Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ ಪ್ರಚೋದನೆ ನೀಡಿದೆ, ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ ಮಾಡಲಾಗಿದೆ: ಸಿಎಂ ಬೊಮ್ಮಾಯಿ

ಕಲಬುರಗಿ, ಮಾರ್ಚ್ 28: ಕಾಂಗ್ರೆಸ್ ಪಕ್ಷವು ವ್ಯವಸ್ಥಿತವಾಗಿ ಪ್ರಚೋದನೆ ನೀಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಕಲಬುರಗಿಯಲ್ಲಿ ಸುದ್ದಿಗಾರರು, ಬಿಎಸ್‌ವೈ ಮನೆ ಮೇಲಿನ ಕಲ್ಲು ತೂರಾಟ ಬಿಜೆಪಿ ಕುತಂತ್ರ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪನವರ ಮನೆ ಬಳಿ ಕ್ಯಾಮರಾದಲ್ಲಿ ಸೆರೆಸಿಕ್ಕವರು ಕಾಂಗ್ರೆಸ್ ನಾಯಕರು. ಅವರು ಹಿಂದಿನ ದಿನ ಜನಾಂಗದವರನ್ನು ತಪ್ಪು ದಾರಿಗೆ ಎಳೆದು, ಪರಿಶಿಷ್ಟ ಜಾತಿ (ಎಸ್.ಸಿ) ಪಟ್ಟಿಯಿಂದ ಜನಾಂಗವನ್ನು ತೆಗೆಯುತ್ತಾರೆ ಎಂದು ಸುಳ್ಳು ಹೇಳಿ ಪ್ರಚೋದಿಸಿದ್ದಾರೆ.

Congress Provoked Reason For Stone Pelting On BS Yediyurappas House: CM Bommai

ಅಷ್ಟೇ ಅಲ್ಲದೇ ರಾತ್ರೋ ರಾತ್ರಿ ಅವರು ಸಭೆ ಕರೆದು ಎಲ್ಲವನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಮಾಡಿದೆ. ಇದೆಲ್ಲವು ನಾವು ಸಾಕ್ಷಿ ಸಮೇತವಾಗಿ ಹೇಳುತ್ತಿದ್ದೇವೆ. ಸುಳ್ಳು ಹೇಳುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಡಬೇಕು ಎಂದು ಹೇಳಿದರು.

ವಿಪಕ್ಷ ಕಾಂಗ್ರೆಸ್ ನಾಯಕರಿಗೆ ಹೊಟ್ಟೆ ಕಿಚ್ಚು

ಜವಳಿ ಪಾರ್ಕ್ ಬಗ್ಗೆ ಒಂದೂವರೆ ವರ್ಷಗಳಿಂದ ಮಾತನಾಡುತ್ತಿದ್ದೇವೆ. ಜವಳಿ ಪಾರ್ಕ್ ನೂತನ ಜವಳಿ ನೀತಿಯಲ್ಲಿ ಬಂದಿದ್ದು, ಪ್ರಧಾನಿಮಂತ್ರಿಗಳು ಜವಳಿ ಪಾರ್ಕ್‌ ನಿರ್ಮಾಣದ ಮೂಲಕ ಹೆಚ್ಚು ಉದ್ಯೋಗ ಮತ್ತು ರಫ್ತು ಆಗಬೇಕೆಂಬ ಹಿನ್ನೆಲೆಯ ಮಹತ್ವವಾದ ಯೋಜನೆ ಕೈಗೆತ್ತಕೊಳ್ಳಲಾಗಿದೆ. ಕಲಬುರಗಿಗೆ ಬಂದಿರುವುದಕ್ಕೆ ಅಭಿನಂದನೆ ಸಲ್ಲಿಸಬೇಕು. ಕಾಂಗ್ರೆಸ್ ನವರಿಗೆ ಹೊಟ್ಟೆಕಿಚ್ಚು. ಅವರು ಮಾಡಲು ಸಾಧ್ಯವಾಗದೆ ಇದ್ದುದನ್ನು ನಾವು ಮಾಡಿದ್ದೇವೆ. ಏನೆಯಾದರೂ ಎಲ್ಲವನ್ನು ಜನರು ಗಮನಿಸುತ್ತಿರುತ್ತಾರೆ ಎಂದು ಅವರು ಟಾಂಗ್ ನೀಡಿದರು.

Congress Provoked Reason For Stone Pelting On BS Yediyurappas House: CM Bommai

ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಅವರು ಚುನಾವಣೆ ಘೋಷಣೆ ಯಾದ ನಂತರ ವಲಸೆ ಬರಲಿದ್ದಾರೆ ಎಂದು ಚೆಲುವ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ ಚೆಲುವ ನಾರಾಯಣಸ್ವಾಮಿಯವರೇ ಒಬ್ಬ ವಲಸಿಗರು. ಅಂತವರ ಮಾರು ಮಾತು ನಂಬಲು ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ರಾಜ್ಯದ ಹಳೇ ಮೈಸೂರು ಭಾಗದಲ್ಲಿ ಹೊಂದಾಣಿಕೆ ಜೆಡಿಎಸ್ ಜೊತೆ ಮಾಡಿಕೊಳ್ಳಗುವುದಿಲ್ಲ. ಹೀಗೆಂದು ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೇಶ್ವರ್ ಅವರು ಹೇಳಿರುವುದು ಸರಿಯಾಗಿಯೇ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಂದಾಣಿಕೆ ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು.

ಎಸ್‌ಡಿಪಿಐ ಹೇಳಿಕೆ ಆಧಾರದಲ್ಲಿ ಕ್ರಮ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಅಲ್ಪಸಂಖ್ಯಾತರ ವಿರೋಧಿಯಾದ ಒಂದು ದೇಶದ್ರೋಹಿ ಸಂಸ್ಥೆ. ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ.ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧವಾಗಿಯೇ ಇದ್ದಾರೆ. ಅದಕ್ಕೆಲ್ಲ ಸೊಪ್ಪು ಹಾಕಲ್ಲ. ಆ ಎಸ್‌ಡಿಪಿಐ ಹೇಳಿಕೆ ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

ಏಪ್ರಿಲ್ ಆರಂಭದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆ ಮಾಡುವುದು ಬಹುತೇಕ ಪಕ್ಕ ಎನ್ನಲಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಕಳೆದ 2-3 ದಿನಗಳಿಂದ ಬಿಜೆಪಿ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಕಾಂಗ್ರೆಸ್‌ನವರು ಹೇಳಿದ್ದಾರೆ. ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೆ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದಿವಾಳಿಯಾಗಿದೆ ಎಂದು ಅವರು ಕಿಡಿ ಕಾರಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+