ಸರ್ಕಾರಿ ಹಣದಿಂದ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್: ಶ್ರೀರಾಮುಲು

ಕಲಬುರಗಿ, ಡಿಸೆಂಬರ್ 11 : ಕಾಂಗ್ರೆಸ್ ಪಕ್ಷ ಸಾಧನಾ ಸಮಾವೇಶಕ್ಕೆ ದುಡ್ಡು ಹೊಂದಿಸಲು ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಆರೋಪಿಸಿದ್ದಾರೆ.

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದಲ್ಲಿ ನಡೆದ ನವಕರ್ನಾಟಕ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನ ಸಾಧನಾ ಸಮಾವೇಶವನ್ನು ಟೀಕಿಸಿದರು.

'ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷ ಸಾಧನಾ ಸಮಾವೇಶ ಮಾಡುತ್ತಿದೆ? ಸರ್ಕಾರದ ಸಾಧನೆಗಳಾದರೂ ಏನು? ಎಂದು ಪ್ರಶ್ನಿಸಿದರು.

Congress making its election campaign by govt money: Sriramulu

'ಪಕ್ಷದ ಸಮಾವೇಶಕ್ಕೆ ಸರ್ಕಾರದ ಹಣ ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದ ಶ್ರೀರಾಮುಲು , ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎಸ್‌ಪಿಗಳ ಮೂಲಕ ಹಣ ಹೊಂದಾಣಿಕೆ ಮಾಡಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿ ಈ ಬಾರಿ ಖಂಡಿತವಾಗಿ ಅಧಿಕಾರಕ್ಕೆ ಬರುತ್ತದೆ ಎಂದ ಅವರು 'ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬರೋದು ಅಷ್ಟೆ ಸತ್ಯ' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+