ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಬೆಂಬಲಿಗ ಉಮೇಶ್ ಜಾಧವ್ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

|
Google Oneindia Kannada News

ಚಿಂಚೋಳಿ, ಮೇ 10: ಮಾಜಿ ಬೆಂಬಲಿಗ ಉಮೇಶ್ ಜಾಧವ್ ವಿರುದ್ಧ ಹರಿಹಾಯ್ದಿರುವ ಸಿದ್ದರಾಮಯ್ಯ, ಉಮೇಶ್ ಜಾಧವ್ ಒಬ್ಬ ಗೋಮುಖ ವ್ಯಾಘ್ರ ಎಂದು ಜರಿದಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಚಿಂಚೋಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಮೇಶ್ ಜಾಧವ್ ಸಂಭಾವಿತ ವ್ಯಕ್ತಿ ಎಂದುಕೊಂಡಿದ್ದೆ ಆದರೆ ಆತ ಗೋಮುಖ ವ್ಯಾಘ್ರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದು ವಿರುದ್ಧ ಅಸಮಾಧಾನ ಹೊರಹಾಕಿದ ವಿಶ್ವನಾಥ್ ಪುತ್ರ ಅಮಿತ್ಸಿದ್ದು ವಿರುದ್ಧ ಅಸಮಾಧಾನ ಹೊರಹಾಕಿದ ವಿಶ್ವನಾಥ್ ಪುತ್ರ ಅಮಿತ್

ಶಾಸಕನಾಗಿದ್ದ ಜಾಧವ್ ಯಾಕೆ ರಾಜೀನಾಮೆ ಕೊಟ್ಟಿದ್ದಾನೊ ಇವತ್ತಿಗೂ ನಂಗೆ ತಿಳಿದಿಲ್ಲ, ನಿಮಗೇನಾದರೂ ಹೇಳಿದ್ದಾರಾ? ಅಂತಾ ಸಿದ್ದರಾಮಯ್ಯ ಸಭೆಯಲ್ಲಿದ್ದ ಜನರನ್ನ ಪ್ರಶ್ನಿಸಿದರು. ಕಾಂಗ್ರೆಸ್​ನಲ್ಲಿ ಜಾಧವ್​ಗೆ ಏನು ತೊಂದರೆಯಾಗಿತ್ತು? ಕಾರಣವಿಲ್ಲದೆ ಪಕ್ಷ ಬಿಡುವಂತಿಲ್ಲ ಎಂದು ಏಕವಚನದಲ್ಲಿಯೇ ಸಿದ್ದರಾಮಯ್ಯ ಜಾಧವ್‌ಗೆ ಜರಿದರು.

Former CM Siddaramaiah lambasted on Umesh Jadhav

ಸ್ಪಷ್ಟ ಕಾರಣವಿಲ್ಲದೆ, ಜಾಧವ್ ಪಕ್ಷ ಬಿಟ್ಟು ಹೋಗಿದ್ದಾರೆ, ಪಕ್ಷಕ್ಕೆ ದ್ರೋಹ ಬೇಕಾದರೆ ಮಾಡಲಿ, ಆದರೆ ಆತ ಕ್ಷೇತ್ರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ತೇಜಸ್ವಿನಿ ಮಾತನಾಡಿದರೆ ಬಣ್ಣ ಬಯಲಾಗುತ್ತದೆ: ಬಿಜೆಪಿಗೆ ಸಿದ್ದು ಎಚ್ಚರಿಕೆತೇಜಸ್ವಿನಿ ಮಾತನಾಡಿದರೆ ಬಣ್ಣ ಬಯಲಾಗುತ್ತದೆ: ಬಿಜೆಪಿಗೆ ಸಿದ್ದು ಎಚ್ಚರಿಕೆ

ಉಪಚುನಾವಣೆಯಲ್ಲಿ ತನ್ನ ಮಗನನ್ನು ಚುನಾವಣೆಗೆ ನಿಲ್ಲಿಸಿ ಮತಕೇಳುತ್ತಿದ್ದಾನೆ, ಉಪಕಾರ ಮಾಡಿದವರನ್ನ ನೆನಪಿನಲ್ಲಿಟ್ಟುಕೊಳ್ಳುವ ಮನುಷ್ಯತ್ವ ಇರಬೇಕು. ಆದರೆ ಜಾಧವ್‌ಗೆ ಉಪಕಾರ ನೆನಪಿಟ್ಟುಕೊಳ್ಳುವ ಮನುಷ್ಯತ್ವ ಇಲ್ಲ. ಇನ್ನು ಕಲಬುರ್ಗಿ ಲೋಕಸಭೆ ಚುನಾವಣೆಯ ಅಭ್ಯರ್ಥಿ ಉಮೇಶ್ ಜಾಧವ್‌ ಸೋಲ್ತಾನೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಸಿದ್ದರಾಮಯ್ಯ ಸುತ್ತ ಗಿರಕಿ ಹೊಡೆಯುತ್ತಿರುವ ಕುಮಾರಸ್ವಾಮಿ ಭವಿಷ್ಯ ಸಿದ್ದರಾಮಯ್ಯ ಸುತ್ತ ಗಿರಕಿ ಹೊಡೆಯುತ್ತಿರುವ ಕುಮಾರಸ್ವಾಮಿ ಭವಿಷ್ಯ

ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಬಿಜೆಪಿಗೆ ಕನಸು, ಮನಸ್ಸಿನಲ್ಲೂ ಮತ ಹಾಕಬೇಡಿ, ಅವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವಿರೋಧಿಗಳು ಎಂದು ಹೇಳಿದರು.

English summary
Former CM Siddaramaiah lambasted on former congress MLA, present BJP MP candidate Umesh Jadhav. He said i trusted him, he back stubbed us.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X