ಕಾಂಗ್ರೆಸ್ಸಿಗೆ ದಲಿತರೆಂದರೆ ಮತ ಬ್ಯಾಂಕ್ ಅಷ್ಟೇ: ನಾರಾಯಣಸ್ವಾಮಿ
ಚಿಂಚೋಳಿ, ಮೇ 7: '70 ವರ್ಷಗಳಿಂದ ಕಾಂಗ್ರೆಸ್ ಪಕ್ಷದವರು ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ದಲಿತರು ಕಾಂಗ್ರೆಸ್ ಪಕ್ಷದಲ್ಲಿ ಜೀತದಾಳಿನ ಪರಿಸ್ಥಿತಿಯಲ್ಲಿದ್ದಾರೆ' ಎಂದು ಛಲವಾದಿ ಸಂಘಟನಾ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಚಿಂಚೋಳಿ ಪಟ್ಟಣದ ಚಂದಾಪುರದಲ್ಲಿ ಮಾಜಿ ಶಾಸಕ ಉಮೇಶ ಜಾಧವ ಅವರ ನಿವಾಸದಲ್ಲಿ ಮಂಗಳವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀತ ಪದ್ಧತಿ ಹೋಗಲಾಡಿಸುತ್ತೇವೆ ಎಂದು ಹೇಳುವ ಕಾಂಗ್ರೆಸ್ ಪಕ್ಷದಲ್ಲಿಯೇ ದಲಿತರು ಜೀತದಾಳಿನ ಪರಿಸ್ಥಿತಿಯಲ್ಲಿದ್ದಾರೆ ಎಂದರು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೆ ಅಲ್ಲಿ ದಲಿತರನ್ನು ಮತಬ್ಯಾಂಕ್ ಮಾಡಿಕೊಂಡು ರಾಜಕೀಯ ಮಾಡುತ್ತಾರೆ ಹೊರತು ಅವರ ಅಭಿವೃದ್ಧಿಗಾಗಿ ಶ್ರಮಿಸುವುದಿಲ್ಲ. ಕಾಂಗ್ರೆಸ್ ನಲ್ಲಿ ದಲಿತರು ಜೀತ ಪದ್ಧತಿ ಇದ್ದ ಪರಿಸ್ಥಿಯನ್ನು ಕಂಡ ನಾನು ಎಲ್ಲಾ ಸಮುದಾಯದ ಅಭಿವೃದ್ದಿಗೆ ಶ್ರಮಿಸುವ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ಜತೆಗೆ ಕಾಂಗ್ರೆಸ್ನಲ್ಲಿದ್ದ ನಮ್ಮ ಸಮುದಾಯದ ಜನರನ್ನು ಬಿಜೆಪಿ ತರಲಾಗುತ್ತಿದೆ ಎಂದರು.

ಹಾಗೆಯೇ ಉಮೇಶ ಜಾಧವ ಅವರು ಜೀತ ಪದ್ಧತಿಗೆ ಧಿಕ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಈಗ ಇಲ್ಲಿ ಉಪಚುನಾವಣೆಯಲ್ಲಿ ಅವರ ಪುತ್ರ ಅವಿನಾಶ ಜಾಧವ ಅವರಿಗೆ ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿನ ಜೀತ ಪದ್ಧತಿ ಹೋಗಲಾಡಿಸಲು ಹಾಗೂ ಚಿಂಚೋಳಿ ಕ್ಷೇತ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಅವಿನಾಶ ಜಾಧವ ಅವರಿಗೆ ಹೆಚ್ಚಿನ ಮತಗಳು ನೀಡುವುದರ ಮೂಲಕ ಅಭಿವೃದ್ಧಿಗೆ ಮುಂದಾಗೋಣ ಎಂದರು.
ಬಿಜೆಪಿಯವರು ಸಂವಿಧಾನ ಬದಲಾಯಿಸುತ್ತಾರೆ ಎಂದು ಕಾಂಗ್ರೆಸ್ ನವರು ಅಪಪ್ರಚಾರ ಮಾಡುತ್ತಿದ್ದಾರೆ ದಲಿತರು ಇದಕ್ಕೆ ಕಿವಿ ಕೊಡಬಾರದು ನರೇಂದ್ರ ಮೋದಿಯವರು ಇರುವವರೆಗೂ ಸಂವಿಧಾನ ಬದಲಾಗಲ್ಲ ಎಂದು ಖುದ್ದು ನರೇಂದ್ರ ಮೋದಿಯವರೆ ಹೇಳಿದ್ದಾರೆ. ಬಿಜೆಪಿಯವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಲ್ಲ ಸಾಂದರ್ಭಿಕಾಗಿ ತಿದ್ದುಪಡಿ ಮಾಡುತ್ತೇವೆ ಎಂದಿದ್ದಾರೆ.
ಸಂವಿಧಾನ ಬಗ್ಗೆ ಗೌರವ ತೋರಿಸುವಂತೆ ನಾಟಕ ಮಾಡುವ ಕಾಂಗ್ರೆಸ್ ನವರು ಇಲ್ಲಿ ತನಕ ಸುಮಾರು 88 ಬಾರಿ ತಿದ್ದುಪಡಿ ಮಾಡಿದ್ದಾರೆ ಇದರ ಬಗ್ಗೆ ಮಾತನಾಡಲಿ ನೋಡೋಣ ಎಂದರು.
ಮುಖಂಡರಾದ ರವಿಚಂದ್ರ ಕಾಂತಿಕಾರ, ಅಂಬರಾವ ಅಸ್ಟಗಿ, ಆಕಾಶ ಕೊಳ್ಳೂರ, ನ್ಯಾಯವಾದಿ ಮಾಣಿಕರಾವ ಗುಲಗುಂಜಿ, ಮಹಾಂತೇಶ ಕಟ್ಟಿಮನಿ, ರಾಮಚಂದ್ರ ಜಾಧವ, ಶ್ರೀನಿವಾಸ ಇದಲಾಯಿ ಇದ್ದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications