ರಾಜ್ಯ ಸರ್ಕಾರದ ಮುಂದೆ ಸಂಪುಟ ವಿಸ್ತರಣೆ ಪ್ರಸ್ತಾಪವೇ ಇಲ್ಲ: ಯಡಿಯೂರಪ್ಪ

ಕಲಬುರಗಿ, ಜುಲೈ 10: ರಾಜ್ಯ ಸರ್ಕಾರದ ಮುಂದೆ ಸಂಪುಟ ವಿಸ್ತರಣೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ಯಾವುದೇ ಚಿಂತನೆಗಳೂ ಇಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗುವ ಸಾಧ್ಯತೆಗಳಿದ್ದು, ಮೂರನೇ ಅಲೆ ತಡೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

CM Yediyurappa Says No Proposal Before The Govt To Either Expand Of Reshuffle The Cabinet

ಇದೇ ವೇಳೆ ಕೇಂದ್ರ ಸಂಪುಟದಲ್ಲಿ ರಾಜ್ಯದ ನಾಲ್ವರು ನಾಯಕರಿಗೆ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಕೆಆರ್‌ಎಸ್ ಅಣೆಕಟ್ಟು ಬಿರುಕು ವಿಚಾರ ಕುರಿತು ಮಂಡ್ಯ ಸಂಸದೆ ಸುಮಲತಾ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ನಡುವೆ ಮುಂದುವರೆದಿರುವ ವಾಕ್ಸಮರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.

ಕೆಲವು ದಿನಗಳ ಹಿಂದೆ ರಾಜ್ಯದ ನಾಯಕತ್ವ ಬದಲಾವಣೆ ಕುರಿತು ಎಲ್ಲೆಡೆ ಸುದ್ದಿ ಹರಿದಾಡುತ್ತಿತ್ತು, ಈಗ ಕೆಲವು ದಿನಗಳಿಂದ ಆ ವಿಚಾರ ಸ್ವಲ್ಪ ತಣ್ಣಗಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+