ಅಡುಗೆಗೆ ಎಣ್ಣೆ ಹೆಚ್ಚಾಯಿತೆಂದು ಮಡದಿಯನ್ನೇ ಕೊಂದ ಪತಿ
ಕಲಬುರಗಿ, ಡಿಸೆಂಬರ್ 02 : ಅಡುಗೆ ಸರಿಯಾಗಿ ಮಾಡಿಲ್ಲವೆಂದು ಕಟ್ಟಿಕೊಂಡ ಮಡದಿಯ ಮೇಲೆ ಕುದಿಯುವ ಎಣ್ಣೆ ಸುರಿದು ಸಾಯಿಸಿದ್ದಾನೆ ಕರುಣಾಹೀನ ಪತಿ.
ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೇಲೋಗಿ ಗ್ರಾಮದಲ್ಲಿ ಪತ್ನಿ ಪ್ರಿಯಾಂಕಾ ಮಾಡಿದ ಅಡುಗೆಯಲ್ಲಿ ಎಣ್ಣೆ ಹೆಚ್ಚಾಗಿದೆ ಎಂಬ ಕಾರಣಕ್ಕೆ ಪತಿ ಭೀಮಾಶಂಕರ್ ಕುದಿಯುತ್ತಿದ್ದ ಅಡುಗೆಯಲ್ಲಿ ಎಣ್ಣೆಯನ್ನು ಪ್ರಿಯಾಂಕಾ ಮುಖಕ್ಕೆ ಎರಚಿದ್ದಾನೆ.

ಕುದಿಯುವ ಎಣ್ಣೆ ಬಿದ್ದು ತೀರ್ವ ಗಾಯಗೊಂಡಿದ್ದ ಪ್ರಿಯಾಂಕಾ ಅವರನ್ನು ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನವೆಂಬರ್ 26ರಂದು ನಡೆದಿದ್ದು, ನಾಲ್ಕು ದಿನ ಚಿಕಿತ್ಸೆ ನೀಡಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಪ್ರಿಯಾಂಕ ಇಂದು (ಡಿಸೆಂಬರ್ 02) ಕೊನೆ ಉಸಿರೆಳೆದಿದ್ದಾಳೆ.
ಶೇಕಡಾ 70ಕ್ಕೂ ಹೆಚ್ಚು ಸುಟ್ಟಗಾಯಗಳಾಗಿದ್ದು, ಮುಖದ ಭಾಗ, ಕಣ್ಣಿನ ರೆಪ್ಪೆ, ಕಿವಿ ಒಳಗೆ ಎಲ್ಲ ಬಿಸಿ ಎಣ್ಣೆ ಹೋಗಿ ದೇಹದ ಒಳ ಅಂಗಾಂಗಗಳಿಗೆ ತೀರ್ವ ಹಾನಿಯಾಗಿದ್ದ ಕಾರಣ ನಿಧನ ಹೊಂದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭೀಮಾಶಂಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications