ನಕ್ಸಲರ ಗುಂಡಿಗೆ ಕಲಬುರಗಿ ಯೋಧ ಹುತಾತ್ಮ: ಸೀಮಂತ ನಡೆಯಬೇಕಿದ್ದ ಮನೆಯಲ್ಲೀಗ ಸೂತಕ
ಕಲಬುರಗಿ, ಜೂನ್ 29: ಪುಟಾಣಿ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದ ಆ ಮನೆಯಲ್ಲೀಗ ಸೂತಕದ ಛಾಯೆ. ಸೀಮಂತದ ಸಂಭ್ರಮ ನಡೆಯಬೇಕಿದ್ದ ಸ್ಥಳದಲ್ಲಿ ಕಣ್ಣೀರ ಕೋಡಿ ಹರಿಯುತ್ತಿದೆ. ಹೊಸ ಜೀವವೊಂದು ಮನೆಯೊಳಗೆ ಕಾಲಿರಿಸಲಿದೆ ಎಂಬ ಖುಷಿಯೊಂದಿಗೆ ಕಾದಿದ್ದ ಕುಟುಂಬಕ್ಕೆ ಸಿಕ್ಕಿದ್ದು, ಆ ಕುಟುಂಬದ ಆಧಾರವಾಗಿದ್ದ ಹಿರಿಯ ಜೀವ ಇನ್ನಿಲ್ಲ ಎಂಬ ಆಘಾತಕಾರಿ ಸುದ್ದಿ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದ ಮೂಲದವರಾದ ಎಎಸ್ಐ ಮಹದೇವ ಪಾಟೀಲ್ ಅವರು ಛತ್ತೀಸ್ಗಡದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಅವರೊಂದಿಗೆ ಸಿಆರ್ಪಿಎಫ್ನ ಇನ್ನೂ ಇಬ್ಬರು ಸಿಬ್ಬಂದಿ ಹಾಗೂ 14 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾರೆ.
ಭೈರಮ್ಗಢ ಪಟ್ಟಣದ ಸಮೀಪದ ಕೇಶ್ಕುಟುಲ್ ಗ್ರಾಮದ ಬಳಿ ಅಡಗಿ ಕುಳಿತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಸಿಆರ್ಪಿಎಫ್ನ ಹಿರಿಯ ಅಧಿಕಾರಿಗಳು ಮತ್ತು 199 ಬಟಾಲಿಯನ್ನ ಒಂದು ಗುಂಪು ಕೇಶ್ಕುಟುಲ್ ಕಡೆಗೆ ಶುಕ್ರವಾರ ಬೆಳಿಗ್ಗೆ ಹೊರಟಿದ್ದರು.
ಮೋಟಾರ್ ಸೈಕಲ್ನಲ್ಲಿ ತೆರಳುತ್ತಿದ್ದ ಅವರ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದರು. ಘಟನೆಯಲ್ಲಿ ಮಹದೇವ ಪಾಟೀಲ್ ಅವರು ಸ್ಥಳದಲ್ಲಿಯೇ ಮೃತಪಟ್ಟರೆ, ಎಎಸ್ಐ ಮದನ್ಪಾಲ್ ಮತ್ತು ಹೆಡ್ ಕಾನ್ಸ್ಟೇಬಲ್ ಶಾಜಿ ತೀವ್ರವಾಗಿ ಗಾಯಗೊಂಡಿದ್ದರು. ಸುಮಾರು ಹದಿನೈದು ನಿಮಿಷ ಈ ಗುಂಡಿನ ಚಕಮಕಿ ನಡೆಯಿತು. ಗಾಯಗೊಂಡಿದ್ದ ಇಬ್ಬರು ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು.

14 ವರ್ಷದ ಬಾಲಕಿ ಬಲಿ
ಈ ದಾಳಿ ವೇಳೆ ನಾಗರಿಕರಿದ್ದ ವಾಹನವೊಂದು ಕೂಡ ಸಿಲುಕಿಕೊಂಡಿತ್ತು. ಪಿಕ್ಅಪ್ ಟ್ರಕ್ನಲ್ಲಿ ಐದು ಮಂದಿ ಇದ್ದರು. ಅವರಿಗೂ ಗುಂಡು ತಗುಲಿದ್ದು, 14 ವರ್ಷದ ತೇಲಂ ಎಂಬ ಬಾಲಕಿ ಮೃತಪಟ್ಟಿದ್ದಾಳೆ. 14 ವರ್ಷದ ರಿಂಕಿ ಹೇಮ್ಲಾ ಗಾಯಗೊಂಡಿದ್ದಾಳೆ.

ಮುಗಿಲು ಮುಟ್ಟಿದ ಆಕ್ರಂದನ
ಮಹದೇವ ಪಾಟೀಲ್ (50) ಅವರು ಸುಮಾರು 29 ವರ್ಷಗಳಿಂದ ಸಿಆರ್ಪಿಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಮಗಳ ಸೀಮಂತಕ್ಕೆಂದು ಶನಿವಾರ ಬೆಳಿಗ್ಗೆ ಊರಿಗೆ ಬರಬೇಕಿತ್ತು. ಆದರೆ, ಆ ಸಂಭ್ರಮದ ಹಬ್ಬ ನಡೆಯಬೇಕಿದ್ದ ಮನೆಯಲ್ಲಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಹತ್ತು ದಿನ ರಜೆ ಹಾಕಿ ಬರುವುದಾಗಿ ಹೇಳಿದ್ದರು
ಮರಗುತ್ತಿಯಲ್ಲಿರುವ ಅವರ ನಿವಾಸದಲ್ಲಿ ಸಂಬಂಧಿಕರು, ಸ್ನೇಹಿತರು ಮತ್ತು ಗ್ರಾಮಸ್ಥರು ಸೇರಿಕೊಂಡಿದ್ದಾರೆ. 'ಮೊನ್ನೆಯಷ್ಟೇ ತಂದೆಯ ಜೊತೆ ಮಾತನಾಡಿದ್ದೆ. ಮನೆಯಲ್ಲಿನ ಕಾರ್ಯಕ್ರಮಕ್ಕಾಗಿ ಹತ್ತು ದಿನ ರಜೆ ಹಾಕಿ ಬರುತ್ತಿರುವುದಾಗಿ ಅವರು ತಿಳಿಸಿದ್ದರು. ಆದರೆ, ಈಗ ಈ ರೀತಿಯಾಗಿದೆ' ಎಂದು ಮಹದೇವ್ ಪಾಟೀಲ್ ಅವರ ಮಗ ಕಣ್ಣೀರಿಟ್ಟರು.

ಅಂತಿಮ ನಮನ ಸಲ್ಲಿಸಿದ ಭೂಪೇಶ್
ಹುತಾತ್ಮ ಯೋಧ ಮಹದೇವ ಪಾಟೀಲ್ ಅವರ ಪಾರ್ಥಿವ ಶರೀರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮರಗುತ್ತಿ ಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಶನಿವಾರ ಬೆಳಿಗ್ಗೆ ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications