ಚಿತ್ತಾಪುರದಲ್ಲಿ ಚುನಾವಣಾ ಪೂರ್ವ ಬಿಜೆಪಿ ರಣ ಕಹಳೆಯೇ?
ಕಲಬುರಗಿ ಡಿಸೆಂಬರ್ ೧೧ : ಚಿತ್ತಾಪುರದಲ್ಲಿ ಸೋಮವಾರ ಬಿಜೆಪಿ ಪರಿವರ್ತನಾ ಯಾತ್ರೆ ನಡೆಯಿತು. ಕ್ಷೇತ್ರದ ಜನತೆ ಈ ಪರಿವರ್ತನಾ ಯತ್ರೆಯು 2018ರ ಚುನಾವಣೆ ರಣ ಕಹಳೆ ಎಂದೇ ಭಾವಿಸಿದ್ದಾರೆ. ಹೇಗಾದರೂ ಮಾಡಿ 159 ಸ್ಥಾನಗಳನ್ನು ಪಡೆಯಲೇ ಬೇಕು ಎಂಬ ಛಲದೊಂದಿಗೆ ರಾಜ್ಯಾದಾದ್ಯಂತ ಭರ್ಜರಿ ಯಾತ್ರೆ ಮೂಲಕ ಪಕ್ಷವು ಸಂಘಟನೆಯಲ್ಲಿ ತೊಡಗಿದೆ.
ತಾಲ್ಲೂಕಿನಲ್ಲಿ ಪಕ್ಷ ಸಂಘಟನೆಗೆ ಯುವ ಪಡೆಯನ್ನು ತಯಾರು ಮಾಡಿದ್ದು ಮಂಡಲ ಅದ್ಯಕ್ಷ ಮಲ್ಲಿಕರ್ಜುನ ಎಮ್ಮೆನೋರ ವಿವಿಧ ಮೋರ್ಚಾ ಅದ್ಯಕ್ಷರು ಮತ್ತು ಪದಾಧಿಕಾರಿಗಳು ಪಕ್ಷವು ವಹಿಸಿದ ಜವಾಬ್ದಾರಿಯನ್ನು ಸದುಪಯೋಗಪಡಿಸಿಕೊಂಡು ಸಂಘಟನೆಗೆ ಒತ್ತು ನೀಡಿದ್ದಾರೆ. ಹೆಂಗಾದರೂ ಮಾಡಿ ಕಳೆದುಕೊಂಡ ವಿಧಾನ ಸಭಾ ಕ್ಷೇತ್ರವನ್ನು ಮರಳಿ ಪಡೆಯಲು ತೀವ್ರ ಕಠಿಣ ಶ್ರಮ ಇಲ್ಲಿನ ನಾಯಕರು ಮಾಡುತ್ತೀದ್ದಾರೆ.

ಚಿತ್ತಾಪೂರ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದರಿಂದ ಟಿಕೇಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದರೆ ಬಹಿರಂಗವಾಗಿ ಯಾವ ನಾಯಕರು ತೊರ್ಪಡಿಸಿತ್ತಿಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದು ಅಂತು ಹೇಳುತ್ತಿದ್ದಾರೆ. ನಮಗೆ ಪಕ್ಷವು ಜವಾಬ್ದಾರಿ ಕೊಟ್ಟಿದೆ ಎಲ್ಲರೂ ಕೂಡಿ ಪಕ್ಷ ಸಂಘಟನೆ ಮಾಡಿ ಕ್ಷೇತ್ರದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಿದ್ದೇವೆ ಎಂದು ನಾಯಕರು ಹೇಳುತ್ತಾರೆ.
ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ ಮಾಜಿ ಶಾಸಕ ವಾಲ್ಮೀಕಿ ನಾಯಕ ತಾವು ಚುನಾವಣೆಯಲ್ಲಿ ಗೆದ್ದು ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದು ಕಳೆದ ಚುನಾವಣೆಯಲ್ಲಿ ಸೊತ್ತಿದ್ದು ತಮ್ಮಗೆ ಇನ್ನೊಂದು ಅವಕಾಶ ಕಲ್ಪಿಸಿ ಎಂದು ಕೇಳುತ್ತೀದ್ದಾರೆ. ಬಿಜೆಪಿ ಯುವ ಮುಖಂಡ ಅರವಿಂದ ಚವ್ಹಾಣ ಅವರು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಗೆದ್ದು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಕ್ಷೇತ್ರದಲ್ಲಿ ಪ್ರಭಲ ಆಕಾಂಕ್ಷಿ ಆಗಿದ್ದಾರೆ.
ಅಭಿವೃದ್ಧಿಯ ಕನಸ್ಸು ಹೊತ್ತಿರುವ ತಮ್ಮಗೆ ಪಕ್ಷವು ಟಿಕೆಟ್ ನೀಡಿದಲ್ಲಿ ಯುವಕರಿಗೆ ಆದ್ಯತೆ ಮತ್ತು ಅಭಿವೃದ್ಧಿ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಈಗಿನಿಂದಲೇ ಕ್ಷೇತ್ರದಲ್ಲಿ ಸಂಘಟನೆಗೆ ಆಧ್ಯತೆ ನೀಡಿ ಸಂಚಾರ ಕೈಗೊಂಡಿದ್ದಾರೆ. ಆದರೆ ಪಕ್ಷವು ಯಾರಿಗೆ ಬಿಜೆಪಿ ಚಿತ್ತಾಪುರ ಮತಕ್ಷೇತ್ರದ ಟಿಕೇಟ್ ಈಗ ಕಾಯಬೇಕು ಅಷ್ಟೆ.
ಆಕಾಂಕ್ಷಿಗಳ ಪಟ್ಟಿ: ಮಾಜಿ ಸಚಿವ ಬಾಬುರಾವ ಚೌವ್ಹಾಣ, ವಾಲ್ಮೀಕಿ ನಾಯಕ,ಮಲ್ಲಿಕಾರ್ಜುನ ಎಮ್ಮೆನೋರ, ಶಂಕರ್ ಚೌವ್ಹಾಣ, ಗೋಪಾಲ ರಾಠೋಡ, ಹಾಗೂ ಟಿಕೇಟ್ ಮೇಲೆ ಕಣ್ಣಿಟ್ಟು ಪಕ್ಷದ ಸೇರ್ಪಡೆಗೊಂಡಿರುವ ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಬಸವರಾಜ ಬೆಣ್ಣೂರ, ಹಲವು ಮುಖಂಡರುನ ತೆರೆಮರೆಯಲ್ಲಿ ಪಕ್ಷದ ಟಿಕೇಟ್ ಗಾಗಿ ಕಸರತ್ತು ನಡೆಸಿದ್ದಾರೆ. ಮುಂದಿನ ದಿನದಲ್ಲಿ ಚಿತ್ತಾಪುರ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಕಾದು ನೋಡಬೇಕು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications