ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸವಕಲ್ಯಾಣದಲ್ಲಿ ಸಚಿವ ಸಂಪುಟ ಸಭೆ : ಯಡಿಯೂರಪ್ಪ

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಡಿಸೆಂಬರ್. 11 : 'ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಶರಣರ ನಾಡು ಬಸವ ಕಲ್ಯಾಣದಲ್ಲಿ ರಾಜ್ಯ ಸಚಿವ ಸಂಪುಟ ಸಭೆ' ನಡೆಸುತ್ತೇನೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು.

ಸೋಮವಾರ ಕಲಬುರಗಿಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಯ ವೀರಶೈವ ಲಿಂಗಾಯತ ನೌಕರರ ರಾಜ್ಯ ಮಟ್ಟದ ಸಭೆಯನ್ನು ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು.

ಜೇವರ್ಗಿ ವಿಧಾನ ಸಭಾ ಕ್ಷೇತ್ರ ಮತ್ತೆ ಬಿಜೆಪಿಗೆ ಸಿಗಬಹುದೇ?ಜೇವರ್ಗಿ ವಿಧಾನ ಸಭಾ ಕ್ಷೇತ್ರ ಮತ್ತೆ ಬಿಜೆಪಿಗೆ ಸಿಗಬಹುದೇ?

If BJP comes to power cabinet meeting in Basavakalyan says BSY

'ಚುನಾವಣೆ ಪ್ರಚಾರಕ್ಕಾಗಿ ಕೈಗೊಂಡಿರುವ ಪರಿವರ್ತನಾ ಯಾತ್ರೆ ಈಗಾಗಲೇ 89 ಕ್ಷೇತ್ರಗಳಲ್ಲಿ ಪೂರ್ಣಗೊಂಡಿದ್ದು, ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ' ಎಂದು ಹೇಳಿದರು.

ಕಲಬುರಗಿ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆಕಲಬುರಗಿ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ

'ಜನ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಗೊಂಡಿರುವುದು ಯಾತ್ರೆಗೆ ಸೇರುತ್ತಿರುವ ಜನ ಸಾಗರವೇ ನಿರೂಪಿಸುತ್ತಿದೆ. 2018ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಬಸವಕಲ್ಯಾಣದಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತೇನೆ' ಎಂದರು.

'ಎನ್‌ಇಕೆಎಸ್‌ಆರ್‌ಟಿಸಿಗೆ ನೀಡಲಾಗುತ್ತಿದ್ದ ಮೋಟಾರು ವಾಹನ ತೆರಿಗೆ ವಿನಾಯಿತಿ ಮುಂದುವರಿಸಬೇಕು. ಈಗಿನ ಕಾಂಗ್ರೆಸ್ ಸರ್ಕಾರ ಮುಂದುವರೆಸದಿದ್ದಲ್ಲಿ ಮುಂದೆ ತಾವು ಅಧಿಕಾರಕ್ಕೆ ಬಂದ ತಕ್ಷಣ ಈ ಕುರಿತು ಆದೇಶ ಹೊರಡಿಸಲಾಗುವುದು' ಎಂದು ಭರವಸೆ ನೀಡಿದರು.

English summary
Karnataka BJP president B.S.Yeddyurappa said, If BJP come to power cabinet meeting will organize in Basavakalyan, Bidar district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X