ಕಾಳಗಿ ಹಿರೇಮಠದ ಉತ್ತರಾಧಿಕಾರಿಯಾಗಿ 4 ವರ್ಷದ ಬಾಲಕ ನೇಮಕ
ಕಲಬುರಗಿ, ಜುಲೈ 14: ಸಾಮಾನ್ಯವಾಗಿ ಯಾವುದೇ ಮಠದ ಉತ್ತರಾಧಿಕಾರಿಯಾಗಿ ನೇಮಕಗೊಳ್ಳಬೇಕಾದರೆ ಜ್ಞಾನ, ತಿಳುವಳಿಕೆ ಸಂಪಾದನೆ, ಅನುಭವ ಹೊಂದಿರಬೇಕು ಮತ್ತು ಅದಕ್ಕೊಂದು ಸಮಯ ಮತ್ತು ವಯಸ್ಸಿನ ಮಿತಿ ಇರುತ್ತದೆ ಎಂದು ಹೇಳಲಾಗುತ್ತದೆ.
ಆದರೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕಾಳಗಿ ಪಟ್ಟಣದಲ್ಲಿರುವ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ ವಿಭಿನ್ನವಾಗಿದ್ದು, 4 ವರ್ಷ ವಯಸ್ಸಿನ ನೀಲಕಂಠಯ್ಯಸ್ವಾಮಿಯನ್ನು ನೇಮಿಸಲಾಗಿದೆ.
ಕಾಳಗಿ ಹಿರೇಮಠದ ಮಠದ ಪೀಠಾಧಿಪತಿಯಾಗಿದ್ದ ಶಿವಬಸವ ಶಿವಾಚಾರ್ಯ ಸ್ವಾಮೀಜಿ(45) ಇದೇ ಜುಲೈ 12ರಂದು ಲಿಂಗೈಕ್ಯರಾದರು. ಕಾಳಗಿ ಪಟ್ಟಣದಲ್ಲಿ ಲಿಂಗೈಕ್ಯ ಸ್ವಾಮೀಜಿಯ ಅಂತ್ಯಕ್ರಿಯೆ ನಡೆದಿದ್ದು, ಇದೇ ಸಂದರ್ಭದಲ್ಲಿ ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ನಾಲ್ಕು ವರ್ಷದ ಬಾಲಕನನ್ನು ಮುಂದಿನ ಮಠದ ಉತ್ತರಾಧಿಕಾರಿ ಎಂದು ಘೋಷಣೆ ಮಾಡಿ, ಕೆಲ ವಿಧಿ ವಿಧಾನಗಳನ್ನು ಕೂಡ ನೆರವೇರಿಸಲಾಯಿತು.

ಕಲಬುರಗಿ ಜಿಲ್ಲೆ ಹಿರೇನಾಗಾಂವ ಮಠದ ಲಿಂಗೈಕ್ಯರಾಗಿರುವ ಶಿವಬಸವ ಶಿವಾಚಾರ್ಯ ಸ್ವಾಮೀಜಿ ತಲೆಮೇಲಿದ್ದ ಹಸಿರು ಶಾಲು, ಕೈಯಲ್ಲಿದ್ದ ಬೆತ್ತವನ್ನು ಉತ್ತರಾಧಿಕಾರಿಯಾಗಿ ನೇಮಕವಾದ ನೀಲಕಂಠಯ್ಯಸ್ವಾಮಿಗೆ ಹಸ್ತಾಂತರ ಮಾಡಲಾಗಿದೆ.
ನಾಲ್ಕು ವರ್ಷದ ಬಾಲಕ ನೀಲಕಂಠಸ್ವಾಮಿ ಬೇರಾರು ಅಲ್ಲ, ಲಿಂಗ್ಯಕ್ಯರಾದ ಶಿವಬಸವ ಶಿವಾಚಾರ್ಯ ಸ್ವಾಮೀಜಿಯ ಪೂರ್ವಾಶ್ರಮದ ಸಹೋದರ ಗುರುನಂಜಯ್ಯ ಹಿರೇಮಠರ ಪುತ್ರ. ಇನ್ನೂ ಶಾಲೆಯ ಮೆಟ್ಟಿಲು ಹತ್ತದ ಬಾಲಕ ಇದೀಗ ಮಠದ ಉತ್ತರಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಸದ್ಯ ನೀಲಕಂಠಯ್ಯಸ್ವಾಮಿ ಮಠದ ಉತ್ತರಾಧಿಕಾರಿಯಾಗಿದ್ದರೂ ಕೂಡಾ, ಮಠದ ಉಸ್ತುವಾರಿಯನ್ನು ಬಾಲಕ ಹದಿನೆಂಟು ವರ್ಷದವನಾಗುವವರಗೆ ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು ನಿರ್ವಹಿಸಲಿದ್ದಾರೆ.
ಪುತ್ರವರ್ಗ ಪೀಠ ಪರಂಪರೆಯ ಮಠ
"ಶಿವಾಚಾರ್ಯ ಪರಂಪರೆಯಲ್ಲಿ ಎರಡು ರೀತಿಯ ಮಠಗಳಿವೆ. ಒಂದು ಪುತ್ರವರ್ಗ ಪೀಠ, ಮತ್ತೊಂದು ಶಿಷ್ಯ ಪರಂಪರೆಯ ಪೀಠ. ಪುತ್ರವರ್ಗ ಪೀಠ ಪರಂಪರೆಯಲ್ಲಿ, ಲಿಂಗ್ಯಕ್ಯರಾಗಿರುವ ಸ್ವಾಮೀಜಿಗಳ ಕುಟುಂಬದವರಲ್ಲಿ ಯಾರಾದರು ಇದ್ದರೆ, ಅವರನ್ನೇ ಮಠದ ಮುಂದಿನ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಲಾಗುತ್ತದೆ. ಅವರ ಕುಟುಂಬದಲ್ಲಿ ಯಾರೂ ಇರದಿದ್ದರೆ, ಇದ್ದರೂ ಸ್ವಾಮೀಜಿಗಳಾಗಲು ಆಸಕ್ತಿ ತೋರದಿದ್ದರೆ ಮಾತ್ರ ಬೇರೆಯವರನ್ನು ಮಠಕ್ಕೆ ಉತ್ತರಾಧಿಕಾರಿಯನ್ನಾಗಿ ನೇಮಿಸುವ ಪರಂಪರೆ ಇದೆ.''
"ಶಿಷ್ಯ ವರ್ಗದ ಪೀಠಗಳಲ್ಲಿ ಬೇರೆಯವರನ್ನು ಮಠದ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಲು ಅವಕಾಶವಿದೆ. ಕಾಳಗಿಯ ಸಂಸ್ಥಾನ ಹಿರೇಮಠ ಪುತ್ರವರ್ಗ ಪರಂಪರೆಯ ಮಠವಾಗಿದ್ದು, ಅವರ ಕುಟುಂಬದವರ ಒಪ್ಪಿಗೆ ಪ್ರಕಾರ, ನಾಲ್ಕು ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿಯನ್ನಾಗಿ ಮಾಡಲಾಗಿದೆಮ,'' ಎಂದು ಇಲ್ಲಿನ ಸ್ವಾಮೀಜಿಗಳು ತಿಳಿಸಿದ್ದಾರೆ.
ಸದ್ಯ ಪೀಠಾದಿಪತಿಯಾಗಿದ್ದವರು ಲಿಂಗ್ಯಕ್ಯರಾದ ಮೇಲೆ ಮಠದ ಪೀಠಾಧಿಪತಿ ಸ್ಥಾನವನ್ನು ಖಾಲಿ ಬಿಡಲು ಆಗುವುದಿಲ್ಲ. ಹೀಗಾಗಿ ಅವರ ಕುಟುಂಬದಲ್ಲಿದ್ದವರಿಗೆ ಪೀಠದ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಬೇಕಾಗುತ್ತದೆ. ಅವರ ಕುಟುಂಬದವರು ನಿರ್ಧಾರ ಮಾಡಿ ನೀಲಕಂಠಯ್ಯಸ್ವಾಮಿಗೆ ಉತ್ತರಾಧಿಕಾರಿ ನೇಮಕ ಮಾಡಲು ಒಪ್ಪಿಗೆ ನೀಡಿದ್ದರಿಂದ ಈ ಬಾಲಕನನ್ನು ಉತ್ತರಾಧಿಕಾರಿಯನ್ನಾಗಿ ಮಾಡಲಾಗಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications