ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ರಾಜಕಾರಣ ದಿಕ್ಕು ಬದಲಾಯಿಸಲು ಮತ ನೀಡಿ : ಜಾಧವ್

|
Google Oneindia Kannada News

ಚಿಂಚೋಳಿ, ಮೇ 17: ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಅವಿನಾಶ್ ಜಾಧವ್ ಅವರು ಬಿರು ಬಿಸಿಲನ್ನೂ ಲೆಕ್ಕಿಸದೆ ಬಿರುಸಿನ ಪ್ರಚಾರ ನಡೆಸಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕ್ಷೇತ್ರದ ಅಭಿವೃದ್ದಿ ಮಾಡುವುದು ನನ್ನ ಮೂಲ ಉದ್ದೇಶವಾಗಿದೆ. ಕ್ಷೇತ್ರದ ಮತದಾರರ ಮನೆಯ ಮಗನಾಗಿ ದುಡಿಯಲಿದ್ದೇನೆ. ಈ ಚುನಾವಣೆ ಕೇವಲ ನನ್ನ ಭವಿಷ್ಯ ಅಷ್ಟೇ ಅಲ್ಲ ರಾಜ್ಯ ರಾಜಕಾರಣದ ದಿಕ್ಕು ಬದಲಾಗಲಿದೆ. ಈ ಬದಲಾವಣೆಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ'ಸಿಎಂ' ಟ್ವೀಟ್ ಬಗ್ಗೆ ಕಾಲೆಳೆದ ಅರವಿಂದ ಲಿಂಬಾವಳಿಸಿದ್ದರಾಮಯ್ಯ'ಸಿಎಂ' ಟ್ವೀಟ್ ಬಗ್ಗೆ ಕಾಲೆಳೆದ ಅರವಿಂದ ಲಿಂಬಾವಳಿ

ಮೇಘಾ ಗ್ರಾಮ, ಮೋಘ ತಾಂಡಾ, ನಾರನಲ್ ತಾಂಡಾ, ಸಾಸರ್ಗಾವ್ ಸೇರಿದಂತೆ ಅನೇಕ ಹಳ್ಳಿಗಳಿಗೆ ತೆರಳಿದ ಅವಿನಾಶ್ ಜಾಧವ್ ಬಿರುಸಿನ ಪ್ರಚಾರದಲ್ಲಿ ಪಾಲ್ಗೊಂಡರು. ದೇಶಾದ್ಯಂತ ಮೋದಿ ಅಲೆ ಇದೆ. ಕ್ಷೇತ್ರದ ಅಭಿವೃದ್ದಿಗೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿದ್ದರಿಂದ ನನ್ನ ತಂದೆ ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ ಎಂದರು.

Chincholi BJP Candidate Avinash Jadhav Election Campaign

ಚಿಂಚೋಳಿ ಉಪಚುನಾವಣೆಯಲ್ಲಿ ಸಮಾಜ ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಹಾಗೂ ಮಲ್ಲಿಕಾರ್ಜುನ ಖರ್ಗೆರವರು ಪೊಲೀಸ್ ಪೈಲೆಟ್ ಬಳಸಿಕೊಂಡು ಅಕ್ರಮ ಎಸಗಿದ್ದಾರೆ. ಈ ಕ್ಷೇತ್ರದಲ್ಲಿ ಅಕ್ರಮ, ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ ಎಂದರು.

English summary
Chincholi BJP Candidate Avinash Jadhav today(May 17) campaigned in many villages as today is the last day for out door campaign. Dr Avinash said vote for Change and Voter for better India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X