ಅಪರೂಪದ ಪ್ರಕರಣ; ನೌಕರರಿಗೆ ಹಿಂಬಡ್ತಿ ನೀಡಿದ ಕಲಬುರಗಿ ಡಿಸಿ!
ಕಲಬುರಗಿ, ಫೆಬ್ರವರಿ 20; ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡುವ ಸರ್ಕಾರಿ ಅಧಿಕಾರಿ/ ನೌಕರರು ಮುಂಬಡ್ತಿ ಪಡೆಯುತ್ತಾರೆ. ಆದರೆ ಅಪರೂಪದ ಪ್ರಕರಣದಲ್ಲಿ 100ಕ್ಕೂ ಅಧಿಕ ಮಂದಿಗೆ ಹಿಂಬಡ್ತಿ ನೀಡಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ 18/5/2023ರಂದು ಹೊರಡಿಸಿದ್ದ ಮುಂಬಡ್ತಿ ಆದೇಶವನ್ನು ಅಧಿಸೂಚನೆ ಮೂಲಕ ವಾಪಸ್ ಪಡೆದು, ಮುಂಬಡ್ತಿ ಪಡೆದಿದ್ದ ನೌಕರರು ತಮ್ಮ ಮೂಲ ಹುದ್ದೆಗೆ ಮರಳುವಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಬಿ. ಫೌಜಿಯಾ ತರನ್ನುಮ್, "ಸರ್ಕಾರದ ಆದೇಶವನ್ನು ನಾನು ಪಾಲನೆ ಮಾಡಿದ್ದೇನೆ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಡಿ-ಗ್ರೂಪ್ ನೌಕರರ ಜೇಷ್ಠತಾ ಪಟ್ಟಿಯನ್ನು 16/2/2024ರಂದು ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ನೌಕರರು 15 ದಿನದೊಳಗೆ ಸಲ್ಲಿಕೆ ಮಾಡಬಹುದು" ಎಂದು ಹೇಳಿದ್ದಾರೆ.
ಏನಿದು ಪ್ರಕರಣ?; ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ 68 ದ್ವಿತೀಯ ದರ್ಜೆ ಸಹಾಯಕ/ ಗ್ರಾಮ ಆಡಳಿತಾಧಿಕಾರಿ, 33 ಪೇದೆಗಳು ಸೇರಿದಂತೆ 100ಕ್ಕೂ ಅಧಿಕ ನೌಕರರಿಗೆ 18/5/2023ರಂದು ಬಡ್ತಿ ನೀಡಿ ಆದೇಶ ಹೊರಡಿಸಲಾಗಿತ್ತು.
17/7/2021ರಿಂದ ಪೂರ್ವಾನ್ವಯವಾಗುವಂತೆ ಎಫ್ಡಿಎ ಹುದ್ದೆಗೆ ಬಡ್ತಿ ನೀಡಿ, ವೇತನ ಹೆಚ್ಚಳದ ಜೊತೆಗೆ ಆದೇಶಿಸಲಾಗಿತ್ತು. ಆದರೆ ದ್ವಿತೀಯ ವಿಭಾಗದ ಸಹಾಯಕರು, ಗ್ರಾಮಾಭಿವೃದ್ಧಿ ಅಧಿಕಾರಿಗಳಿಗೆ ಬಡ್ತಿ ನೀಡಿ ಹುದ್ದೆಗೆ ನಿಯೋಜನೆ ಮಾಡುವಾಗ ಎಷ್ಟು ಎಫ್ಡಿಎ ಹುದ್ದೆಗಳು ಖಾಲಿ ಇವೆ ಎಂಬ ಅಂಶವನ್ನು ಪರಿಗಣನೆ ಮಾಡಿರಲಿಲ್ಲ.
ಕರ್ನಾಟಕ ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಕಂದಾಯ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದು ಬಡ್ತಿ ಬಗ್ಗೆ ಗಮನ ಸೆಳೆದಿದ್ದರು. ಬಡ್ತಿ ನೀಡುವಾಗ ನಿಯಮಗಳನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿದ್ದರು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಅಗತ್ಯ ಕ್ರಮ ಕೈಗೊಂಡು ಅನುಪಾಲನಾ ವರದಿಯನ್ನು ಸಲ್ಲಿಕೆ ಮಾಡಿ ಎಂದು ಪ್ರಾದೇಶಿಕ ಆಯಯಕ್ತರು, ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಈ ಕುರಿತು ಡಿಸಿ ಬಿ. ಫೌಜಿಯಾ ತರನ್ನುಮ್ ವಿಚಾರಣೆ ನಡೆಸಿದ್ದರು.
ಬಡ್ತಿ ನೀಡುವ ಆದೇಶ ಹೊರಡಿಸುವಾಗ ಜಿಲ್ಲೆಯಲ್ಲಿ ಖಾಲಿ ಇರುವ ಎಫ್ಡಿಎ ಹುದ್ದೆಗಳು ಎಷ್ಟು?, ಬಡ್ತಿ ನೀಡಿದ ನೌಕರರು ಇಲಾಖಾ ವಿಚಾರಣೆ ಎದುರಿಸಿದ್ದಾರೆಯೇ? ಎಂಬ ವಿವರ ಪಡೆಯಬೇಕಿತ್ತು. ಆದರೆ ಅಂತಿಮ ವರದಿ ಪಡೆಯದೇ ಬಡ್ತಿ, ವೇತನ ಹೆಚ್ಚಳ ನೀಡಿ ಆದೇಶ ಹೊರಡಿಸಲಾಗಿತ್ತು ಎಂಬುದು ಆರೋಪವಾಗಿತ್ತು.
ಈ ಕುರಿತು ವಿಚಾರಣೆಯನ್ನು ನಡೆಸಿದ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ 18/5/2023ರಂದು ಹೊರಡಿಸಿದ್ದ ವೇತನ ಹೆಚ್ಚಳ, ಬಡ್ತಿ ಆದೇಶವನ್ನು ಅಧಿಸೂಚನೆ ಮೂಲಕ ವಾಪಸ್ ಪಡೆದು, ನೌಕರರು ತಮ್ಮ ಮೂಲ ಹುದ್ದೆಗೆ ಮರಳಲು ಸೂಚನೆ ಕೊಟ್ಟಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications