ಕಲಬುರಗಿ: ಎಸಿಬಿ ಬಲೆಗೆ ಮಹಾನಗರ ಪಾಲಿಕೆ ಆಯುಕ್ತ ಡಾ. ಶಂಕರಪ್ಪ ವಣಿಕ್ಯಾಳ
ಕಲಬುರಗಿ, ಜೂ. 2: ಇಲ್ಲಿಯ ಮಹಾನಗರ ಪಾಲಿಕೆ ಆಯುಕ್ತ ಡಾ. ಶಂಕರಪ್ಪ ವಣಿಕ್ಯಾಳ ಲಂಚ ಪಡೆಯುವಾಗ ನೇರವಾಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಕೋವಿಡ್ ಸುರಕ್ಷಾ ಚಕ್ರದ ನಿರ್ದೇಶಕ ಶರಣ್ ನೀಡಿದ ದೂರಿನ ಆಧಾರದಲ್ಲಿ ಕಾರ್ಯಾಚರಣೆಗಿಳಿದ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಆಯುಕ್ತರು ಸಿಕ್ಕಿಕೊಂಡಿದ್ದಾರೆ.
ಅಧೀನ ಸಿಬ್ಬಂದಿ ಮೂಲಕ ಪಡೆಯುತ್ತಿದ್ದ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಡಾ.ಶಂಕರಪ್ಪ ವಣಿಕ್ಯಾಳ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬುಧವಾರ ರಾತ್ರಿ ಬಂಧಿಸಿರುವ ಘಟನೆ ನಡೆದಿದೆ.
ಮನೆಗೆ ಹಣ ತರುವಂತೆ ಬೇಡಿಕೆ
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕರಪ್ಪ ವಣಿಕ್ಯಾಳ ಹಾಗೂ ಪಾಲಿಕೆ ಅಕೌಂಟೆಂಟ್ ಚೆನ್ನಪ್ಪ ಅವರು ಬಿಲ್ ಒಂದನ್ನು ಪಾಸ್ ಮಾಡಲು ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೊರೋನಾ ಸುರಕ್ಷಾ ಚಕ್ರದ, 7.50 ಲಕ್ಷ ರೂಪಾಯಿ ಬಿಲ್ ಪಾಸ್ ಮಾಡಲು, ನಿರ್ದೇಶಕ ಶರಣ ಅವರಿಗೆ ಶಂಕ್ರಣ್ಣ ವಣಿಕ್ಯಾಳ, 2% ಕಮಿಷನ್ ಕೇಳಿದ್ದರು. ಅದರಂತೆ ಪಾಲಿಕೆ ಅಕೌಂಟೆಂಟ್ ಚೆನ್ನಪ್ಪ, 14 ಸಾವಿರ 500 ಲಂಚ ಪಡೆದಾಗ ಎಸಿಬಿ ಬಲೆಗೆ ಬಿದಿದ್ದಾರೆ.

ಕೊರೋನಾ ಸುರಕ್ಷಾ ಚಕ್ರದ ನಿರ್ದೇಶಕ ಶರಣ್ ನೀಡಿದ ದೂರಿನ ಆಧಾರದ ಮೇಲೆ ಟ್ರ್ಯಾಪ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲಂಚ ಪಡೆದ ಅಕೌಂಟೆಂಟ್ ಚೆನ್ನಪ್ಪ, ಬಳಿಕ ಎಸಿಬಿ ಅಧಿಕಾರಿಗಳ ಮುಂದೆ ಕಮಿಷನರ್ ಶಂಕ್ರಣ್ಣ ವಣಿಕ್ಯಾಳಗೆ ಕರೆ ಮಾಡಿ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದ, ಕಮಿಷನರ್ ವಣಿಕ್ಯಾಳ, ಹಣ ಮನೆಗೆ ತೆಗೆದುಕೊಂಡು ಬಂದು ನೀಡುವಂತೆ ಚನ್ನಪ್ಪನಿಗೆ ಹೇಳಿದ್ದ.
ಚೆನ್ನಪ್ಪ ಹಾಗೂ ಕಮಿಷನರ್ ನಡುವೆ ನಡೆದ ಆಡಿಯೋ ಸಂಭಾಷಣೆ
ಎಸಿಬಿ ದಾಳಿ ವೇಳೆ ಅಕೌಂಟೆಂಟ್ ಚನ್ನಪ್ಪ ಬಳಿ ಇನ್ನೂ 1ಲಕ್ಷ 45 ಸಾವಿರ ಹಣ ಇರುವುದು ಪತ್ತೆಯಾಗಿದ್ದು, ಅದು ಕೂಡಾ ಕಮಿಷನರ್ಗರ ನೀಡೋದಕ್ಕೆ ಇಟ್ಟಿದ್ದ ಹಣ ಅಂತಾ ಹೇಳಿದ್ದ ಅಕೌಂಟೆಂಟ್ ಚೆನ್ನಪ್ಪ ಎಸಿಬಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ. ಚೆನ್ನಪ್ಪ ಹಾಗೂ ಕಮಿಷನರ್ ನಡುವೆ ನಡೆದ ಆಡಿಯೋ ಸಂಭಾಷಣೆ ಕೂಡ ಎಸಿಬಿ ಅಧಿಕಾರಿಗಳು ಪಡೆದಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳಿಂದ ಕಮಿಷನರ್ ಶಂಕರಪ್ಪ ವಣಿಕ್ಯಾಳ, ಅಕೌಂಟೆಂಟ್ ಚೆನ್ನಪ್ಪನನ್ನು ಬಂಧಿಸಲಾಗಿದೆ.
ಐಎಎಸ್ ಶ್ರೇಣಿಯ ಅಧಿಕಾರಿಯನ್ನು ಪಾಲಿಕೆಗೆ ನೇಮಕ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಕೆಎಎಸ್ ಅಧಿಕಾರಿಯಾದ ವಣಿಕ್ಯಾಳ ಅವರನ್ನು ನೇಮಕ ಮಾಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
(ಒನ್ಇಂಡಿಯಾ ಸುದ್ದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications