ಹೊಟ್ಟೆಕಿಚ್ಚಿಗೆ ಮದ್ದಿಲ್ಲ: ಸ್ವಪಕ್ಷೀಯರ ಮೇಲೆ ಮಲ್ಲಿಕಾರ್ಜುನ ಖರ್ಗೆ ಬೌನ್ಸರ್!
ಕಲಬುರಗಿ, ಮಾರ್ಚ್ 10: ಯಾವ ಕಾಯಿಲೆಗಾದರೂ ಮದ್ದನ್ನು ಕಂಡು ಹಿಡಿಯಬಹುದು, ಆದರೆ ಹೊಟ್ಟೆಕಿಚ್ಚು ಅನ್ನೋ ಕಾಯಿಲೆಗೆ ಹಿಂದೆಯೂ ಮದ್ದು ಇರಲಿಲ್ಲ, ಮುಂದೆಯೂ ಇರುವುದಿಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಸಲಿಗೆ ಈ ಮಾತನ್ನು ಮಲ್ಲಿಕಾರ್ಜುನ ಖರ್ಗೆ ಸ್ವಪಕ್ಷೀಯರಿಗೆ ಹೇಳಿದ್ದು ಗಮನಿಸಬೇಕಾದ ವಿಚಾರ. ಕಾಂಗ್ರೆಸ್ ಮುಖಂಡರ ಒತ್ತಾಯದ ಮೇರೆಗೆ, ನನ್ನ ಮಗ ಪ್ರಿಯಾಂಕ್ ಖರ್ಗೆ ರಾಜಕೀಯಕ್ಕೆ ಬಂದಿದ್ದು ಎಂದು ಖರ್ಗೆ ಹೇಳಿದ್ದಾರೆ.
ಎಲ್ಲದಕ್ಕೂ ನನ್ನ ಮಗನನ್ನು ಜವಾಬ್ದಾರಿಯನ್ನಾಗಿ ಮಾಡುವುದು ಎಷ್ಟು ಸರಿ. ನಾನು ಲೋಕಸಭೆಗೆ ಹೋದಾಗ, ನನ್ನ ಮಗನನ್ನು ರಾಜ್ಯ ರಾಜಕಾರಣಕ್ಕೆ ಕಳುಹಿಸಲು ಒತ್ತಾಯ ಬಂತು, ನಾನು ಮೊದಲು ನಿರಾಕರಿಸಿದಾಗ, ಬಿಜೆಪಿ ವಿರುದ್ದ ಹೆದರಿಕೆಯೇ ಎಂದು ಪ್ರಶ್ನಿಸಿದರು, ಹಾಗಾಗಿ ಅವನು ರಾಜಕೀಯಕ್ಕೆ ಬಂದ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ, ಬಿಜೆಪಿಯ ತೀವ್ರ ಪೈಪೋಟಿಯ ನಡುವೆಯೂ, ವಾಲ್ಮೀಕಿ ನಾಯಕರನ್ನು ನಾಲ್ಕು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಪ್ರಿಯಾಂಕ್ ಗೆಲುವು ಸಾಧಿಸಿದ. ನನ್ನ ಮಗ ಗೆದ್ದು, ಸಚಿವನಾದ ಮೇಲೆ, ಈಗ ನಮ್ಮವರೇ ಅವನ ಬಗ್ಗೆ ಮಾತನಾಡುತ್ತಿದ್ದಾರೆಂದು ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ಅಸೆಂಬ್ಲಿ ಚುನಾವಣೆಯ ನಂತರ ಕಲಬುರಗಿಯ ರಾಜಕೀಯ ಸಾಕಷ್ಟು ಬದಲಾಗಿದೆ. ನನ್ನ ಮಗನ ಮೇಲೆ ಹೊಟ್ಟೆಕಿಚ್ಚು ಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲ ಬೆಳವಣಿಗೆಗಳಿಗೂ ನನ್ನ ಮಗನನ್ನು ಹೊಣೆಯನ್ನಾಗಿ ಮಾಡಲಾಗುತ್ತಿದೆ ಎಂದು ಖರ್ಗೆ ನೋವು ತೋಡಿಕೊಂಡಿದ್ದಾರೆ.
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿದೆ, ಸಾರ್ವತ್ರಿಕ ಚುನಾವಣೆ ಹತ್ತಿರ ಬರುತ್ತಿದೆ. ಜನಪ್ರತಿನಿಧಿಗಳು ಹೇಳಿಕೆ ನೀಡುವಾಗ, ತುಂಬಾ ಜಾಗರೂಕರಾಗಿರಬೇಕು ಎಂದು ಖರ್ಗೆ ಪರೋಕ್ಷವಾಗಿ, ರೇವಣ್ಣನವರು ಸುಮಲತಾ ಬಗ್ಗೆ ಹೇಳಿದ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications