಿದ್ದು, ಮೇ 23ರಂದು ಫಲಿತಾಂಶ ಹೊರ ಬರಲಿದೆ. ಈ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ.

BS Yeddyurappa will become CM by June second week : VSomanna

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಸದ್ಯ 104 ಶಾಸಕರನ್ನು ಹೊಂದಿದೆ. ಉಪ ಚುನಾವಣೆ ಫಲಿತಾಂಶದ ಬಳಿಕ 106ಕ್ಕೇರಲಿದೆ. ಯಡಿಯೂರಪ್ಪ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಬಹುಮತ ಸಾಬೀತು ಪಡಿಸಲು ಬೇಕಾದ ಸಂಖ್ಯೆಯನ್ನು ಮೈತ್ರಿ ಸರ್ಕಾರದ ಭಿನ್ನಮತೀಯರು ಒದಗಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ತೀವ್ರವಾಗಿ ಬರ ಪರಿಸ್ಥಿತಿಯಿದೆ. ಆದರೆ, ಸಾರ್ವಜನಿಕರ ಹಣವನ್ನು ಎಚ್ ಡಿ ಕುಮಾರಸ್ವಾಮಿ ದುರ್ಬಳಕೆ ಮಾಡುತ್ತಿದ್ದಾರೆ. ರೆಸಾರ್ಟ್ ನಲ್ಲಿ ತಂಗುವುದು, ಸ್ವಂತ ಹಿತಕ್ಕಾಗಿ ಹೋಮ ಹವನ ಮಾಡಿಕೊಳ್ಳುವುದು ಇದಕ್ಕೆಲ್ಲ ಸಾರ್ವಜನಿಕರ ಹಣವನ್ನು ಬಳಸುವುದನ್ನು ನಾನು ಈ ಹಿಂದೆ ನೋಡಿರಲಿಲ್ಲ ಎಂದು ಟೀಕಿಸಿದರು.

English summary
Former Minister V Somanna said, HD Kumaraswamy's coaliation government will perish by May 30 and BS Yeddyurappa led BJP government will be formed by June second week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X