ಯಡಿಯೂರಪ್ಪರಿಂದ ಕೋಲಿ ಸಮುದಾಯ ಎಸ್ಟಿಗೆ ಸೇರ್ಪಡೆ ಭರವಸೆ
ಚಿಂಚೋಳಿ, ಮೇ 16: ಚುನಾವಣೆ ನಂತರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಕೋಲಿ ಸಮುದಾಯವನ್ನು ಎಸ್ ಟಿ ಸೇರಿಸುವ ಭರವಸೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಚಿಂಚೋಳಿಲ್ಲಿ ನಡೆದ ಕೋಲಿ ಸಮುದಾಯದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋಲಿ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಲು ಹೋರಾಟ ನಡೆಸಿರುವ ಬಾಬುರಾವ್ ಚಿಂಚನಸೂರ್ ಅವರಿಗೆ ಸೂಕ್ತ ಸ್ಥಾನಮಾನ ಒದಗಿಸುವುದಾಗಿ ಹೇಳಿದರು.
ಸ್ವಾತಂತ್ರ್ಯ ಬಂದ ನಂತರ ಈ ವರೆಗೂ ಅಧಿಕಾರ ನಡೆಸಿರುವ ಕಾಂಗ್ರೆಸ್ ಕೋಲಿ ಸಮುದಾಯವನ್ನು ಎಸ್ ಟಿ ಗೆ ಸೇರ್ಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. 22 ಲೋಕಸಭಾ ಕ್ಷೇತ್ರವನ್ನು ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮೇ 23 ರ ನಂತರ ರಾಜ್ಯ ರಾಜಕಾರಣದಲ್ಲಿ ಏರುಪೇರಾಗುತ್ತದೆ ಎಂದರು. ಕಾಂಗ್ರೆಸ್ ಜೆ ಡಿ ಎಸ್ ಕಚ್ಚಾಟದಿಂದ ಅಧಿಕಾರ ಬದಲಾಗುತ್ತದೆ. ಉಮೇಶ್ ಜಾಧವ್ ದೆಹಲಿಗೆ ಹೋಗುತ್ತಾರೆ ಎಂದು ಹೇಳಿದರು.

ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡಿ
ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡಿ, 50 ವರ್ಷ ಅಧಿಕಾರದಲ್ಲಿ ಇದ್ದರೂ ಖರ್ಗೆ ಕೋಲಿ ಸಮುದಾಯವನ್ನು ಎಸ್ ಟಿ ಗೆ ಸೇರಿಸಲಿಲ್ಲಾ. ನನ್ನ ಹೆಂಡತಿ ಆಪರೇಶನ್ ಇದ್ದರೂ ನಾನು ಕ್ಯಾಬಿನೆಟ್ ಸಭೆಗೆ ಹೋಗಿದ್ದೆ. ಅದು ಎಸ್ ಟಿ ಸಮುದಾಯ ನನಗೆ ಮುಖ್ಯವಾಗಿತ್ತು. ಕ್ಯಾಬಿನೆಟ್ ನಲ್ಲಿ ಅಪ್ರೂ ಮಾಡಿ ಕಳುಹಿಸಿದ್ದ ಫೈಲ್ ದೆಹಲಿಗೆ ಹೋಯಿತು. ಆದರೆ ಅದನ್ನು ಮುಂದಕ್ಕೆ ತಗೆದುಕೊಂಡು ಹೋಗುವ ಯಾವುದೇ ಕ್ರಮಕ್ಕೂ ಖರ್ಗೆ ಮುಂದಾಗಲಿಲ್ಲಾ. ನನಗೆ ಮಕ್ಕಳು ಇಲ್ಲ ಅವಿನಾಶ್ ನ್ನು ದತ್ತು ಪಡೆದಿದ್ದೇನೆ. ಅವಿನಾಶ್ ಗೆಲ್ಲಿಸಿ ಕಾಂಗ್ರೆಸ್ ಡೆಪಾಸಿಟ್ ಕಳಿಯಬೇಕು ಎಂದು ಹೇಳಿದರು.

ಉಮೇಶ್ ಜಾಧವ್ ಮಾತನಾಡಿ
ಉಮೇಶ್ ಜಾಧವ್ ಮಾತನಾಡಿ, ಕೋಲಿ ಸಮುದಾಯದ ಋಣವನ್ನು ಕಾಂಗ್ರೆಸ್ ತೀರಿಸಿಲ್ಲ. ಅಂಬಿಗರ ಚೌಡಯ್ಯ ನಿಗಮ ಮಾಡಿದ್ದು ಬಿಜೆಪಿ ಸರಕಾರ. ಆರ್ಥಿಕವಾಗಿ ಕೋಲಿ ಸಮುದಾಯ ಮುಂದೆ ಬರಲು ಎಸ್ ಟಿ ಗೆ ಸೇರ್ಪಡೆ ಆಗಬೇಕು. ಈ ಕೆಲಸ ಬಿಜೆಪಿ ಮಾಡೇ ಮಾಡಲಿದೆ. ಕಲಬುರ್ಗಿ ಎಂಪಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಬೃಹತ್ ರೋಡ್ ಶೋ
ಚಿಂಚೋಳಿ ಉಪಚುನಾವಣೆ ಹಿನ್ನಲೆ ಯಲ್ಲಿ ಬಿಜೆಪಿಯಿಂದ ಬೃಹತ್ ರೋಡ್ ಶೋ ಆಯೋಜಿಸಲಾಗಿತ್ತು. ಚಿಂಚೋಳಿ ಪಟ್ಟಣದಲ್ಲಿ ಲಕ್ಷ್ಮಿ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ರೋಡ್ ಶೋ ನಡೆಯಿತು. ರೋಡ್ ಶೋ ಗೆ ಚಾಲನೆ ನೀಡಿ ಬಿ ಎಸ್ ಯಡಿಯೂರಪ್ಪ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದರು.

ಸಾಲಮನ್ನಾ ಹೆಸರಿನಲ್ಲಿ ಮೋಸ
ಮತ್ತೆ ನಮ್ಮ ಸರ್ಕಾರ ಬಂದರೆ ಈ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಈ ಹಿಂದೆ ನಮ್ಮ ಸರ್ಕಾರ ರೈತರಿಗೆಂದೇ ಪ್ರತ್ಯೇಕ ಬಜೆಟ್ ಮಾಡಿತ್ತು. ಬಂಜಾರ ನಿಗಮವನ್ನು ಸ್ಥಾಪಿಸುವ ಮೂಲಕ ಈ ಸಮುದಾಯದ ಶ್ರೇಯೋಭಿವೃದ್ಧಿಗೆ ಕ್ರಮ ಕೈಗೊಂಡಿತ್ತು. ಆದರೆ, ಕುಮಾರಸ್ವಾಮಿ ನೇತೃತ್ವದ ಸರ್ಕಾರ ರೈತರ ಸಾಲ ಮನ್ನಾ ಹೆಸರಲ್ಲಿ ಈ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಯಡಿಯೂರಪ್ಪ ಆರೋಪಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications