Accident News: ಭೀಕರ ಸರಣಿ ಅಪಘಾತ: ನಾಲ್ವರು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಭೀಕರ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಬಳಿ ನಡೆದಿದೆ.
ಕಲಬುರಗಿ ತಾಲೂಕಿನ ಅವರಾದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ನಗರದ ಹೊರವಲಯದಲ್ಲಿ ಇರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಅಂಕಲಗಿ ಮತ್ತು ಔರಾದ್ ಬಳಿ ಟ್ಯಾಂಕರ್, ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಮೃತರಲ್ಲಿ ಬೈಕ್ನಲ್ಲಿ ಪ್ರಯಾಣ ಮಾಡುತ್ತಿದ್ದ ಸಿರಡೋಣ ಗ್ರಾಮದ ನಾಗೇಂದ್ರ ಮತ್ತು ಶಿವಾನಂದ ಅಪ್ಪಾರಾವ ಸೇರಿದ್ದಾರೆ. ಸಿರಡೋಣ ಗ್ರಾಮದ ಇವರು ಕೂಲಿ ಕೆಲಸ ಮುಗಿಸಿ ಒಂದೇ ಬೈಕ್ನಲ್ಲಿ ತಮ್ಮ ಗ್ರಾಮಕ್ಕೆ ವಾಪಾಸ್ ಆಗುಯ್ತಿದ್ದರು. ಕಾರಿನಲ್ಲಿದ್ದ ಬಾಲ್ಕಿ ಮೂಲದ ದತ್ತಾತ್ರೇಯ ಚಿಮಾಜಿ (48), ಚಂದ್ರಕಲಾ (70) ಸಾವಿಗೀಡಾಗಿದ್ದಾರೆ.
ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಬೈಕ್ನಲ್ಲಿದ್ದ ಮತ್ತೊಬ್ಬ ಯುವಕ ಮೈಲಾರಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ ಎನ್ನಲಾಗಿದೆ.
20 ಮಂದಿ ಸಾವು: ಬಸ್ ಹಾಗೂ ಟ್ರಕ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದರು.
ತೆಲಂಗಾಣದ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಆರ್ಟಿಸಿ ಬಸ್ಗೆ ಟ್ರಕ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿ 20 ಮಂದಿ ಸಾವನ್ನಪ್ಪಿದ್ದು, 24 ಜನ ಗಾಯಗೊಂಡಿದ್ದರು.
ಜಲ್ಲಿಕಲ್ಲು ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅನ್ನು ಭಾರೀ ವೇಗದಲ್ಲಿ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿತ್ತು.
ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವು ಇದ್ದು, ಇದೇ ಪ್ರದೇಶದಲ್ಲಿ ಅತಿ ವೇಗದಲ್ಲಿ ಬಂದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಬಸ್ಗೆ ಡಿಕ್ಕಿ ಹೊಡೆದಿರುವುದಲ್ಲದೆ, ಅದರಲ್ಲಿ ಜಲ್ಲಿಕಲ್ಲು ಬಸ್ ಒಳಗಡೆ ಇದ್ದ ಪ್ರಯಾಣಿಕೆ ಮೇಲೆ ಸುರಿದಿವೆ. ಇದು ಹೆಚ್ಚಿನ ಜೀವಹಾನಿಗೆ ಕಾರಣವಾಗಿದೆ. 10ಕ್ಕೂ ಹೆಚ್ಚು ಮಂದಿ ಜಲ್ಲಿಕಲ್ಲುಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಭೀಕರ ಅಪಘಾತದಲ್ಲಿ ಬಸ್ ಪ್ರಯಾಣಿಕರು, ಬಸ್ ಮತ್ತು ಟಿಪ್ಪರ್ ಚಾಲಕರು ಸಾವನ್ನಪ್ಪಿರುವ ಬಗ್ಗೆಯೂ ವರದಿಯಾಗಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications