ಸಾಲ ವಸೂಲಾತಿಗೆ ಗೃಹಲಕ್ಷ್ಮಿ ಹಣ; ಖಡಕ್ ಎಚ್ಚರಿಕೆ ಕೊಟ್ಟ ಸಚಿವರು
ಕಲಬುರಗಿ, ಡಿಸೆಂಬರ್ 21; ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆ 'ಗೃಹಲಕ್ಷ್ಮಿ'. ರಾಜ್ಯದ ಜನರಿಗೆ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಇದು ಸಹ ಒಂದು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನೆರವಾಗುವ ಯೋಜನೆ ಹಣ ಬಳಕೆ ಬಗ್ಗೆ ಸಚಿವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಬುಧವಾರ ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಯೋಜನೆ ಹಣ ಸಾಲ ವಸೂಲಾತಿಗೆ ಬಳಕೆ ಆಗುವ ವಿಚಾರ ಪ್ರಸ್ತಾಪಿಸಿದರು.

ಸಚಿವರು ಮಾತನಾಡಿ, "ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ ನೀಡಲಾಗುವ 2,000 ರೂ. ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕಾರಣ ಬ್ಯಾಂಕ್ ಅಧಿಕಾರಿಗಳು ಈ ಹಣವನ್ನು ಫಲಾನುಭವಿ ಸಾಲದ ವಸೂಲಾತಿಗೆ ಬಳಕೆ ಮಾಡುತ್ತಿರುವ ಕ್ರಮ ಸರಿಯಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.
"ಚಿತ್ತಾಪೂರ ತಾಲೂಕಿನ ತರಕಸಪೇಟೆ ಗ್ರಾಮಕ್ಕೆ ಭೇಟಿ ನೀಡಿದಾಗ, ಮಹಿಳೆಯೊಬ್ಬಳು ಯೋಜನೆಯಡಿ ಬಂದ 2,000 ರೂ. ಹಣವನ್ನು ನಾಲವಾರದ ಕೃಷ್ಣಾ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಗಿರೀಶ್ ಅವರು ಸಾಲ ವಸೂಲಾತಿಗೆ ಬಳಕೆ ಮಾಡಿಕೊಂಡಿದ್ದಾರೆ" ಎಂದು ಅಳಲು ತೋಡಿಕೊಂಡಿದ್ದಾರೆ ಎಂದರು.
ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಗ್ಯಾರಂಟಿ ಯೋಜನೆಯಡಿ ಇದೂವರೆಗೆ ಪಾವತಿ ಮಾಡಿಕೊಂಡ ಹಣ ವಾಪಸ್ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ಕ್ರಮವಹಿಸಿ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಸದಾಶಿವ ರಾತ್ರಿಕರ್ ಅವರಿಗೆ ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಎಂಎಲ್ಸಿ ತಿಪ್ಪಣಪ್ಪ ಕಮಕನೂರ, "ಬರೀ ಗ್ಯಾರಂಟಿ ಹಣ ಅಷ್ಟೆ ಅಲ್ಲ. ಸರ್ಕಾರದದಿಂದ ನೀಡಲಾಗುವ ವಿವಿಧ ಪರಿಹಾರ, ರೈತರ ಆತ್ಮಹತ್ಯೆ ಪರಿಹಾರದಂತಹ ಪ್ರಕರಣದಲ್ಲಿಯೂ ಬ್ಯಾಂಕ್ ಅಧಿಕಾರಿಗಳು ಇದೇ ರೀತಿ ಸಾಲ ವಸೂಲಾತಿ ಮಾಡುತ್ತಿರುವುದು ದುರಾದೃಷ್ಠಕರ" ಎಂದರು.
"ಇದಕ್ಕೆ ಕಡಿವಾಣ ಹಾಕಬೇಕು. ಕೇವಲ ತರಕಸಪೇಟೆ ಮಾತ್ರವಲ್ಲ ಹೆಬ್ಬಾಳ ಹಾಗೂ ಕಾಳಗಿಯಲ್ಲಿಯೂ ಕೂಡಾ ಈ ಮಾದರಿ ಪ್ರಕರಣ ನಡೆದಿವೆ. ಬ್ಯಾಂಕಿನವರು ಬಡವರು, ದಲಿತರು ಬ್ಯಾಂಕ್ಗೆ ಬಂದರೆ ಅಮಾನವೀಯವಾಗಿ ವರ್ತಿಸುತ್ತಾರೆ. ಈ ಪರಿಸ್ಥಿತಿ ಬದಲಾಗಬೇಕು" ಎಂದು ಆಗ್ರಹಿಸಿದರು.
ಶಾಸಕ ಬಿ. ಆರ್. ಪಾಟೀಲ ಮಾತನಾಡಿ, "ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರ ಸಭೆ ಕರೆದು ಸರ್ಕಾರ ಆದೇಶ ಮಾಡಿ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕು" ಎಂದು ಸಲಹೆ ನೀಡಿದರು.
ಜೈಲಿನಲ್ಲಿ ರಾಜಾತಿಥ್ಯ; ಇದೇ ಸಭೆಯಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ವಿವಿಧ ಪ್ರಕರಣದಲ್ಲಿ ಬಂಧನಕ್ಕೊಳಗಾದವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಅರೋಪ ಕೇಳಿಬರುತ್ತಿದ್ದು, ಈ ಕುರಿತು ಗುರುವಾರದೊಳಗೆ ಸಮಗ್ರ ವರದಿ ಸಲ್ಲಿಸವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ ಮತ್ತು ಎಸ್ಪಿ ಅಡ್ಡೂರು ಶ್ರೀನುವಾಸಲುಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಕೊಟ್ಟರು.
ಪ್ರಗತಿ ಪರಿಶೀಲನಾ ಸಭೆ ಅರಂಭವಾಗುತ್ತಿದ್ದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ. ರಂಗನಾಥ ಅವರನ್ನು ಜೈಲಿನಲ್ಲಿ ಏನು ನಡೆಯುತ್ತಿದೆ?. ಅಕ್ರಮವಾಗಿ ಗುಟ್ಕಾ ಪೂರೈಸಲಾಗುತ್ತಿದೆಯಂತೆ ಎಂದು ಪ್ರಶ್ನಿಸಿದರು. ಇದೆಲ್ಲದಕ್ಕೂ ಕಡಿವಾಣ ಹಾಕಬೇಕು. ಯಾವುದೇ ಅಕ್ರಮ ಚಟುಚಟಿಕೆಗೆ ಜೈಲು ಅಡ್ಡವಾಗಬಾರದು. ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿ ಎಂದು ಸೂಚಿಸಿದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications