ರಜಪೂತ ಪದ್ಧತಿಯಂತೆ ಧರಂ ಸಿಂಗ್ ಗೆ ಅಗ್ನಿ ಸ್ಪರ್ಶ
ಕಲಬುರಗಿ, ಜುಲೈ 28 : 3 ಸುತ್ತು ಕುಶಾಲತೋಪು ಹಾರಿಸಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆಲೋಗಿ ಗ್ರಾಮದ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಹಿರಿಯ ಪುತ್ರ ವಿಜಯ್ ಸಿಂಗ್ ಅವರು ರಜಪೂತ ವಿಧಿವಿಧಾನವನ್ನು ನೆರವೇರಿಸಿದರು. ಬಳಿಕ ಗಂಧದ ಚಕ್ಕೆಯಿಂದ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಿದರು. ಧರಂ ಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಅಂತಿಮ ದರ್ಶನ ಪಡೆದರು.

ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ಅವರ ಹುಟ್ಟೂರು ನೆಲೋಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಅಲ್ಲಿಯೇ ಇಂದು (ಶುಕ್ರವಾರ) ಸಂಜೆ ಅಂತ್ಯ ಸಂಸ್ಕಾರ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಶುಕ್ರವಾರ ಬೆಳಿಗ್ಗೆ 6 ರಿಂದ 11ರ ವರೆಗೆ ಕಲಬುರಗಿಯ ಎನ್.ವಿ. ಮೈದಾನದಲ್ಲಿ ಹಾಗೂ ಮಧ್ಯಾಹ್ನ 1 ರಿಂದ 3 ರವರೆಗೆ ಜೇವರ್ಗಿಯ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಾದ ಬಳಿಕ ನೆಲೋಗಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿ, ಬಳಿಕ ನೆಲೋಗಿಯ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಕಲಬುರಗಿಯ ನಾಗನಹಳ್ಳಿ ಬಳಿಯ ಆರ್ಯನ್ ಶಾಲೆಯ ಆವರಣದಲ್ಲಿ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಇದನ್ನು ವಿರೋಧಿಸಿದ ಗ್ರಾಮಸ್ಥರು ನೆಲೋಗಿಯಲ್ಲೇ ಅಂತ್ಯಕ್ರಿಯೆ ನೆರವೇರಿಸಬೇಕು ಎಂದು ಆಗ್ರಹಿಸಿ ಜೇವರ್ಗಿ-ವಿಜಯಪುರ ಹೆದ್ದಾರಿ ತಡೆದು ಸೊನ್ನ ಕ್ರಾಸ್ನಲ್ಲಿ ಪ್ರತಿಭಟನೆ ನಡೆಸಿದರು.
ಈ ಹಿನ್ನಲೆಯಲ್ಲಿ ಈ ಧರಂಸಿಂಗ್ ಅವರ ಹುಟ್ಟೂರಾದ ನೆಲೋಗಿಯಲ್ಲಿಯೇ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications