ರೈತ ಹೋರಾಟಗಾರ ಸಿಪಿಎಂ ಮುಖಂಡ ಮಾರುತಿ ಮಾನ್ಪಡೆ ನಿಧನ
ಕಲಬುರ್ಗಿ, ಅಕ್ಟೋಬರ್ 20: ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದ ರಾಜ್ಯ ಸಿಪಿಎಂ ಮುಖಂಡ ಮತ್ತು ರೈತ ಹೋರಾಟಗಾರ ಮಾರುತಿ ಮಾನ್ಪಡೆ (65) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾಗಿದ್ದ ಮಾರುತಿ ಮಾನ್ಪಡೆ ಅವರು ಅಕ್ಟೋಬರ್ 3ರಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಅವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಾರದ ಹಿನ್ನೆಲೆಯಲ್ಲಿ ಸೊಲ್ಲಾಪುರದ ಅಶ್ವಿನಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.
ಕಳೆದ ಮೂರು ದಿನಗಳಿಂದ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಫಲಕಾರಿಯಾಗದೆ ಅವರು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮೃತಪಟ್ಟಿದ್ದಾರೆ.

ಸಿಪಿಐ (ಎಂ) ಪಕ್ಷದ ಸದಸ್ಯರಾಗಿದ್ದ ಅವರು ಅನೇಕ ರೈತ ಹೋರಾಟಗಳನ್ನು ಸಂಘಟಿಸಿದ್ದರು. ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರು, ಕಲಬುರಗಿ ಸೇರಿದಂತೆ ಅನೇಕ ಕಡೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ವಿರುದ್ಧ ವಿವಿಧ ಹೋರಾಟಗಳನ್ನು ರೂಪಿಸಿದ್ದರು.
Recommended Video
ಸುಮಾರು ನಾಲ್ಕು ದಶಕಗಳಿಂದ ರೈತ ಹೋರಾಟಗಳಲ್ಲಿ ತೊಡಗಿದ್ದ ಮಾರುತಿ ಮಾನ್ಪಡೆ ಅವರು ಪತ್ನಿ ಮತ್ತು ಇಬ್ಬರು ಗಂಡುಮಕ್ಕಳನ್ನು ಅಗಲಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications