ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದು ಹೀಗೆ..
ಕಲಬುರಗಿ, ಡಿಸೆಂಬರ್ 05 : ಜೆಡಿಎಸ್ ಪಕ್ಷ ಬಲವರ್ಧನೆಗಾಗಿ ರಾಜ್ಯ ಪ್ರವಾಸದಲ್ಲಿ ತೊಡಗಿರುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ತಮ್ಮ ಚುನವಾವಣಾ ಸ್ಪರ್ಧೆಗೆ ಇಳಿಯುವ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ ನಾನು ಟಿಕೆಟ್ ಗಾಗಿ ಬೇಡಿಕೆ ಇಟ್ಟಿಲ್ಲ, ಪಕ್ಷದ ಹಿರಿಯರು (ದೇವೇಗೌಡ, ಕುಮಾರಸ್ವಾಮಿ) ಸ್ಪರ್ಧಿಸಲು ಸೂಚನೆ ಕೊಟ್ಟರಷ್ಟೆ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ.
ಪಕ್ಷದ ಹಿರಿಯರು ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದಿದ್ದಾರಾ ಎಂಬ ಪ್ರಶ್ನೆಗೆ ಪರಿಪೂರ್ಣ ಉತ್ತರ ನೀಡದ ಪ್ರಜ್ವಲ್ "ಅವರು ಬೇಡ ಅಂದಿದ್ದಾರೆ ಅಂತಲೇ ತಿಳ್ಕೊಳ್ಳಿ' ಎಂದು ಅಡ್ಡ ಗೋಡೆಯ ಮೇಲೆ ದೀಪವಿಟ್ಟರು. ಚುನಾವಣೆಗೆ ಸ್ಪರ್ಧಿಸುವ ವಿಷಯ ಇನ್ನೂ ಜೀವ ಕಳೆದುಕೊಂಡಿಲ್ಲ ಎಂಬುದನ್ನು ಅವರ ಮಾತು ಸ್ಪಷ್ಟಪಡಿಸುತ್ತಿತ್ತು.

'ನಾನು ಸ್ಪರ್ದಿಸುವ ಮಾತು ಬಂದಿಲ್ಲಾ, ನನಗೆ ದೊಡ್ಡವರು ಸ್ಪರ್ದೆ ಮಾಡು ಅಂದ್ರೆ ಮಾಡ್ತೇನೆ, ಬೇಡಾ ಅಂದ್ರೆ ಇಲ್ಲಾ' ಎಂದು ಚೆಂಡನ್ನು ದೇವೇಗೌಡ, ಕುಮಾರಸ್ವಾಮಿ ಅವರ ಅಂಗಳಕ್ಕೆ ತಳ್ಳಿದರು.
'ಅಕಸ್ಮಾತ್ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಸಿಕ್ಕರೆ ನಾನು ಎಲ್ಲಿ ಸ್ಪರ್ದೆ ಮಾಡಬೇಕು ಅನ್ನೋದನ್ನು ಕೂಡಾ ಪಕ್ಷದ ಹಿರಿಯರೇ ಹೇಳ್ತಾರೆ ಎನ್ನುವ ಮೂಲಕ ತಮಗೆ ಸ್ಪರ್ಧಿಸುವ ಆಸೆ ಇದೆ ಎಂಬುದನ್ನು ಸೂಚ್ಯವಾಗಿಯೇ ಮಾಧ್ಯಮಗಳ ಮುಂದೆ ತೆರೆದಿಟ್ಟರು.
ಆದರೆ ಮತ್ತೆ ತಮ್ಮ ಮಾತಿನ ವರಸೆ ಬದಲಿಸಿ 'ಜನರ ಸೇವೆ ಮಾಡಲು ಶಾಸಕನೇ ಆಗಬೇಕು ಅಂತ ಇಲ್ಲಾ, ಶಾಸಕನಿಲ್ಲದೆ ಇದ್ದರು ಕೂಡಾ ಮಾಡಬಹುದು' ಎಂದರು.
ಪ್ರದಾನ ಕಾರ್ಯದರ್ಶಿಯಾದ ಮೇಲೆ ಹೈದ್ರಾಬಾದ್ ಕರ್ನಾಟಕಕ್ಕೆ ಮೊದಲ ಆಧ್ಯತೆ ನೀಡಿದ್ದೇನೆ, ಈ ಭಾಗದಲ್ಲಿ ಜೆಡಿಎಸ್ ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಮಾತು ಮುಗಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications